ಬ್ರೇಕಿಂಗ್ ನ್ಯೂಸ್
05-07-21 02:37 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 5: ರಾಜ್ಯ ಸರ್ಕಾರ ಘೋಷಿಸಿರುವ ಅನ್'ಲಾಕ್ 3.0 ಜಾರಿಗೊಂಡಿದ್ದು, ಈ ಹಿನ್ನೆಲೆಯಲ್ಲಿ ದೇವಾಲಯಗಳು, ಪ್ರವಾಸಿ ತಾಣಗಳು ಓಪನ್ ಆಗಿವೆ. ಮಾಲ್, ಕೈಗಾರಿಕೆ, ಕಚೇರಿಗಳು ಪೂರ್ಣ ಪ್ರಮಾಣದಲ್ಲಿ ಆರಂಭಗೊಂಡಿರುವ ಹಿನ್ನೆಲೆಯೆಲ್ಲಿ ವಾಣಿಜ್ಯ ಚಟುವಟಿಕೆಗಳು ಚುರುಕುಗೊಳ್ಳಲಿವೆ.
ಇನ್ನು ವ್ಯಾಪಾರ-ವಹಿವಾಟು ಇಲ್ಲದೆ ಕಂಗಾಲಾಗಿದ್ದ ವಾಣಿಜ್ಯ ಪ್ರದೇಶ, ಭಕ್ತರಿಲ್ಲದೆ ಭಣಗುಡುತ್ತಿದ್ದ ಧಾರ್ಮಿಕ ಕೇಂದ್ರಗಳಲ್ಲಿ ಮೊದಲಿನಂತೆ ಕಳೆ ಬರಲಿದೆ.

ಗ್ರಾಹಕರ ಸ್ವಾಗತಕ್ಕೆ ಬಹುತೇಕ ಕಡೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಮಾಲ್, ಚಿನ್ನಾಭರಣ, ಬೃಹತ್ ಬಟ್ಟೆ ಅಂಗಡಿಗಳ ಮುಂದೆ ಗ್ರಾಹಕರನ್ನು ಸ್ವಾಗತಿಸುವ ಫಲಕಗಳನ್ನು ಅಳವಡಿಸಿರುವುದು ಕಂಡು ಬಂದಿದೆ.
ಸರ್ಕಾರ ನಿರ್ಬಂಧಗಳನ್ನು ಹೇರಿದ್ದ ಹಿನ್ನೆಲೆಯಲ್ಲಿ ಇಷ್ಟು ದಿನ ಸಂಜೆ 5ರವರೆಗೆ ಮಾತ್ರ ಓಪನ್ ಇದ್ದ ಅಂಗಡಿಗಳು ಇಂದಿನಿಂದ ಬೆಳಗ್ಗೆ 6 ಗಂಟೆಯಿಂದ ರಾತ್ರಿ 9 ಗಂಟೆವರೆಗೂ ವಹಿವಾಟು ನಡೆಸಲಿವೆ.

ಶೇ.100ರಷ್ಟು ಪ್ರಯಾಣಿಕರ ಸಂಚಾರ
ಸೋಮವಾರದಿಂದ ಕೆಎಸ್ಆರ್ಟಿಸಿ, ಬಿಎಂಟಿಸಿ, ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಮಾತ್ರವಲ್ಲದೆ, ಆಟೋ, ಟ್ಯಾಕ್ಸಿ, ಖಾಸಗಿ ಸಾರಿಗೆ ವಾಹನಗಳು ಬೆಳಗ್ಗೆ 5ರಿಂದ ರಾತ್ರಿ 9 ಗಂಟೆವರೆಗೆ ಶೇ.100ರಷ್ಟುಪ್ರಯಾಣಿಕರನ್ನು ಕರೆದೊಯ್ಯಲು ಅವಕಾಶ ನೀಡಲಾಗಿದೆ.


ಕರ್ಫ್ಯೂ ಸಡಿಲಗೊಳಿಸಿದ ಸರ್ಕಾರ
ವಾರಾಂತ್ಯ ಕಫ್ರ್ಯೂ ತೆರವುಗೊಳಿಸಿ, ರಾತ್ರಿ ಕಫ್ರ್ಯೂ ಅನ್ನು ರಾತ್ರಿ 9ರಿಂದ ಬೆಳಗ್ಗೆ 5ರವರೆಗೆ ನಿಗದಿಪಡಿಸಿರುವುದರಿಂದ ಶನಿವಾರ, ಭಾನುವಾರವೂ ಸೇರಿ ವಾರದ 7 ದಿನ ಎಲ್ಲ ವಾಣಿಜ್ಯ ಚಟುವಟಿಕೆಗಳನ್ನು ರಾತ್ರಿ 9 ಗಂಟೆವರೆಗೂ ನಡೆಸಬಹುದಾಗಿದೆ. ಹೋಂ ಡೆಲಿವರಿಗೆ 24 ಗಂಟೆಯೂ ಅವಕಾಶವಿದೆ. ಮದುವೆ ಸೇರಿದಂತೆ ಶುಭ-ಸಮಾರಂಭಗಳಿಗೆ 100 ಮಂದಿ, ಅಂತ್ಯಸಂಸ್ಕಾರಕ್ಕೆ 20 ಮಂದಿ ಭಾಗಿಯಾಗಬಹುದು.
ಸದ್ಯ ಧಾರ್ಮಿಕ, ಸಾಮಾಜಿಕ, ರಾಜಕೀಯ ಸಭೆ, ಸಮಾರಂಭಗಳು, ಪ್ರತಿಭಟನೆ ನಡೆಸಲು, ಪಬ್ಗಳ ಕಾರ್ಯಾಚರಣೆಗೆ ಇರುವ ನಿರ್ಬಂಧವನ್ನು ಮುಂದುವರೆಸಲಾಗಿದೆ. ಶಾಲಾ, ಕಾಲೇಜುಗಳ ಆರಂಭದ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ.

ರಾತ್ರಿ 8 ಗಂಟೆವರೆಗೆ ಮೆಟ್ರೋ ಸಂಚಾರಕ್ಕೆ ಅನುಮತಿ
ಉದ್ಯಾನನಗರಿ ಬೆಂಗಳೂರಿನಲ್ಲಿ ಇಷ್ಟುದಿನ ಸಂಜೆ 5ರವರೆಗೆ ಮಾತ್ರ ಸೀಮಿತ ಅವಧಿಯಲ್ಲಿ ಸಂಚರಿಸುತ್ತಿದ್ದ ಮೆಟ್ರೋ ರೈಲು ಸೋಮವಾರದಿಂದ ರಾತ್ರಿ 8 ಗಂಟೆಯವರೆಗೂ ಸಂಚರಿಸಲಿದೆ. ಜೊತೆಗೆ ಇಷ್ಟುದಿನ ಶೇ.50ರಷ್ಟುಪ್ರಯಾಣಿಕರ ನಿರ್ಬಂಧವನ್ನೂ ತೆರವುಗೊಳಿಸಲಾಗಿದೆ.
15-01-26 05:56 pm
HK News Desk
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
ಅಕಾಲಿಕ ಮಳೆಗೆ ಕಂಗಾಲಾದ ಕಾಫಿನಾಡು ; ಭಾರೀ ಮಳೆಗೆ ಕೊ...
13-01-26 10:13 pm
15-01-26 12:14 pm
HK News Desk
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
15-01-26 10:24 pm
Mangalore Correspondent
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
ಜ.18ರಂದು ಮಂಗಳೂರಿನಲ್ಲಿ ಪ್ರಪ್ರಥಮ ಜಾಗತಿಕ ಬಿಲ್ಲವರ...
15-01-26 04:01 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm