ಬ್ರೇಕಿಂಗ್ ನ್ಯೂಸ್
12-06-21 11:37 am Headline Karnataka News Network ಕರ್ನಾಟಕ
ಚಿಕ್ಕಬಳ್ಳಾಫುರ, ಜೂನ್ 12: ಲಾಕ್ಡೌನ್ ಕಾರಣದಿಂದಾಗಿ ಟೊಮ್ಯಾಟೊ ಧಾರಣೆಯಲ್ಲಿ ತೀವ್ರ ಕುಸಿತವಾಗಿದ್ದು ರೈತರು ತಾವು ಬೆಳೆದ ಟೊಮ್ಯಾಟೋವನ್ನು ರಸ್ತೆಗೆ ಸುರಿದು ಹೋಗಿದ್ದಾರೆ.
ಟೊಮ್ಯಾಟೋವನ್ನು ಕೊಳ್ಳುವವರೇ ಇಲ್ಲದೆ, ಚಿಕ್ಕಬಳ್ಳಾಪುರ ನಗರದ ಮಾರುಕಟ್ಟೆ ಹೊರಗಡೆ ರಸ್ತೆಯಲ್ಲಿ ಸುರಿಯಲಾಗಿದೆ. ರಸ್ತೆಗೆ ಸುರಿದಿರುವ ಟೊಮ್ಯಾಟೋ ರಾಶಿ ದನಗಳಿಗೂ ಬೇಡವಾಗಿದೆ. ರಾಶಿ ಹಾಕಿದ ಹಸಿ ಹಸಿ ಟೊಮ್ಯಾಟೋ ಹಣ್ಣುಗಳನ್ನು ಹಸುಗಳು ತಿನ್ನುತ್ತಿದ್ದು ಹೊಟ್ಟೆ ತುಂಬಿದ ಬಳಿಕ ಹಾಗೇ ಬಿಟ್ಟುಬಿಟ್ಟಿದೆ.
ಚಿಕ್ಕಬಳ್ಳಾಪುರದ ಮಾರುಕಟ್ಟೆಯಲ್ಲಿ 15 ಕೇಜಿಯ ಟೊಮ್ಯಾಟೋ ಬಾಕ್ಸಿಗೆ ಕೇವಲ 50 ರೂ. ಬೆಲೆಯಿದ್ದು ಅಷ್ಟಕ್ಕೂ ಕೊಳ್ಳುವವರಿಲ್ಲದಂತಾಗಿದೆ. ಹೀಗಾಗಿ ರಾಶಿ ರಾಶಿ ಟೊಮ್ಯಾಟೋಗಳನ್ನು ಎಪಿಎಂಸಿ ಮಾರುಕಟ್ಟೆಗೆ ರೈತರು ಹೊರಗಡೆ ಸುರಿದು ಹೋಗಿದ್ದಾರೆ. ಕೇಜಿ ಟೊಮ್ಯಾಟೋ ಬೆಲೆ 3 ರೂಪಾಯಿಗೆ ಕುಸಿದಿದ್ದು ಪಿಕಪ್, ಟೆಂಪೋಗಳಲ್ಲಿ ಮಾರುಕಟ್ಟೆಗೆ ತಂದವರು ವಾಹನ ಬಾಡಿಗೆಯ ಹಣವೂ ಸಿಗದೆ ಕಂಗಾಲಾಗಿದ್ದಾರೆ.
ಚಿಕ್ಕಬಳ್ಳಾಪುರ ನಗರದ ಎಪಿಎಂಸಿ ಮಾರುಕಟ್ಟೆಯ ಹೊರಗಡೆಯಲ್ಲಿ ರಾಶಿಗಟ್ಟಲೆ ಟೊಮ್ಯಾಟೋ ಬಿದ್ದಿದ್ದು ರೈತರ ಸ್ಥಿತಿ ಹೀನಾಯ ಎನ್ನುವಂತಾಗಿದೆ.
ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗದಲ್ಲಿ ಅತಿ ಹೆಚ್ಚು ಟೊಮ್ಯಾಟೊ ಬೆಳೆಯುತ್ತಿದ್ದು ಈಗ ಬೆಳೆಯ ಸೀಸನ್. ಆದರೆ, ಲಾಕ್ಡೌನ್ ಕಾರಣದಿಂದಾಗಿ ಟೊಮ್ಯಾಟೋಗೆ ಬೆಲೆ ಇಲ್ಲದೆ, ರೈತರು ಕಂಗಾಲಾಗಿದ್ದು ವಾಹನಗಳಲ್ಲಿ ತಂದ ಬೆಳೆಯನ್ನು ದಿನವೂ ರಸ್ತೆಯಲ್ಲೇ ಸುರಿದು ಹೋಗುತ್ತಿದ್ದಾರೆ. ಕೈಗೆ ಬಂದ ತುತ್ತು ಬಾಯಿಗಿಲ್ಲದ ಪರಿಸ್ಥಿತಿ. ಸರಕಾರದ ಕಡೆಯಿಂದ ರೈತರಿಂದ ನೇರವಾಗಿ ಖರೀದಿಸಿ ತಲುಪಿಸುವ ಕಾರ್ಯ ಮಾಡಬಹುದು. ಆದರೆ, ಎಪಿಎಂಸಿಯಾಗಲೀ, ಇತರೇ ಮಾರುಕಟ್ಟೆ ವ್ಯಾಪಾರಸ್ಥರಾಗಲೀ ಆ ಕೆಲಸವನ್ನು ಮಾಡಿಲ್ಲ.
Video: Click
Supply chain distortion of farm produce owing to the lockdown over COVID-19 has hurt both farmers and consumers. There have been reports from across the state of farmers, in despair, destroying their own crop in chikkaballapur
25-06-25 10:32 pm
Bangalore Correspondent
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
Assault Case, Anant Kumar Hegde, Accident: ಹಲ...
25-06-25 01:09 pm
Bangalore, Reels, Death: 12 ವರ್ಷದ ಪ್ರೀತಿ ಜಗಳದ...
24-06-25 10:42 pm
Chikkamagaluru Student Suicide, Uniform: ಚಿಕ್...
24-06-25 10:15 pm
25-06-25 10:05 pm
HK News Desk
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
ಇರಾನ್ –ಇಸ್ರೇಲ್ ಕದನ ವಿರಾಮ ಘೋಷಿಸಿದ ಡೊನಾಲ್ಡ್ ಟ್ರ...
24-06-25 12:03 pm
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
25-06-25 10:46 pm
Mangalore Correspondent
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
Sixth Sense Beauty Salon, Raid, Mangalore, Po...
24-06-25 09:49 pm
Mangalore, College Student Suicide: ಕಲಿಕೆಯಲ್ಲ...
24-06-25 01:36 pm
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
25-06-25 11:11 pm
Mangalore Correspondent
Social Media, Woman Murder, Affair, Mandya: ಪ...
25-06-25 04:06 pm
ಸ್ನೇಹಿತನಿಂದ 8 ಲಕ್ಷ ರೂ. ಸಾಲ ; ಕೊಟ್ಟ ಸಾಲ ತೀರಿಸಲ...
24-06-25 09:51 pm
Bangalore Chit Fund Scam, 10 Crore: ಚೀಟಿ ಹೆಸ್...
24-06-25 07:39 pm
Davanagere Rape: ಮನೆಯ ಮುಂದೆ ಆಟವಾಡುತ್ತಿದ್ದ 7 ವ...
23-06-25 08:51 pm