ಬ್ರೇಕಿಂಗ್ ನ್ಯೂಸ್
19-06-21 02:27 pm Headline Karnataka News Network ಕರ್ನಾಟಕ
ದಾವಣಗೆರೆ, ಜೂನ್ 19: ಕೊರೊನಾ ಎರಡನೇ ಅಲೆ ಮುಕ್ತಾಯದ ಹಂತದಲ್ಲಿದೆ. ಆದರೆ ಮುಗಿದಿಲ್ಲ. ಜತೆಗೆ ಮೂರನೇ ಅಲೆಯ ಭೀತಿ ಕೂಡ ಇದೆ. ಹಾಗಾಗಿ ಡಿಸೆಂಬರ್ ವರೆಗೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲ್ಲ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.
ಸೋಮವಾರ ಸಂಜೆ ನಾಲ್ಕು ಗಂಟೆಗೆ ರಾಜ್ಯ ಸಚಿವ ಸಂಪುಟದ ಸಭೆ ನಡೆಯಲಿದೆ. ಅಲ್ಲಿ ಈ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳುತ್ತೇವೆ’ ಎಂದು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.
ಟೆಂಡರ್ ಆರೋಪ ಮುಗಿದು ಹೋಗಿರೋದು. ಇಲಾಖೆಯ ಕಾರ್ಯದರ್ಶಿಗಳು, ಮುಖ್ಯಮಂತ್ರಿ ಸ್ಪಷ್ಟನೆ ನೀಡಿಯಾಗಿದೆ. ಮತ್ತೆ ಕೇಳಬೇಡಿ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬಿಜೆಪಿ ಒಂದು ಕುಟುಂಬ ಇದ್ದಂತೆ. ಒಂದು ರಾಜಕೀಯ ಪಕ್ಷದಲ್ಲಿ ಸ್ವಾಭಾವಿಕವಾಗಿ ಸಣ್ಣಪುಟ್ಟ ಸಮಸ್ಯೆಗಳು ಇದ್ದೇ ಇರುತ್ತವೆ. ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ಇಲ್ಲಿ ಬಂದು ನಾಲ್ಕು ಗೋಡೆಗಳ ಮಧ್ಯೆ ಕುಳಿತು ಶಾಸಕರಲ್ಲಿ ಮಾತನಾಡಿ ಎಲ್ಲ ಸಮಸ್ಯೆಗಳನ್ನು ಪರಿಹರಿಸಿ ಹೋಗಿದ್ದಾರೆ’ ಎಂದರು.
ಈ ರೀತಿ ನಾಲ್ಕು ಗೋಡೆಗಳ ಮಧ್ಯೆ ಕುಳಿತು ಮಾತನಾಡುವ ಅವಕಾಶ ಯಾವ ಪಕ್ಷದಲ್ಲಿ ಇದೆ? ಎಲ್ಲ ಶಾಸಕರು ಅಭಿಪ್ರಾಯ ತಿಳಿಸಿದ್ದಾರೆ. ಕೇವಲ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆ ನಡೆದಿದ್ದಲ್ಲ. ಕೊರೊನಾ ನಿಯಂತ್ರಣ ಬಗ್ಗೆ ಚರ್ಚೆ ಮಾಡಿದ್ದೇವೆ. ಪಕ್ಷವನ್ನು ಹೇಗೆ ಬಲಪಡಿಸಬೇಕು ಎಂಬ ಚರ್ಚೆ ಮಾಡಿದ್ದೇವೆ. ಮುಂದಿನ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆದಿದೆ. ಪರಿಸರದ ಬಗ್ಗೆ ಚರ್ಚೆಯಾಗಿದೆ. ಪ್ಲಾಸ್ಟಿಕ್ ಮುಕ್ತ ಮಾಡುವ ಬಗ್ಗೆ ಚರ್ಚೆಯಾಗಿದೆ’ ಎಂದು ಹೇಳಿದರು.
ಎಲ್ಲ ಬಡವರಿಗೆ ಉಚಿತ ಪಡಿತರ, ಎಲ್ಲರಿಗೂ ಉಚಿತ ಲಸಿಕೆ ನೀಡುವ ಪ್ರಧಾನಿ ಮೋದಿ ಅವರ ಹೆಜ್ಜೆಯನ್ನು ಸ್ವಾಗತಿಸಿದ್ದೇವೆ. ಅದೇ ರೀತಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊರೊನಾಕ್ಕೆ ಬಲಿಯಾದವರಿಗೆ ₹1 ಲಕ್ಷ ಘೋಷಣೆ ಮಾಡಿರುವುದು ದೇಶದಲ್ಲಿ ಮಾದರಿಯಾದುದು. ಅದಕ್ಕೂ ಅಭಿನಂದನೆ ಸಲ್ಲಿಸಿದ್ದೇವೆ’ ಎಂದು ತಿಳಿಸಿದರು.
RDPR minister KS Eshwarappa said the Karnataka government is planning to postpone the taluk and zilla panchayat elections due to the COVID-19 pandemic.
01-03-26 09:20 pm
HK News Staffer
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
ಖಮೇನಿ ಹತ್ಯೆ ಖಂಡನೀಯ, ಇರಾನ್ ಮೇಲಿನ ಅಮೆರಿಕ ಯುದ್ಧ...
01-03-26 04:51 pm
02-03-26 06:51 pm
HK News Staffer
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
01-03-26 08:37 pm
HK News Staffer
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
Mangalore Sujith Madur: ಕೌನ್ಸಿಲರ್ ಸುಜಿತ್ ಮಾಡೂ...
27-02-26 08:52 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm