ಬ್ರೇಕಿಂಗ್ ನ್ಯೂಸ್
16-06-21 05:52 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 16: ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬದಲಾಯಿಸಲು ಕೆಲವು ಶಾಸಕರು ದೆಹಲಿಗೆ ಹೋಗಿದ್ದು ನಿಜ. ಪಕ್ಷದಲ್ಲಿ ಈ ಬಗ್ಗೆ ಗೊಂದಲ ಆಗಿರುವುದೂ ನಿಜ ಎಂದು ಹಿರಿಯ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಬಿರುಸು ಪಡೆದಿರುವಾಗಲೇ ಹಿರಿಯ ಸಚಿವರಾಗಿರುವ ಈಶ್ವರಪ್ಪ ಈ ರೀತಿಯ ಹೇಳಿಕೆ ಕೊಟ್ಟು ಅಚ್ಚರಿ ಸೃಷ್ಟಿಸಿದ್ದಾರೆ.

ಈ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಈಶ್ವರಪ್ಪ, ಕೆಲವು ಶಾಸಕರು ದೆಹಲಿಗೆ ಹೋಗಿ ಯಡಿಯೂರಪ್ಪ ಅವರನ್ನು ಬದಲಿಸಬೇಕೆಂದು ಬೇಡಿಕೆ ಇಟ್ಟಿರುವುದು ಸತ್ಯ. ಸಂಪೂರ್ಣ ಅಸತ್ಯವೆಂದು ನಾನು ಹೇಳುವುದಿಲ್ಲ. ಕೆಲವು ಶಾಸಕರು ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಇರಬೇಕು ಎಂದು ಆಗ್ರಹಿಸುತ್ತಾರೆ. ಇನ್ನು ಕೆಲವು ಮಂದಿ ಬದಲಾವಣೆ ಆಗಬೇಕೆಂದು ಹೇಳುತ್ತಿದ್ದಾರೆ. ಈ ಬಗ್ಗೆ ದೆಹಲಿ ವರಿಷ್ಠರು ನಿರ್ಧಾರ ತೆಗೆದುಕೊಳ್ಳುತ್ತಾರೆ. ವರಿಷ್ಠರು ಏನು ಹೇಳುತ್ತಾರೋ ಅದನ್ನು ನಾವು ಪಾಲನೆ ಮಾಡುತ್ತೇವೆ ಎಂದು ಹೇಳಿದ್ದಾರೆ.
ಪಕ್ಷದಲ್ಲಿ ನಾಯಕತ್ವದ ವಿಚಾರದಲ್ಲಿ ಗೊಂದಲ ಇರುವುದು ನಿಜ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಬರುತ್ತಿದ್ದಾರೆ. ಅವರು ಬಂದು ಮಾತುಕತೆ ನಡೆಸಿದ ಬಳಿಕ ಗೊಂದಲ ಬಗೆಹರಿಯಲಿದೆ. ಮುಖ್ಯಮಂತ್ರಿ ಬದಲಾವಣೆ ವಿಚಾರದ ಬಗ್ಗೆ ವರಿಷ್ಠರು ನಿರ್ಣಯ ತೆಗೆದುಕೊಳ್ಳಲಿದ್ದಾರೆ. ಏನು ಬೇಕಾದ್ರೂ ಆಗಬಹುದು ಎಂದು ಅಡ್ಡಗೋಡೆ ಮೇಲೆ ದೀಪವಿಟ್ಟ ರೀತಿ ಈಶ್ವರಪ್ಪ ಹೇಳಿಕೆ ನೀಡಿದ್ದಾರೆ.

ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಿದ್ದು, ಮೂರು ದಿನಗಳ ಕಾಲ ಶಾಸಕರು, ಸಚಿವರ ಜೊತೆ ಮಾತುಕತೆ ನಡೆಸಲಿದ್ದಾರೆ. ವಿರೋಧಿ ಬಣದ ಶಾಸಕರು ಯಡಿಯೂರಪ್ಪ ಅವರನ್ನು ಬದಲಿಸಲು ಒತ್ತಡ ಹೇರುತ್ತಿದ್ದರೆ, ಯಡಿಯೂರಪ್ಪ ಪರವಾಗಿರುವ ಶಾಸಕರು ಅವರನ್ನೇ ಮುಂದುವರಿಸಲು ಪಟ್ಟು ಹಿಡಿದಿದ್ದಾರೆ. ಈ ರೀತಿಯ ಬೆಳವಣಿಗೆ ಮಧ್ಯದಲ್ಲಿ ಈಶ್ವರಪ್ಪ, ಗೊಂದಲ ಇರುವುದು ನಿಜ. ಅಲ್ಲದೆ ನಾಯಕತ್ವದ ವಿಚಾರದಲ್ಲಿ ಏನು ಬೇಕಾದ್ರೂ ಆಗಬಹುದು ಅನ್ನುವ ಮೂಲಕ ಬದಲಾವಣೆ ಆಶಯವನ್ನು ಹೊರಹಾಕಿದ್ದಾರೆ.
Senior Karnataka BJP minister K S Eshwarappa on Wednesday admitted that there were calls within the party for Chief Minister B S Yediyurappa’s removal, and said that the high command would take a final decision on this.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 06:51 pm
HK News Staffer
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm