ಬ್ರೇಕಿಂಗ್ ನ್ಯೂಸ್
01-08-20 08:26 am Bangalore Correspondent ಕರ್ನಾಟಕ
ಬೆಂಗಳೂರು(ಆ. 01): ನಗರದ ನೂತನ ಸಿಟಿ ಪೊಲೀಸ್ ಕಮಿಷನರ್ ಆಗಿ ಕಮಲ್ ಪಂತ್ ಇಂದು ಅಧಿಕಾರ ಸ್ವೀಕರಿಸಿದ್ದಾರೆ. ಉನ್ನತ ಅಧಿಕಾರಿಗಳ ಉಪಸ್ಥಿತಿಯಲ್ಲಿ ಇಂದು ಅಧಿಕಾರ ಹಸ್ತಾಂತರ ನಡೆಯಿತು. ನಿರ್ಗಮಿತ ಭಾಸ್ಕರ್ ರಾವ್ ಅವರ ಸ್ಥಾನವನ್ನು ಕಮಲ್ ಪಂತ್ ತುಂಬಿದ್ದಾರೆ. ನಿರ್ಗಮನದ ಕೊನೆಯ ಕ್ಷಣದಲ್ಲಿ ಭಾಸ್ಕರ್ ರಾವ್ ಭಾವುಕರಾದ ದೃಶ್ಯಕ್ಕೂ ಈ ಕಾರ್ಯಕ್ರಮ ಸಾಕ್ಷಿಯಾಯಿತು.
ಕಮಲ್ ಪಂಥ್ ಅವರು ಬೆಂಗಳೂರಿನ ನೂತನ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದರು. ಪೊಲೀಸ್ ಕಮಿಷನರ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಂದು ಅಧಿಕಾರ ಹಸ್ತಾಂತರ ನಡೆಯಿತು.
ನಗರದ ಜಂಟಿ ಪೊಲೀಸ್ ಆಯುಕ್ತರು, ಡಿಸಿಪಿಗಳು ಮೊದಲಾದವರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ಕಾರ್ಯಕ್ರಮಕ್ಕೆ ಬರುವ ಮುನ್ನ ಕಮಲ್ ಪಂತ್ ಅವರು ಸಿಎಂ ಭೇಟಿ ಮಾಡಿದರು.ನಿರ್ಗಮಿತ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಕೈಮುಗಿದು ಕಚೇರಿ ಒಳಗೆ ಹೋದರು.
ಕಾರ್ಯಕ್ರಮದ ವೇಳೆ ಭಾವುಕರಾದ ಭಾಸ್ಕರ್ ರಾವ್ ತಮ್ಮ ಸ್ನೇಹಿತರೂ ಆದ ಕಮಲ್ ಪಂತ್ ಅವರಿಗೆ ಬ್ಯಾಟನ್ ಕೊಟ್ಟು ಕೈ ಮುಗಿದು ನಿರ್ಗಮಿಸಿದರು.
ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ನೂತನ ಕಮಿಷನರ್ ಕಮಲ್ ಪಂತ್, ಸರ್ಕಾರ ತನಗೆ ಕೊಟ್ಟಿರುವ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುತ್ತೇನೆ ಎಂದು ವಾಗ್ದಾನ ನೀಡಿದರು.
ಕೋವಿಡ್-19ನಿಂದ ಮೃತಪಟ್ಟ ಪೊಲೀಸ್ ಇಲಾಖೆ ಸಿಬ್ಬಂದಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪೊಲೀಸ್ ಆಯುಕ್ತ ಕಮಲ ಪಂತ್, ಕೊರೋನಾ ಜೊತೆ ಕಾನೂನು ಸುವ್ಯವಸ್ಥೆ ಕಾಪಾಡುವುದು ತಮ್ಮ ಮೊದಲ ಕರ್ತವ್ಯ. ಆದರೆ, ಏನೇ ಪರಿಸ್ಥಿತಿ ಇದ್ದರೂ ಮೊದಲ ಆದ್ಯತೆ ಕೋವಿಡ್ ವಿರುದ್ಧದ ಹೋರಾಟಕ್ಕೆ ಎಂದು ಸ್ಪಷ್ಟಪಡಿಸಿದರು.
ಯಾವುದೇ ಸಮಸ್ಯೆಯಾಗದಂತೆ ಕರ್ತವ್ಯ ನಿರ್ವಹಿಸುತ್ತೇನೆಂದು ಭರವಸೆ ನೀಡುತ್ತೇನೆ. ಡ್ರಗ್ಸ್ ಮತ್ತು ಸೈಬರ್ ಪ್ರಕರಣಕ್ಕೆ ವಿಶೇಷ ಒತ್ತು ಕೊಡುತ್ತೇನೆ. ರೌಡಿ ಶೀಟರ್ಗಳಿಗೆ ಬಿಸಿ ಮುಟ್ಟಿಸುವುದು ಮುಖ್ಯ ಉದ್ದೇಶ ಎಂದು ಕಮಲ್ ಪಂತ್ ತಿಳಿಸಿದರು.
ಜನರ ಕಷ್ಟಗಳಿಗೆ ಸ್ಪಂದಿಸಲು ತಿಂಗಳಿಗೊಮ್ಮೆ ಆಯಾ ಡಿಸಿಪಿ ಕಚೇರಿಗಳಿಗೆ ಹೋಗುತ್ತೇನೆ ಎಂದೂ ನೂತನ ಪೊಲೀಸ್ ಆಯುಕ್ತರು ಹೇಳಿದರು.
ಈಗ ಜನಜೀವನ ಸಾಮಾನ್ಯ ಸ್ಥಿತಿಗೆ ಬರುತ್ತಿದೆ. ಕ್ರಮೇಣವಾಗಿ ಪೊಲೀಸರ ಕೆಲಸವೂ ಹೆಚ್ಚುತ್ತಿದೆ. ಆಗಸ್ಟ್ 5ರ ನಂತರ ಈ ಕೆಲಸ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಕಮಲ್ ಪಂತ್ ಎಚ್ಚರಿಸಿದರು.
ಭಾಸ್ಕರ್ ರಾವ್ ಅವರನ್ನ ಆಲಿಂಗಿಸಿ ಬೀಳ್ಕೊಟ್ಟ ನೂತನ ಪೊಲೀಸ್ ಕಮಿಷನರ್ ಕಮಲ್ ಪಂತ್ (ಎಡಗಡೆ)
ನಿರ್ಗಮಿತ ಪೊಲೀಸ್ ಕಮಿನಷರ್ ಭಾಸ್ಕರ್ ರಾವ್ ಅವರನ್ನು ಆಂತರಿಕ ಭದ್ರತಾ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm