ಬ್ರೇಕಿಂಗ್ ನ್ಯೂಸ್
11-06-21 05:00 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 11: ರಾಜ್ಯದ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದ್ದು, ಆನ್ ಲೈನ್ ಮೂಲಕ ಪರೀಕ್ಷೆ ನಡೆಸಲಾಗುವುದು ಎಂದು ಶಿಕ್ಷಣ ಇಲಾಖೆ ಮಾಹಿತಿ ನೀಡಿದೆ.
ಎಲ್ಲಾ ಕಾಲೇಜುಗಳಿಗೆ ಇಲಾಖೆ ಸುತ್ತೋಲೆ ಹೊರಡಿಸಿದ್ದು, ಆನ್ಲೈನ್ ಪರೀಕ್ಷೆ ನಡೆಸಲು ತೀರ್ಮಾನಿಸಿರುವುದಾಗಿ ತಿಳಿಸಿದೆ. ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಎರಡು ವಿಷಯಗಳಿಗೆ ಪರೀಕ್ಷೆ ನೀಡಲು ಸೂಚನೆ ನೀಡಲಾಗಿದೆ.
ಈ ಹಿಂದೆ ಪ್ರಥಮ ಪಿಯುಸಿ ವಿದ್ಯಾರ್ಥಿಗಳು ಪಾಸ್ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಿಸಿದ್ದರು. ಆದರೆ ಇದೀಗ ಆನ್ಲೈನ್ ಪರೀಕ್ಷೆ ಕಡ್ಡಾಯ ಎಂದು ತಿಳಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸುವುದಿಲ್ಲ. ಆದರೆ ಪ್ರಥಮ ಪಿಯುಸಿಗೆ ಪರೀಕ್ಷೆ ನಡೆಸಲಾಗುವುದು ಎಂದು ಇಲಾಖೆ ತಿಳಿಸಿದೆ.

ಪಿಯು ಬೋರ್ಡ್, ಎರಡು ಮಾದರಿಯ ಪ್ರಶ್ನೆ ಪತ್ರಿಕೆ ರೂಪಿಸಿದ್ದು, ಪಿಯು ಬೋರ್ಡ್ ವೆಬ್ಸೈಟ್ನಲ್ಲಿ ಮಾದರಿ ಪ್ರಶ್ನೆ ಪತ್ರಿಕೆ ಲಭ್ಯವಿರಲಿದೆ.
ಇಲಾಖೆಯ ವೆಬ್ಸೈಟ್ನಲ್ಲಿರುವ ಪ್ರಶ್ನೆ ಪತ್ರಿಕೆಯನ್ನು ವಿದ್ಯಾರ್ಥಿಗಳು ಡೌನ್ಲೋಡ್ ಮಾಡಿಕೊಂಡು ಉತ್ತರ ಬರೆದು ವಾಟ್ಸ್ಆಪ್, ಇಮೇಲ್ ಅಂಚೆ ಮೂಲಕ ಉಪನ್ಯಾಸಕರಿಗೆ ಉತ್ತರ ಪತ್ರಿಕೆ ಕಳುಹಿಸಬೇಕು.

ಉಪನ್ಯಾಸಕರು ಏನು ಮಾಡಬೇಕು?
ವಿದ್ಯಾರ್ಥಿಗಳು ಕಳುಹಿಸಿದ ಉತ್ತರ ಪತ್ರಿಕೆಗಳನ್ನು ಉಪನ್ಯಾಸಕರು ಮೌಲ್ಯಮಾಪನ ಮಾಡಿ Students Achievement Tracking System ನಲ್ಲಿ ಫಲಿತಾಂಶವನ್ನು ಅಪ್ಲೋಡ್ ಮಾಡಬೇಕು.
ಅಸೆಸ್ಮೆಂಟ್ ವಿಧದಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಮೊದಲ ಅಸೆಸ್ಮೆಂಟ್ಗೆ ಜೂನ್ 20 ಕೊನೆಯ ದಿನವಾಗಿದ್ದು, ಉಪನ್ಯಾಸಕರು ಜೂನ್ 25ರೊಳಗೆ ಮೌಲ್ಯಮಾಪನ ಮಾಡುವಂತೆ ಸೂಚಿಸಲಾಗಿದೆ. ಎರಡನೇ ಅಸೆಸ್ಮೆಂಟ್ಗೆ ಜೂನ್ 26 ಕೊನೆ ದಿನವಾಗಿದ್ದು, ಜುಲೈ 5ರ ಒಳಗೆ ಮೌಲ್ಯಮಾಪನ ನಡೆಸಲಾಗುತ್ತದೆ.
Online Exam to be Conducted for 1st PUC Students says Karnataka Education Department
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 03:10 pm
HK News Staffer
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
Ayatollah Khamenei Killed: ಇರಾನ್ ಪರಮೋಚ್ಚ ನಾಯಕ...
01-03-26 09:52 am
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm