ಬ್ರೇಕಿಂಗ್ ನ್ಯೂಸ್
10-07-21 10:47 am Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 10: ರಾಜ್ಯದಲ್ಲಿ ಜುಲೈ 14ರವರೆಗೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಒಟ್ಟು 7 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ, ರಾಜ್ಯದಲ್ಲಿ ನೈಋತ್ಯ ಮುಂಗಾರು ಕ್ರಮೇಣವಾಗಿ ಚುರುಕುಪಡೆಯುತ್ತಿದೆ.


ರಾಜ್ಯದಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ನೈರುತ್ಯ ಮುಂಗಾರು ಮಳೆ ಅಬ್ಬರ ಹೆಚ್ಚಿದೆ. ಇಂದಿನಿಂದ ರಾಜ್ಯದ ಕರಾವಳಿ ಪ್ರದೇಶದಲ್ಲಿ ಮಳೆ ವ್ಯಾಪಕವಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.
ಪಶ್ಚಿಮ ಮತ್ತು ಕೇಂದ್ರ ಪ್ರದೇಶದಲ್ಲಿ ಕಡಿಮೆ ಒತ್ತಡ ನಿರ್ಮಾಣವಾಗುವ ಹಿನ್ನಲೆ ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಮತ್ತು ಕೊಡಗಿನಲ್ಲಿ ಮಳೆ ಅಬ್ಬರ ಹೆಚ್ಚಾಗಲಿದೆ.


ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ಮೈಸೂರು, ಚಿತ್ರದುರ್ಗ, ದಾವಣಗೆರೆ, ವಿಜಯಪುರ, ಯಾದಗಿರಿ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಪಣಂಬೂರಿನಲ್ಲಿ 15 ಸೆಂ.ಮೀ ಮಳೆ ಸುರಿದಿದೆ. ಮಂಗಳೂರು, ಭಟ್ಕಳ, ಶಿರಾಲಿ, ಧರ್ಮಸ್ಥಳ, ಹುಂಚದಕಟ್ಟೆ, ಕೋಟ, ಶಿನಿವಾಸಪುರ, ಕದ್ರ, ಕಾರ್ಕಳ, ಮಾಣಿ, ಕೊಲ್ಲೂರು, ಭರಮಸಾಗರ, ಬಾದಾಮಿ, ಮಂಕಿ, ಸಿದ್ದಾಪುರ, ಮೂಡುಬಿದಿರೆ, ಬೀದರ್, ತಾಳಗುಪ್ಪ, ಲಿಂಗನಮಕ್ಕಿ, ಶಿವಮೊಗ್ಗ, ಆಗುಂಬೆ, ಶೃಂಗೇರಿ, ಆನವಟ್ಟಿಯಲ್ಲಿ ಮಳೆಯಾಗಿದೆ.

ಮುಂದಿನ 5 ದಿನಗಳವರೆಗೆ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಜುಲೈ 10-14ರವರೆಗೆ ಕರ್ನಾಟಕ ಮಾತ್ರವಲ್ಲದೇ, ಮಹಾರಾಷ್ಟ್ರ ಮತ್ತು ಗೋವಾ, ಕರಾವಳಿ ಆಂಧ್ರಪ್ರದೇಶ ಮತ್ತು ತೆಲಂಗಾಣ, ಮತ್ತು ಕೇರಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ
ಸತತ ಮಳೆಯು ಕಳೆದ 24 ಗಂಟೆಗಳಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನಲೆ ಕರಾವಳಿಯ ಗರಿಷ್ಠ ತಾಪಮಾನ ಕಡಿಮೆಯಾಗಿದೆ. ಕಳೆದೊಂದು ವಾರದಿಂದ ರಾಜ್ಯದಲ್ಲಿ ಸುರಿಯುತ್ತಿರುವ ಮಳೆಗೆ ನದಿ ಕೆರೆ ಕಟ್ಟೆಗಳು ಭರ್ತಿಯಾಗಿದ್ದು, ಕೃಷಿಕರಲ್ಲಿ ಹರ್ಷ ವ್ಯಕ್ತವಾಗಿದೆ.
The India Meteorological Department (IMD) issued red and orange alerts for Karnataka on Friday following widespread rainfall in Karnataka’s coastal regions.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 05:10 pm
HK News Staffer
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm
ಉಡುಪಿ ; ಹೆದ್ದಾರಿ ಮಧ್ಯದಲ್ಲೇ ಟೇಬಲ್ ಹಾಕಿ ಟಿವಿ, ಮ...
15-07-26 07:02 pm