ಬ್ರೇಕಿಂಗ್ ನ್ಯೂಸ್
03-07-21 04:57 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 3 : ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಗಾಜಿನ ಛಾವಣಿ ಹೊಂದಿರುವ ಆಕರ್ಷಕ ವಿಸ್ಟಾಡೋಮ್ ಬೋಗಿಯನ್ನು ಮಂಗಳೂರು - ಬೆಂಗಳೂರು ನಡುವಿನ ರೈಲಿಗೆ ಜೋಡಿಸಲಾಗಿದ್ದು ಮುಂದಿನ ವಾರದಲ್ಲಿ ಸಂಚಾರಕ್ಕೆ ಲಭಿಸಲಿದೆ.
ಯಶವಂತಪುರ- ಮಂಗಳೂರು ವಿಶೇಷ ರೈಲಿಗೆ ಗಾಜಿನ ಛಾವಣಿಯನ್ನು ಹೊಂದಿರುವ ಆಕರ್ಷಕ ವಿಸ್ಟಾಡೋಮ್ ಬೋಗಿಗಳು ಜು.7ರಿಂದ ಸೇರ್ಪಡೆಗೊಳ್ಳಲಿದೆ. ಇದಕ್ಕಾಗಿ ಶನಿವಾರದಿಂದಲೇ (ಜು.3) ಬುಕಿಂಗ್ ಆರಂಭಿಸಲಾಗಿದೆ. ಈ ಬೋಗಿಯ ಪ್ರಯಾಣಕ್ಕೆ ಯಶವಂತಪುರದಿಂದ ಮಂಗಳೂರಿಗೆ 1,470 ರೂ. ದರ ನಿಗದಿಪಡಿಸಲಾಗಿದೆ.





ಪ್ರಕೃತಿ ಸೌಂದರ್ಯದಿಂದಲೇ ಹೆಸರುವಾಸಿಯಾಗಿರುವ ಪಶ್ಚಿಮಘಟ್ಟದ ಮಧ್ಯೆ ಸಂಚರಿಸುವ ಮೂರು ರೈಲುಗಳ ದ್ವಿತೀಯ ದರ್ಜೆಯ ಒಂದು ಸಾಮಾನ್ಯ ಬೋಗಿಯ ಬದಲಿಗೆ ಎರಡು ವಿಸ್ಟಾಡೋಮ್ ಕೋಚ್ಗಳನ್ನು ಜೋಡಿಸಲಾಗುತ್ತಿದೆ. ಬೆಂಗಳೂರು- ಮಂಗಳೂರು ನಡುವೆ ಸಕಲೇಶಪುರದಿಂದ ಸುಬ್ರಹ್ಮಣ್ಯದ ವರೆಗೆ ಹಾದು ಹೋಗುವ 55 ಕಿ.ಮೀ. ರೈಲು ಮಾರ್ಗ ಪ್ರಯಾಣಿಕರ ಪಾಲಿಗೆ ಸ್ವರ್ಗ. ಕಳೆದ ಹಲವು ವರ್ಷಗಳಿಂದ ಈ ಮಾರ್ಗದಲ್ಲಿ ಸಂಚರಿಸುವ ರೈಲುಗಳಿಗೆ ಗಾಜಿನ ಛಾವಣಿ, ಕಿಟಕಿಗಳನ್ನು ಅಳವಡಿಸುವಂತೆ ಸಾಕಷ್ಟು ಮಂದಿ ಮನವಿ ಮಾಡಿದ್ದರು. ಅದರ ಪ್ರತಿಫಲದಿಂದ ವಿಸ್ಟಾಡೋಮ್ ರೈಲು ಸಂಚಾರ ಆರಂಭಿಸುತ್ತಿದೆ.
ರೈಲು ಪಶ್ಚಿಮ ಘಟ್ಟವನ್ನು ಸೀಳಿಕೊಂಡು ಹೋಗುವ ವೇಳೆ ಅಲ್ಲಿನ ಘಟ್ಟಗಳ ಸೌಂದರ್ಯವನ್ನು ರೈಲಿನೊಳಗೆ ಕುಳಿತೇ ಸವಿಯುವ ಅವಕಾಶ ಸಿಗಲಿದೆ. ಮಾರ್ಗ ಮಧ್ಯದಲ್ಲಿ ಬರುವ ಅರಣ್ಯ, ಜಲಪಾತ, ಸುರಂಗ, ಸೇತುವೆಗಳ ರಮಣೀಯ ನೋಟವನ್ನು ಪ್ರಯಾಣಿಕರು ಆಸ್ವಾದಿಸಬಹುದು. ಮಳೆಗಾಲ ಆಗಿರುವುದರಿಂದ ಗಾಜಿನ ಬೋಗಿಯ ಪ್ರಯಾಣ ವಿಶೇಷ ಆಗುವುದರಲ್ಲಿ ಸಂಶಯವಿಲ್ಲ.






ವಾರಕ್ಕೆ ಮೂರು ಬಾರಿ ಚಲಿಸುವ ಯಶವಂತಪುರ- ಕಾರವಾರ ವಿಶೇಷ ರೈಲು (ರೈಲ್ವೆ ನಂ. 06211 /06212), ವಾರಕ್ಕೆ ಮೂರು ಬಾರಿ ಚಲಿಸುವ ಯಶವಂತಪುರ- ಮಂಗಳೂರು ಜಂಕ್ಷನ್ ವಿಶೇಷ ರೈಲು (ರೈಲ್ವೆ ನಂ. 06575/06576), ಯಶವಂತಪುರ - ಮಂಗಳೂರು (ರೈಲ್ವೆ ನಂ. 06539) ಹಾಗೂ ಮಂಗಳೂರು ಜಂಕ್ಷನ್- ಯಶವಂತಪುರ ಎಕ್ಸ್ಪ್ರೆಸ್ನಲ್ಲಿ (ರೈಲ್ವೆ ನಂ. 06540 ) ವಿಸ್ಟಾಡೋಮ್ ಬೋಗಿ ಸೇರ್ಪಡೆಯಾಗಲಿವೆ.
Rail passengers traveling between Bengaluru and Mangaluru during the day can now get a panoramic view of the picturesque ghats section as the train service will be inaugurated next week with bookings open.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 06:51 pm
HK News Staffer
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
ಖಮೇನಿ ಯುಗಾಂತ್ಯ; ಹಂಗಾಮಿ ಸುಪ್ರೀಂ ಲೀಡರ್ ಸ್ಥಾನಕ್ಕ...
02-03-26 01:30 pm
02-03-26 07:57 pm
HK News Staffer
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
Mangaluru Muscat Flight: ಮಂಗಳೂರು- ಮಸ್ಕತ್ ನಡುವ...
27-02-26 08:59 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm