ಬ್ರೇಕಿಂಗ್ ನ್ಯೂಸ್
02-09-20 09:50 pm Headline Karnataka News Network ಕರ್ನಾಟಕ
ಬೆಂಗಳೂರು,ಸೆಪ್ಟೆಂಬರ್ 02: ಸ್ಯಾಂಡಲ್ವುಡ್ ನ ಕೆಲ ನಟ-ನಟಿಯರು ಡ್ರಗ್ಸ್ ಧಂದೆಯಲ್ಲಿ ತೊಡಗಿದ್ದಾರೆ ಎಂಬ ಗಂಭೀರ ಆರೋಪಗಳ ಬೆನ್ನಲ್ಲೇ ಸಿಸಿಬಿ ತನಿಖೆ ಚುರುಕುಗೊಳಿಸಿದ್ದು ಸ್ಯಾಂಡಲ್ವುಡ್ ನಟಿ ರಾಗಿಣಿ ದ್ವಿವೇದಿಗೆ ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ.
ನಾಳೆ ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದ್ದು, ಇಂದು ಸಿಸಿಬಿ ಪೊಲೀಸರು ರಾಗಿಣಿಯವರ ಆಪ್ತ ಜಯನಗರದ ಆರ್.ಟಿ.ಒ ಅಧಿಕಾರಿ ರವಿಶಂಕರ್ ನನ್ನು ಕಚೇರಿಗೆ ಕರೆತಂದು ವಿಚಾರಣೆ ಮಾಡಿ ವಶಕ್ಕೆಪಡೆದು ಬಂಧಿಸಿದ್ದಾರೆ. ಆತನ ವಿಚಾರಣೆಯ ನಂತರ ರಾಗಿಣಿಗೆ ನೋಟಿಸ್ ನೀಡಿದ್ದಾರೆ. ಜೊತೆಗೆ ನಾಳೆ ಬಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ.
ಗೆಳೆಯರ ಮಧ್ಯೆ ನಡೆದಿತ್ತು ಗಲಾಟೆ:
ಬೆಂಗಳೂರಿನ ಖಾಸಗಿ ಹೋಟೆಲ್ ರಿಟ್ಜ್ ಕಾರ್ಲ್ ಟನ್ ನಲ್ಲಿ ರಾಗಿಣಿ ಅವರ ಗೆಳೆಯರಾದ ಉದ್ಯಮಿ ಶಿವಪ್ರಕಾಶ್ ಚಿಪ್ಪಿ ಹಾಗೂ ಆರ್.ಟಿ.ಒ ಅಧಿಕಾರಿ ರವಿಶಂಕರ್ ಕಿತ್ತಾಡಿಕೊಂಡಿದ್ದರು. 2019ರ ಮಾರ್ಚ್ 16 ಶನಿವಾರ ರಾತ್ರಿ ಹೋಟೆಲ್ ನಲ್ಲಿ ಶಿವಪ್ರಕಾಶ್ ಪಾರ್ಟಿ ಮಾಡುತ್ತಿದ್ದರು. ಈ ವೇಳೆ ನಟಿ, ತಮ್ಮ ಗೆಳೆಯ ರವಿಶಂಕರ್ ಜೊತೆ ಹೋಟೆಲ್ಗೆ ತೆರಳಿದ್ದರು. ಇದನ್ನು ಕಂಡ ಶಿವಪ್ರಕಾಶ್, ರವಿಯೊಂದಿಗೆ ಕಿರಿಕ್ ಮಾಡಿಕೊಂಡಿದ್ದರು. ಇಬ್ಬರ ನಡುವೆ ಆರಂಭವಾದ ಜಗಳ ತಾರಕಕ್ಕೇರಿ ಬಳಿಕ ಬಿಯರ್ ಬಾಟಲಿಯಿಂದ ಪರಸ್ಪರ ಬಡಿದಾಡಿಕೊಂಡಿದ್ದರು.

ಘಟನೆಯಿಂದ ಗಾಯಗೊಂಡ ಬಳಿಕ ರವಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಂಡು ನಂತರ ಅಶೋಕ ನಗರ ಪೊಲೀಸ್ ಠಾಣೆಗೆ ತೆರಳಿ ಲಿಖಿತ ದೂರು ನೀಡಿದ್ದರು. ರವಿ ನೀಡಿದ ದೂರಿನ ಅನ್ವಯ ಪೊಲೀಸರು ಎಫ್ಐಆರ್ ದಾಖಲಿಸಿ ಶಿವಪ್ರಕಾಶ್ ರನ್ನು ವಿಚಾರಣೆಗೆ ಒಳಪಡಿಸಿರುವುದಾಗಿ ಪೊಲೀಸ್ ಮೂಲಗಳಿಂದ ತಿಳಿದುಬಂದಿತ್ತು. ಇವರಿಬ್ಬರು ರಾಗಿಣಿ ವಿಚಾರದಲ್ಲಿ ಕಿತ್ತಾಡಿಕೊಂಡಿದ್ದರು ಎಂದು ವರದಿಯಾಗಿತ್ತು. ಆದರೆ ಈಗ ರಾಗಿಣಿ ಈ ವಿಚಾರಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಪ್ರತಿಕ್ರಿಯಿಸಿದ್ದರು.
ಅಂದು ನಾನು ಸ್ನೇಹಿತರ ಜೊತೆ ಹೋಟೆಲಿನಲ್ಲೇ ಇದ್ದೆ. ಹಳೆ ವೈಷ್ಯಮ್ಯಕ್ಕೆ ಸಂಬಂಧಿಸಿದಂತೆ ರವಿ ಹಾಗೂ ಶಿವಕುಮಾರ್ ಮಧ್ಯೆ ಗಲಾಟೆ ನಡೆದಿತ್ತು. ಆಗ ನಾನು ಸ್ನೇಹಿತರೊಂದಿಗೆ ಅಲ್ಲೇ ಊಟ ಮಾಡುತ್ತಿದ್ದೆ. ಅವರಿಬ್ಬರ ಜಗಳದ ಮಧ್ಯೆ ನನ್ನ ಪಾತ್ರ ಏನೂ ಇಲ್ಲ. ಗಲಾಟೆ ಆದ ಬಳಿಕ ನಾನು ಅಲ್ಲಿಂದ ಹೊರಟು ಹೋದೆ. ಈ ಘಟನೆ ಬಗ್ಗೆ ನಾನು ಪೋಲೀಸರಿಗೆ ಹೇಳಿಕೆ ನೀಡಿದ್ದೇನೆ ಅಷ್ಟೇ ಎಂದು ರಾಗಿಣಿ ಸ್ಪಷ್ಟಪಡಿಸಿದ್ದರು.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm