ಬ್ರೇಕಿಂಗ್ ನ್ಯೂಸ್
05-07-21 02:37 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 5: ರಾಜ್ಯ ಸರ್ಕಾರ ಘೋಷಿಸಿರುವ ಅನ್'ಲಾಕ್ 3.0 ಜಾರಿಗೊಂಡಿದ್ದು, ಈ ಹಿನ್ನೆಲೆಯಲ್ಲಿ ದೇವಾಲಯಗಳು, ಪ್ರವಾಸಿ ತಾಣಗಳು ಓಪನ್ ಆಗಿವೆ. ಮಾಲ್, ಕೈಗಾರಿಕೆ, ಕಚೇರಿಗಳು ಪೂರ್ಣ ಪ್ರಮಾಣದಲ್ಲಿ ಆರಂಭಗೊಂಡಿರುವ ಹಿನ್ನೆಲೆಯೆಲ್ಲಿ ವಾಣಿಜ್ಯ ಚಟುವಟಿಕೆಗಳು ಚುರುಕುಗೊಳ್ಳಲಿವೆ.
ಇನ್ನು ವ್ಯಾಪಾರ-ವಹಿವಾಟು ಇಲ್ಲದೆ ಕಂಗಾಲಾಗಿದ್ದ ವಾಣಿಜ್ಯ ಪ್ರದೇಶ, ಭಕ್ತರಿಲ್ಲದೆ ಭಣಗುಡುತ್ತಿದ್ದ ಧಾರ್ಮಿಕ ಕೇಂದ್ರಗಳಲ್ಲಿ ಮೊದಲಿನಂತೆ ಕಳೆ ಬರಲಿದೆ.

ಗ್ರಾಹಕರ ಸ್ವಾಗತಕ್ಕೆ ಬಹುತೇಕ ಕಡೆ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಮಾಲ್, ಚಿನ್ನಾಭರಣ, ಬೃಹತ್ ಬಟ್ಟೆ ಅಂಗಡಿಗಳ ಮುಂದೆ ಗ್ರಾಹಕರನ್ನು ಸ್ವಾಗತಿಸುವ ಫಲಕಗಳನ್ನು ಅಳವಡಿಸಿರುವುದು ಕಂಡು ಬಂದಿದೆ.
ಸರ್ಕಾರ ನಿರ್ಬಂಧಗಳನ್ನು ಹೇರಿದ್ದ ಹಿನ್ನೆಲೆಯಲ್ಲಿ ಇಷ್ಟು ದಿನ ಸಂಜೆ 5ರವರೆಗೆ ಮಾತ್ರ ಓಪನ್ ಇದ್ದ ಅಂಗಡಿಗಳು ಇಂದಿನಿಂದ ಬೆಳಗ್ಗೆ 6 ಗಂಟೆಯಿಂದ ರಾತ್ರಿ 9 ಗಂಟೆವರೆಗೂ ವಹಿವಾಟು ನಡೆಸಲಿವೆ.

ಶೇ.100ರಷ್ಟು ಪ್ರಯಾಣಿಕರ ಸಂಚಾರ
ಸೋಮವಾರದಿಂದ ಕೆಎಸ್ಆರ್ಟಿಸಿ, ಬಿಎಂಟಿಸಿ, ಮೆಟ್ರೋ ಸೇರಿದಂತೆ ಸಾರ್ವಜನಿಕ ಸಾರಿಗೆ ಮಾತ್ರವಲ್ಲದೆ, ಆಟೋ, ಟ್ಯಾಕ್ಸಿ, ಖಾಸಗಿ ಸಾರಿಗೆ ವಾಹನಗಳು ಬೆಳಗ್ಗೆ 5ರಿಂದ ರಾತ್ರಿ 9 ಗಂಟೆವರೆಗೆ ಶೇ.100ರಷ್ಟುಪ್ರಯಾಣಿಕರನ್ನು ಕರೆದೊಯ್ಯಲು ಅವಕಾಶ ನೀಡಲಾಗಿದೆ.


ಕರ್ಫ್ಯೂ ಸಡಿಲಗೊಳಿಸಿದ ಸರ್ಕಾರ
ವಾರಾಂತ್ಯ ಕಫ್ರ್ಯೂ ತೆರವುಗೊಳಿಸಿ, ರಾತ್ರಿ ಕಫ್ರ್ಯೂ ಅನ್ನು ರಾತ್ರಿ 9ರಿಂದ ಬೆಳಗ್ಗೆ 5ರವರೆಗೆ ನಿಗದಿಪಡಿಸಿರುವುದರಿಂದ ಶನಿವಾರ, ಭಾನುವಾರವೂ ಸೇರಿ ವಾರದ 7 ದಿನ ಎಲ್ಲ ವಾಣಿಜ್ಯ ಚಟುವಟಿಕೆಗಳನ್ನು ರಾತ್ರಿ 9 ಗಂಟೆವರೆಗೂ ನಡೆಸಬಹುದಾಗಿದೆ. ಹೋಂ ಡೆಲಿವರಿಗೆ 24 ಗಂಟೆಯೂ ಅವಕಾಶವಿದೆ. ಮದುವೆ ಸೇರಿದಂತೆ ಶುಭ-ಸಮಾರಂಭಗಳಿಗೆ 100 ಮಂದಿ, ಅಂತ್ಯಸಂಸ್ಕಾರಕ್ಕೆ 20 ಮಂದಿ ಭಾಗಿಯಾಗಬಹುದು.
ಸದ್ಯ ಧಾರ್ಮಿಕ, ಸಾಮಾಜಿಕ, ರಾಜಕೀಯ ಸಭೆ, ಸಮಾರಂಭಗಳು, ಪ್ರತಿಭಟನೆ ನಡೆಸಲು, ಪಬ್ಗಳ ಕಾರ್ಯಾಚರಣೆಗೆ ಇರುವ ನಿರ್ಬಂಧವನ್ನು ಮುಂದುವರೆಸಲಾಗಿದೆ. ಶಾಲಾ, ಕಾಲೇಜುಗಳ ಆರಂಭದ ಬಗ್ಗೆ ಇನ್ನೂ ಯಾವುದೇ ನಿರ್ಧಾರ ಕೈಗೊಂಡಿಲ್ಲ.

ರಾತ್ರಿ 8 ಗಂಟೆವರೆಗೆ ಮೆಟ್ರೋ ಸಂಚಾರಕ್ಕೆ ಅನುಮತಿ
ಉದ್ಯಾನನಗರಿ ಬೆಂಗಳೂರಿನಲ್ಲಿ ಇಷ್ಟುದಿನ ಸಂಜೆ 5ರವರೆಗೆ ಮಾತ್ರ ಸೀಮಿತ ಅವಧಿಯಲ್ಲಿ ಸಂಚರಿಸುತ್ತಿದ್ದ ಮೆಟ್ರೋ ರೈಲು ಸೋಮವಾರದಿಂದ ರಾತ್ರಿ 8 ಗಂಟೆಯವರೆಗೂ ಸಂಚರಿಸಲಿದೆ. ಜೊತೆಗೆ ಇಷ್ಟುದಿನ ಶೇ.50ರಷ್ಟುಪ್ರಯಾಣಿಕರ ನಿರ್ಬಂಧವನ್ನೂ ತೆರವುಗೊಳಿಸಲಾಗಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 05:10 pm
HK News Staffer
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm