ಬ್ರೇಕಿಂಗ್ ನ್ಯೂಸ್
31-08-20 10:38 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 31: ಸ್ಯಾಂಡಲ್ವುಡ್ನಲ್ಲಿ ಕೇಳಿ ಬಂದಿದ್ದ ಡ್ರಗ್ಸ್ ದಂಧೆಯ ಬಗ್ಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಅವರು ಇಂದು ಸಿಸಿಬಿ ಪೊಲೀಸರ ಎದುರು ಹಾಜರಾಗಿ ಸ್ಫೋಟಕ ಮಾಹಿತಿ ನೀಡಿದ್ದಾರೆ.
ಸಿಸಿಬಿ ವಿಚಾರಣೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಇಂದ್ರಜಿತ್ ಲಂಕೇಶ್ ಅವರು, ನನಗೆ ತಿಳಿದಿದ್ದ ಮಾಹಿತಿಯ ಬಗ್ಗೆ ಸಾಕ್ಷಿ ಸಮೇತ ಅವರಿಗೆ ಹೇಳಿದ್ದೇನೆ. ನನ್ನ ಹೇಳಿಕೆಗೆ ನಾನು ಬದ್ಧನಾಗಿದ್ದು, ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆ ನಾನು ಉತ್ತರಿಸಿದ್ದೇನೆ ಎಂದರು.
ನಿನ್ನೆ ಮೊನ್ನೆ ಬಂದ ಕೆಲ ನಟ, ನಟಿಯರು ಡ್ರಗ್ಸ್ ಗೆ ರಾಯಭಾರಿಗಳಾಗಿದ್ದಾರೆ. ಇದರಿಂದ ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ಯುವ ಜನತೆ ಹಾನಿಯಾಗಲಿದೆ. ಆದ್ದರಿಂದ ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ ಎಂದು ಮಾಹಿತಿ ನೀಡಿದ್ದೇನೆ. ಇದರಿಂದ ಇಂಡಸ್ಟ್ರಿಗೆ ಬರುವ ಮುಂಬರುವ ಯುವ ಪೀಳಿಗೆಗೆ ಕೂಡ ಸಂದೇಶ ರವಾನೆಯಾಗಲಿದೆ ಎಂದರು.
ವಿಚಾರಣೆ ಸಂದರ್ಭದಲ್ಲಿ ಒಟ್ಟು 10 ರಿಂದ 15 ಮಂದಿ ಹೆಸರು, ಕೆಲ ಸ್ಥಳಗಳ ಮಾಹಿತಿ, ಆ ಬಗ್ಗೆ ಬೇಕಾದ ದಾಖಲೆಗಳನ್ನು ನೀಡಿದ್ದೇನೆ. ಈಗಾಗಲೇ ಪೊಲೀಸರ ಬಳಿಯೂ ಸಾಕಷ್ಟು ಮಾಹಿತಿ ಇದೆ. ಆದರೆ ನಾನು ಈಗ ಅವರ ಹೆಸರು ಬಹಿರಂಗ ಪಡಿಸಿದರೆ ತನಿಖೆಗೆ ತೊಂದರೆ ಆಗಲಿದೆ. ಸುಮಾರು ಐದೂವರೆ ಗಂಟೆ ಅವಧಿಯಲ್ಲಿ ಹಲವು ಸಾಕ್ಷಿ, ದಾಖಲೆ, ವಿಡಿಯೋಗಳನ್ನು ನೀಡಿದ್ದೇನೆ ಎಂದು ತಿಳಿಸಿದರು.
ತಮ್ಮ ಹೇಳಿಕೆಗಳ ವಿರುದ್ಧ ಕೇಳಿ ಬಂದ ಟೀಕೆಗಳ ಕುರಿತು ಪ್ರತಿಕ್ರಿಯೆ ನೀಡಿದ ಇಂದ್ರಜಿತ್ ಲಂಕೇಶ್ ಅವರು, ಸಮಾಜದಲ್ಲಿ ಹೆಸರು ಮಾಡಿದ ಸಾಹಿತಿಗಳು, ಗಣ್ಯರನ್ನು ಕರೆಯಿಸಿ ಮಾಧ್ಯಮಗಳು ವರದಿ ಮಾಡಬೇಕು. ಅದನ್ನು ಬಿಟ್ಟು ಸುಪಾರಿ ಕೊಟ್ಟ ವ್ಯಕ್ತಿಗಳ ಹೇಳಿಕೆ ಕೇಳಬೇಡಿ ಎಂದು ಸಲಹೆ ನೀಡಿದರು.
ನಾನು ರಕ್ಷಣೆ ಬೇಕು ಎಂದು ಕೇಳಿಲ್ಲ. ಬೆಂಬಲ ಬೇಕು ಎಂದು ಕೇಳಿದ್ದೇನೆ. ನಾನು ಈಗ ಪೊಲೀಸರಿಗೆ ಮಾಹಿತಿ ನೀಡಿರುವುದರಿಂದ ಅವರಿಗೆ ಖುಷಿ ಆಗಿದೆ. ಶೀಘ್ರವೇ ಅಧಿಕಾರಿಗಳು ಈ ಬಗ್ಗೆ ತನಿಖೆ ಸಮೇತ ಹೆಸರು ಬಹಿರಂಗಪಡಿಸಲಿದ್ದಾರೆ. ನನಗೆ ಯಾವುದೇ ನಟರು, ರಾಜಕಾರಣಿಗಳ ಮಕ್ಕಳ ಬಗ್ಗೆ ಹೆದರಿಕೆ ಇಲ್ಲ. ನಾನು ಈ ಬಗ್ಗೆ ಸಾಕಷ್ಟು ತನಿಖೆ ನಡೆಸಿದ್ದು, ಆ ವೇಳೆ ಲಭ್ಯವಾದ ಕೆಲ ವಿಡಿಯೋ, ದಾಖಲೆಗಳನ್ನು ನೀಡಿದ್ದೇನೆ. ನನಗೆ ಯಾರು ಒತ್ತಡ ಹಾಕುತ್ತಿಲ್ಲ. ಹಲವು ನಿರ್ಮಾಪಕರು, ನಟರು, ರಾಜಕಾರಣಿಗಳು, ಸಾಮಾನ್ಯ ಜನರು ನನಗೆ ಬೆಂಬಲ ನೀಡಿದ್ದಾರೆ ಅವರಿಗೆ ಧನ್ಯವಾದ ಎಂದರು.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm