ಬ್ರೇಕಿಂಗ್ ನ್ಯೂಸ್
01-07-21 03:17 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 1: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 130 ಸ್ಥಾನಗಳನ್ನು ಗೆದ್ದು ರಾಜ್ಯದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಸವಾಲು ನನ್ನ ಮುಂದೆ ಇದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
‘ವರಿಷ್ಠರು ಸೂಚಿಸಿದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೋಗುವೆ’ ಎಂದು ತಿಂಗಳ ಹಿಂದಷ್ಟೇ ಹೇಳಿದ್ದ ಯಡಿಯೂರಪ್ಪ, ಈಗ ತದ್ವಿರುದ್ಧ ರೀತಿಯ ಹೇಳಿಕೆ ಕೊಟ್ಟು ಅಚ್ಚರಿ ಸೃಷ್ಟಿಸಿದ್ದಾರೆ. ಇನ್ನೂ ಉತ್ತಮ ಕೆಲಸಗಳನ್ನು ಎರಡು ವರ್ಷಗಳಲ್ಲಿ ಮಾಡಬೇಕಾಗಿದೆ. ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರುವ ಸಲುವಾಗಿ ಈಗಿನಿಂದಲೇ ಎಲ್ಲ ರೀತಿಯ ಪ್ರಯತ್ನವನ್ನು ಮಾಡುತ್ತೇನೆ ಎಂದು ಕಾರ್ಯಕರ್ತರಿಗೆ ಮತ್ತು ರಾಜ್ಯದ ಜನರಿಗೆ ಭರವಸೆ ನೀಡುತ್ತೇನೆ ಎಂದು ದಿಢೀರ್ ಹೇಳಿಕೆ ನೀಡಿರುವುದು ಜಿಜ್ಞಾಸೆಗೆ ಗ್ರಾಸವಾಗಿದೆ.
ರಾಜಭವನಕ್ಕೆ ಬುಧವಾರ ಸಂಜೆ ಭೇಟಿ ನೀಡಿದ್ದ ಯಡಿಯೂರಪ್ಪ, ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಅಲ್ಲಿಂದ ಹಿಂತಿರುಗುವ ವೇಳೆ ಸುದ್ದಿಗಾರರ ಜತೆ ಮಾತನಾಡಿದರು.

ನಾಯಕತ್ವ ಬದಲಾವಣೆ ವಿಚಾರದಲ್ಲಿ ‘ಪರೀಕ್ಷೆ ಬರೆದಿದ್ದು, ಫಲಿತಾಂಶವಷ್ಟೇ ಬಾಕಿ’ ಎಂದು ಯಡಿಯೂರಪ್ಪ ವಿರೋಧಿ ಬಣದಲ್ಲಿರುವ ಸಚಿವ ಸಿ.ಪಿ. ಯೋಗೇಶ್ವರ್ ಹೇಳುತ್ತಲೇ ಬಂದಿದ್ದಾರೆ. ಇದರ ಮಧ್ಯೆಯೇ, ಮುಂದಿನ ಎರಡು ವರ್ಷ ಯಡಿಯೂರಪ್ಪನವರೇ ಮುಖ್ಯಮಂತ್ರಿ ಎಂದು ಅವರ ಮಗ ಬಿ.ವೈ. ವಿಜಯೇಂದ್ರ ಹೇಳಿಕೆ ನೀಡಿದ್ದರು. ಇದರ ಬೆನ್ನಲ್ಲೇ ಯಡಿಯೂರಪ್ಪ, ಮುಂದಿನ ಚುನಾವಣೆಯ ನಾಯಕತ್ವವೂ ತಮ್ಮದೇ ಎಂದು ಪರೋಕ್ಷವಾಗಿ ಹೇಳಿರುವುದು ನಾನಾ ರೀತಿಯ ವಿಶ್ಲೇಷಣೆಗೂ ಕಾರಣವಾಗಿದೆ. ಹೀಗೆ ಹೇಳುವ ಮೂಲಕ ‘ಮುಖ್ಯಮಂತ್ರಿ ಸ್ಥಾನದಿಂದ ತಮ್ಮನ್ನು ಅಲುಗಾಡಿಸಲು ಸಾಧ್ಯವಿಲ್ಲ’ ಎಂಬ ಸ್ಪಷ್ಟ ಸಂದೇಶವನ್ನು ಅವರು ವರಿಷ್ಠರಿಗೆ ರವಾನಿಸಿದ್ದಾರೆ ಎನ್ನಲಾಗುತ್ತಿದೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಷಯದಲ್ಲಿ ಗೊಂದಲ ಮುಂದುವರಿದ ಪ್ರಶ್ನೆಗೆ ಉತ್ತರಿಸಲು ನಿರಾಕರಿಸುತ್ತಾ ಮುಂದೆ ನಡೆದರು.
Karnataka Chief Minister B S Yediyurappa on Wednesday made an unscheduled visit to Raj Bhavan and met Vajubhai R Vala, after which he said he would work towards bringing the BJP back to power with 130 seats in the next election.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 05:10 pm
HK News Staffer
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm