ಬ್ರೇಕಿಂಗ್ ನ್ಯೂಸ್
23-06-21 04:40 pm Headline Karnataka News Network ಕರ್ನಾಟಕ
ಮೈಸೂರು, ಜೂನ್ 23: ರಾಜ್ಯದಲ್ಲಿಯೂ ಕೊರೊನಾ ವೈರಸಿನ ಹೊಸ ರೂಪಾಂತರಿ ಡೆಲ್ಟಾ ಪ್ಲಸ್ ಪತ್ತೆಯಾಗಿದೆ ಎಂದು ಹೇಳಿಕೆ ನೀಡಿ ಆರೋಗ್ಯ ಸಚಿವ ಡಾ.ಸುಧಾಕರ್ ಆತಂಕ ಎಬ್ಬಿಸಿರುವ ಬೆನ್ನಲ್ಲೇ ಮೈಸೂರಿನಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಪ್ರಸಾದ್, ಡೆಲ್ಟಾ ಪ್ಲಸ್ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಡೆಲ್ಟಾ ಪ್ಲಸ್ ಪತ್ತೆಯಾಗಿರುವುದು ಮೇ ತಿಂಗಳ ಸ್ಯಾಂಪಲ್ ನಲ್ಲಿ. ಸೋಂಕಿತ ವ್ಯಕ್ತಿ ಆಗಲೇ ಗುಣಮುಖರಾಗಿ ತೆರಳಿದ್ದಾರೆ. ಯಾವುದೇ ಆತಂಕ ಪಡುವ ಅಗತ್ಯ ಇಲ್ಲ ಎಂದು ಹೇಳಿದ್ದಾರೆ.

ನಿತ್ಯವೂ ಸಾವಿರಾರು ಸ್ವಾಬ್ ತೆಗೆಯುತ್ತೇವೆ. ಈ ಪೈಕಿ ಪ್ರತಿ ತಿಂಗಳಲ್ಲೂ ವಿಶೇಷವಾಗಿ ಕಂಡ 40 ಸ್ಯಾಂಪಲ್ಗಳನ್ನು ರ್ಯಾಂಡಮ್ ಆಗಿ ಆಯ್ಕೆ ಮಾಡಿ ಬೆಂಗಳೂರಿನ ಲ್ಯಾಬ್ ಗೆ ಕಳುಹಿಸುತ್ತೇವೆ. ಮೇ ತಿಂಗಳಲ್ಲಿ ಬೆಂಗಳೂರಿನ ನಿಮ್ಹಾನ್ಸ್ಗೆ ಕಳುಹಿಸಿದ್ದ ಸ್ಯಾಂಪಲ್ನಲ್ಲಿ ಡೆಲ್ಟಾ ಪ್ಲಸ್ ಕಂಡುಬಂದಿದೆ. ಒಂದು ಕೇಸ್ ಕಂಡು ಬಂದಿರುವುದನ್ನೇ ಆರೋಗ್ಯ ಸಚಿವರು ಮತ್ತು ಮೈಸೂರಿನ ಜಿಲ್ಲಾ ಉಸ್ತುವಾರಿ ಸಚಿವರು ಘೋಷಣೆ ಮಾಡಿದ್ದಾರೆ.

ಈಗಾಗಲೇ ಸೋಂಕಿತ ವ್ಯಕ್ತಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಡೆಲ್ಟಾ ಪ್ಲಸ್ ಕರೊನಾದ ಮತ್ತೊಂದು ರೂಪಾಂತರ ಅಷ್ಟೆ. ಇದನ್ನು ಮೂರನೇ ಅಲೆ ಅಂತ ಭಾವಿಸಬೇಕಿಲ್ಲ. ಮೈಸೂರು ಜಿಲ್ಲೆಯಲ್ಲಿ 36 ಲಕ್ಷ ಜನಸಂಖ್ಯೆ ಇದೆ. ಇದುವರೆಗೆ 16 ಲಕ್ಷ ಜನರನ್ನು ಟೆಸ್ಟ್ ಮಾಡಿದ್ದೇವೆ.
ಈ ಪೈಕಿ 1.63 ಲಕ್ಷ ಪಾಸಿಟಿವ್ ಕೇಸ್ ಬಂದಿದೆ. ಈಗ ಕರೊನಾ ನಿಯಂತ್ರಣದಲ್ಲಿದೆ ಎಂದು ಡಿಎಚ್ಓ ಡಾ.ಪ್ರಸಾದ್ ಹೇಳಿದ್ದಾರೆ.
ಮಕ್ಕಳಲ್ಲಿ ಅತಿ ಹೆಚ್ಚು ಕೇಸ್ ಬರುತ್ತಿದೆ ಎನ್ನುವುದೂ ಸುಳ್ಳು ವರದಿ. ನಾನು 16 ತಿಂಗಳ ಅಂಕಿ ಅಂಶಗಳನ್ನೂ ಪರಿಶೀಲನೆ ಮಾಡಿದ್ದೇನೆ. ಆ ರೀತಿಯ ಅಂಶ ಕಂಡುಬಂದಿಲ್ಲ. ಕೊರೊನಾ ಸೋಂಕಿನ ಮೂರನೇ ಅಲೆ ಶುರುವಾಗಿದೆ ಅನ್ನೋದು ಕೇವಲ ಊಹಾಪೋಹ ಎಂದು ಮೈಸೂರು ಡಿಎಚ್ಒ ಡಾ.ಪ್ರಸಾದ್ ಹೇಳಿದ್ದಾರೆ.
Delta Plus Variant Cases not Found in Karnataka Health minster in trouble. Mysore DHO clarifies that two new cases of the Delta Plus variant of coronavirus have not been found in Karnataka.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 05:10 pm
HK News Staffer
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm