ಬ್ರೇಕಿಂಗ್ ನ್ಯೂಸ್
18-06-21 03:24 pm Headline Karnataka News Network ಕರ್ನಾಟಕ
ಬೆಂಗಳೂರು, ಜೂನ್ 18 : ಬಿ.ಎಸ್ ಯಡಿಯೂರಪ್ಪನವರು ಈ ಹಿಂದೆಯೂ ತಮ್ಮ ಮಕ್ಕಳ ಭ್ರಷ್ಟಾಚಾರದಿಂದಲೇ ಜೈಲಿಗೆ ಹೋಗಿ ಬರುವಂತಾಗಿತ್ತು. ಈ ಸಲ ಕೂಡ ಅವರು ಮತ್ತೆ ಜೈಲಿಗೆ ಹೋಗುವ ಪರಿಸ್ಥಿತಿ ಬರಬಹುದೇನೋ ಎಂಬ ಆತಂಕ ನನಗಿದೆ. ಅದಕ್ಕಾಗಿ ಪಕ್ಷದ ಮತ್ತು ರಾಜ್ಯದ ಹಿತದೃಷ್ಟಿಯಿಂದ ಸರ್ಕಾರದಲ್ಲಿ ಆಗುತ್ತಿರುವ ಅಕ್ರಮಗಳನ್ನು ವರಿಷ್ಠರ ನಾಯಕರ ಗಮನಕ್ಕೆ ತರಲು ಪ್ರಯತ್ನ ಮಾಡಿದ್ದೇನೆ ಎಂದು ವಿಧಾನ ಪರಿಷತ್ ಸದಸ್ಯ, ಹಿರಿಯ ನಾಯಕ ಹೆಚ್. ವಿಶ್ವನಾಥ್ ಮತ್ತೆ ಗುಡುಗಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನೀರಾವರಿ ಇಲಾಖೆಯಲ್ಲಿ 20 ಸಾವಿರ ಕೋಟಿ ರೂಪಾಯಿ ಟೆಂಡರ್ ಕರೆದು ತರಾತುರಿಯಲ್ಲಿ ಅಂಗೀಕಾರ ಮಾಡಿದ್ದಾರೆ, ವಿವಿಧ ಇಲಾಖೆಗಳಲ್ಲಿ, ಸಚಿವರ ಕೆಲಸಗಳಲ್ಲಿ ಸಿಎಂ ಪುತ್ರ ವಿಜಯೇಂದ್ರ ಹಸ್ತಕ್ಷೇಪ ಮಾಡುತ್ತಿದ್ದಾರೆ. ಇದು ಕಿಕ್ ಬ್ಯಾಕ್ ಸರ್ಕಾರ ಎಂದು ಕಿಡಿಕಾರಿದರು. ಸಚಿವರ ಖಾತೆಗಳಲ್ಲಿ ವಿಜಯೇಂದ್ರ ಹಸ್ತಕ್ಷೇಪ ಮಾಡುತ್ತಿರುವುದು ಇಡೀ ರಾಜ್ಯಕ್ಕೆ ಗೊತ್ತಿದೆ. ಭದ್ರಾ ಮೇಲ್ದಂಡೆ ಯೋಜನೆ, ಕಾವೇರಿ ನೀರಾವರಿ ನಿಗಮದಲ್ಲಿ ಅಕ್ರಮ ನಡೆದಿದೆ, ಇದೇನು ಕಾಂಟ್ರಾಕ್ಟ್ ಓರಿಯೆಂಟೆಡ್ ಸರ್ಕಾರನಾ ಎಂದು ವಿಶ್ವನಾಥ್ ಪ್ರಶ್ನಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಸರ್ಕಾರದ ವಿರುದ್ಧ ಯಾರೂ ಮಾತನಾಡುತ್ತಿಲ್ಲ. ನೀವೊಬ್ಬರೇ ಹೀಗೆ ಆರೋಪ ಮಾಡುತ್ತಿದ್ದೀರಿ, ಅಧಿಕಾರ ಸಿಗದೆ ಮಾತನಾಡುತ್ತಿದ್ದೀರಿ ಎಂಬ ಮಾತುಗಳು ಕೇಳಿಬರುತ್ತಿದೆಯಲ್ಲವೇ ಎಂದು ಕೇಳಿದಾಗ ವಿಶ್ವನಾಥ್, ಈ ಸರ್ಕಾರ ಅಸ್ತಿತ್ವಕ್ಕೆ ಬರಲು ನಾನು ಕೂಡ ಕಾರಣ, ನನಗೆ ಅಧಿಕಾರ ಸಿಗಬೇಕೆಂಬ ಆಸೆಯಿಲ್ಲ. ಆದರೆ ಕೆಲವರ ಹಣ-ಅಧಿಕಾರ ದಾಹದಿಂದ ಪಕ್ಷ ಹಾಳಾಗಿ ಹೋಗಬಾರದು ಎಂಬುದು ನನ್ನ ಉದ್ದೇಶವಷ್ಟೆ, ಇನ್ನು ಸಿಎಂ ಮತ್ತು ಅವರ ಕುಟುಂಬದವರ ಬಗ್ಗೆ ಮಾತನಾಡಲು ಬಹುತೇಕ ಸಚಿವರು, ಶಾಸಕರಿಗೆ ಧೈರ್ಯವಿಲ್ಲವಷ್ಟೆ. ಇತ್ತೀಚೆಗೆ ಈಶ್ವರಪ್ಪ ಏಕೆ ರಾಜ್ಯಪಾಲರಿಗೆ ದೂರು ಕೊಟ್ಟರು ಎಂದು ಪ್ರಶ್ನಿಸಿದರು. ಇದಲ್ಲದೆ, ಸುದ್ದಿಗೋಷ್ಠಿಯಲ್ಲಿ ಪೂರಕ ದಾಖಲೆಗಳನ್ನು ಕೂಡ ಬಿಡುಗಡೆ ಮಾಡಿದರು.

ಬಿ.ವೈ ವಿಜಯೇಂದ್ರ ವಿರುದ್ಧ ಇಡಿಯಲ್ಲಿ ಪ್ರಕರಣವಿದೆ, ಹಾಗಾಗಿ ಆಗಾಗ ದೆಹಲಿಗೆ ಹೋಗಿ ಬರುತ್ತಿದ್ದಾರೆ. ಬಿಜೆಪಿ ಯಾವುದೇ ಕುಟುಂಬದ ಪಾರ್ಟಿಯಲ್ಲ. ಸರ್ಕಾರ ಯಾರ ಆಸ್ತಿಯೂ ಅಲ್ಲ, ಇದು ಜನರದ್ದು ಎಂದರು.

ರೇಣುಕಾಚಾರ್ಯ, ವಿಶ್ವನಾಥ್, ಹಾಲಪ್ಪ ಬಗ್ಗೆ ವ್ಯಂಗ್ಯ
ಇನ್ನು ತಮ್ಮ ವಿರುದ್ಧ ನಿನ್ನೆ ಹರಿಹಾಯ್ದಿದ್ದ ಎಂ.ಪಿ ರೇಣುಕಾಚಾರ್ಯ ಅವರಿಗೆ ನರ್ಸ್ ಜಯಲಕ್ಷ್ಮಿ ಪ್ರಕರಣದಲ್ಲಿ ಏನಾಯ್ತು ? ಎಸ್.ಆರ್ ವಿಶ್ವನಾಥ್ ಬಚ್ಚಾ, ಇವತ್ತು ನನ್ನಂಥವರ ತ್ಯಾಗದಿಂದಲೇ ಬಿಡಿಎ ಅಧ್ಯಕ್ಷನಾಗಿ ಕೋಟಿ ಕೋಟಿ ದೋಚುತ್ತಿದ್ದಾನೆ. ಇನ್ನು ಹಾಲಪ್ಪ ಸ್ನೇಹಿತನ ಮನೆಗೆ ಊಟಕ್ಕೆ ಹೋಗಿ ಆತನ ಪತ್ನಿಯ ಮೇಲೆಯೇ ಅತ್ಯಾಚಾರ ಮಾಡಿದವ, ಸಿದ್ದರಾಮಯ್ಯನವರೇ ನಾನು ನಿಮಗೆ ಅದೆಷ್ಟು ದ್ರಾಕ್ಷಿ ತಿನ್ನಿಸಿದ್ದೇನೆ ಎಂದು ಬಹಿರಂಗವಾಗಿಯೇ ವಿಶ್ವನಾಥ್ ವ್ಯಂಗ್ಯವಾಡಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 02:29 pm
HK News Staffer
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm
ಮುಕ್ಕ ಶ್ರೀನಿವಾಸ್ ಕಾಲೇಜು ಎಂಬಿಬಿಎಸ್ ವಿದ್ಯಾರ್ಥಿನ...
15-07-26 01:17 pm