ಬ್ರೇಕಿಂಗ್ ನ್ಯೂಸ್
31-08-20 10:38 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 31: ಸ್ಯಾಂಡಲ್ವುಡ್ನಲ್ಲಿ ಕೇಳಿ ಬಂದಿದ್ದ ಡ್ರಗ್ಸ್ ದಂಧೆಯ ಬಗ್ಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಇಂದು ಸಿಸಿಬಿ ಪೊಲೀಸರ ಎದುರು ಹಾಜರಾಗಿ ಸ್ಫೋಟಕ ಮಾಹಿತಿ ನೀಡಿದ್ದಾರೆ.
ಸಿಸಿಬಿ ವಿಚಾರಣೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಇಂದ್ರಜಿತ್ ಲಂಕೇಶ್ ಅವರು, ನನಗೆ ತಿಳಿದಿದ್ದ ಮಾಹಿತಿಯ ಬಗ್ಗೆ ಸಾಕ್ಷಿ ಸಮೇತ ಅವರಿಗೆ ಹೇಳಿದ್ದೇನೆ. ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದು, ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ನಾನು ಉತ್ತರಿಸಿದ್ದೇನೆ ಎಂದರು.
ನಿನ್ನೆ ಮೊನ್ನೆ ಬಂದ ಕೆಲ ನಟ, ನಟಿಯರು ಡ್ರಗ್ಸ್ ಗೆ ರಾಯಭಾರಿಗಳಾಗಿದ್ದಾರೆ. ಇದರಿಂದ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಯುವ ಜನತೆ ಹಾನಿಯಾಗಲಿದೆ. ಆದ್ದರಿಂದ ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಎಂದು ಮಾಹಿತಿ ನೀಡಿದ್ದೇನೆ. ಇದರಿಂದ ಇಂಡಸ್ಟ್ರಿಗೆ ಬರುವ ಮುಂಬರುವ ಯುವ ಪೀಳಿಗೆಗೆ ಕೂಡ ಸಂದೇಶ ರವಾನೆಯಾಗಲಿದೆ ಎಂದರು.
ವಿಚಾರಣೆ ಸಂದರ್ಭದಲ್ಲಿ ಒಟ್ಟು 10 ರಿಂದ 15 ಮಂದಿ ಹೆಸರು, ಕೆಲ ಸ್ಥಳಗಳ ಮಾಹಿತಿ, ಆ ಬಗ್ಗೆ ಬೇಕಾದ ದಾಖಲೆಗಳನ್ನು ನೀಡಿದ್ದೇನೆ. ಈಗಾಗಲೇ ಪೊಲೀಸರ ಬಳಿಯೂ ಸಾಕಷ್ಟು ಮಾಹಿತಿ ಇದೆ. ಆದರೆ ನಾನು ಈಗ ಅವರ ಹೆಸರು ಬಹಿರಂಗ ಪಡಿಸಿದರೆ ತನಿಖೆಗೆ ತೊಂದರೆ ಆಗಲಿದೆ. ಸುಮಾರು ಐದೂವರೆ ಗಂಟೆ ಅವಧಿಯಲ್ಲಿ ಹಲವು ಸಾಕ್ಷಿ, ದಾಖಲೆ, ವಿಡಿಯೋಗಳನ್ನು ನೀಡಿದ್ದೇನೆ ಎಂದು ತಿಳಿಸಿದರು.
ತಮ್ಮ ಹೇಳಿಕೆಗಳ ವಿರುದ್ಧ ಕೇಳಿ ಬಂದ ಟೀಕೆಗಳ ಕುರಿತು ಪ್ರತಿಕ್ರಿಯೆ ನೀಡಿದ ಇಂದ್ರಜಿತ್ ಲಂಕೇಶ್ ಅವರು, ಸಮಾಜದಲ್ಲಿ ಹೆಸರು ಮಾಡಿದ ಸಾಹಿತಿಗಳು, ಗಣ್ಯರನ್ನು ಕರೆಯಿಸಿ ಮಾಧ್ಯಮಗಳು ವರದಿ ಮಾಡಬೇಕು. ಅದನ್ನು ಬಿಟ್ಟು ಸುಪಾರಿ ಕೊಟ್ಟ ವ್ಯಕ್ತಿಗಳ ಹೇಳಿಕೆ ಕೇಳಬೇಡಿ ಎಂದು ಸಲಹೆ ನೀಡಿದರು.
ನಾನು ರಕ್ಷಣೆ ಬೇಕು ಎಂದು ಕೇಳಿಲ್ಲ. ಬೆಂಬಲ ಬೇಕು ಎಂದು ಕೇಳಿದ್ದೇನೆ. ನಾನು ಈಗ ಪೊಲೀಸರಿಗೆ ಮಾಹಿತಿ ನೀಡಿರುವುದರಿಂದ ಅವರಿಗೆ ಖುಷಿ ಆಗಿದೆ. ಶೀಘ್ರವೇ ಅಧಿಕಾರಿಗಳು ಈ ಬಗ್ಗೆ ತನಿಖೆ ಸಮೇತ ಹೆಸರು ಬಹಿರಂಗಪಡಿಸಲಿದ್ದಾರೆ. ನನಗೆ ಯಾವುದೇ ನಟರು, ರಾಜಕಾರಣಿಗಳ ಮಕ್ಕಳ ಬಗ್ಗೆ ಹೆದರಿಕೆ ಇಲ್ಲ. ನಾನು ಈ ಬಗ್ಗೆ ಸಾಕಷ್ಟು ತನಿಖೆ ನಡೆಸಿದ್ದು, ಆ ವೇಳೆ ಲಭ್ಯವಾದ ಕೆಲ ವಿಡಿಯೋ, ದಾಖಲೆಗಳನ್ನು ನೀಡಿದ್ದೇನೆ. ನನಗೆ ಯಾರು ಒತ್ತಡ ಹಾಕುತ್ತಿಲ್ಲ. ಹಲವು ನಿರ್ಮಾಪಕರು, ನಟರು, ರಾಜಕಾರಣಿಗಳು, ಸಾಮಾನ್ಯ ಜನರು ನನಗೆ ಬೆಂಬಲ ನೀಡಿದ್ದಾರೆ ಅವರಿಗೆ ಧನ್ಯವಾದ ಎಂದರು.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm