ಬ್ರೇಕಿಂಗ್ ನ್ಯೂಸ್
19-06-21 02:27 pm Headline Karnataka News Network ಕರ್ನಾಟಕ
ದಾವಣಗೆರೆ, ಜೂನ್ 19: ಕೊರೊನಾ ಎರಡನೇ ಅಲೆ ಮುಕ್ತಾಯದ ಹಂತದಲ್ಲಿದೆ. ಆದರೆ ಮುಗಿದಿಲ್ಲ. ಜತೆಗೆ ಮೂರನೇ ಅಲೆಯ ಭೀತಿ ಕೂಡ ಇದೆ. ಹಾಗಾಗಿ ಡಿಸೆಂಬರ್ ವರೆಗೆ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ನಡೆಸಲ್ಲ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.
ಸೋಮವಾರ ಸಂಜೆ ನಾಲ್ಕು ಗಂಟೆಗೆ ರಾಜ್ಯ ಸಚಿವ ಸಂಪುಟದ ಸಭೆ ನಡೆಯಲಿದೆ. ಅಲ್ಲಿ ಈ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳುತ್ತೇವೆ’ ಎಂದು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.
ಟೆಂಡರ್ ಆರೋಪ ಮುಗಿದು ಹೋಗಿರೋದು. ಇಲಾಖೆಯ ಕಾರ್ಯದರ್ಶಿಗಳು, ಮುಖ್ಯಮಂತ್ರಿ ಸ್ಪಷ್ಟನೆ ನೀಡಿಯಾಗಿದೆ. ಮತ್ತೆ ಕೇಳಬೇಡಿ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಬಿಜೆಪಿ ಒಂದು ಕುಟುಂಬ ಇದ್ದಂತೆ. ಒಂದು ರಾಜಕೀಯ ಪಕ್ಷದಲ್ಲಿ ಸ್ವಾಭಾವಿಕವಾಗಿ ಸಣ್ಣಪುಟ್ಟ ಸಮಸ್ಯೆಗಳು ಇದ್ದೇ ಇರುತ್ತವೆ. ನಮ್ಮ ಪಕ್ಷದ ರಾಷ್ಟ್ರೀಯ ನಾಯಕರು ಇಲ್ಲಿ ಬಂದು ನಾಲ್ಕು ಗೋಡೆಗಳ ಮಧ್ಯೆ ಕುಳಿತು ಶಾಸಕರಲ್ಲಿ ಮಾತನಾಡಿ ಎಲ್ಲ ಸಮಸ್ಯೆಗಳನ್ನು ಪರಿಹರಿಸಿ ಹೋಗಿದ್ದಾರೆ’ ಎಂದರು.
ಈ ರೀತಿ ನಾಲ್ಕು ಗೋಡೆಗಳ ಮಧ್ಯೆ ಕುಳಿತು ಮಾತನಾಡುವ ಅವಕಾಶ ಯಾವ ಪಕ್ಷದಲ್ಲಿ ಇದೆ? ಎಲ್ಲ ಶಾಸಕರು ಅಭಿಪ್ರಾಯ ತಿಳಿಸಿದ್ದಾರೆ. ಕೇವಲ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆ ನಡೆದಿದ್ದಲ್ಲ. ಕೊರೊನಾ ನಿಯಂತ್ರಣ ಬಗ್ಗೆ ಚರ್ಚೆ ಮಾಡಿದ್ದೇವೆ. ಪಕ್ಷವನ್ನು ಹೇಗೆ ಬಲಪಡಿಸಬೇಕು ಎಂಬ ಚರ್ಚೆ ಮಾಡಿದ್ದೇವೆ. ಮುಂದಿನ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆದಿದೆ. ಪರಿಸರದ ಬಗ್ಗೆ ಚರ್ಚೆಯಾಗಿದೆ. ಪ್ಲಾಸ್ಟಿಕ್ ಮುಕ್ತ ಮಾಡುವ ಬಗ್ಗೆ ಚರ್ಚೆಯಾಗಿದೆ’ ಎಂದು ಹೇಳಿದರು.
ಎಲ್ಲ ಬಡವರಿಗೆ ಉಚಿತ ಪಡಿತರ, ಎಲ್ಲರಿಗೂ ಉಚಿತ ಲಸಿಕೆ ನೀಡುವ ಪ್ರಧಾನಿ ಮೋದಿ ಅವರ ಹೆಜ್ಜೆಯನ್ನು ಸ್ವಾಗತಿಸಿದ್ದೇವೆ. ಅದೇ ರೀತಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕೊರೊನಾಕ್ಕೆ ಬಲಿಯಾದವರಿಗೆ ₹1 ಲಕ್ಷ ಘೋಷಣೆ ಮಾಡಿರುವುದು ದೇಶದಲ್ಲಿ ಮಾದರಿಯಾದುದು. ಅದಕ್ಕೂ ಅಭಿನಂದನೆ ಸಲ್ಲಿಸಿದ್ದೇವೆ’ ಎಂದು ತಿಳಿಸಿದರು.
RDPR minister KS Eshwarappa said the Karnataka government is planning to postpone the taluk and zilla panchayat elections due to the COVID-19 pandemic.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm