ಬ್ರೇಕಿಂಗ್ ನ್ಯೂಸ್
03-09-20 06:07 pm Headline Karnataka News Network ಕರ್ನಾಟಕ
ಚಾಮರಾಜನಗರ, ಸೆಪ್ಟೆಂಬರ್ 3: ಅಕ್ರಮ ಮರಳು ಸಾಗಾಣಿಕೆಗೆ ಸಹಕರಿಸಿ, ಮರಳು ಲಾರಿಯ ಅಪಘಾತ ಪ್ರಕರಣವನ್ನು ತಿರುಚಿ ಕರ್ತವ್ಯಲೋಪ ಎಸಗಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಚಾಮರಾಜನಗರದ ಡಿವೈಎಸ್ಪಿ ಮೋಹನ್ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಡಿವೈಎಸ್ಪಿ ಜೆ.ಮೋಹನ್ ಅವರನ್ನು ಅಮಾನತುಗೊಳಿಸಲಾಗಿದೆ. ಕೆ.ಎಸ್.ಪಿ(ಡಿಪಿ) ನಿಯಮಗಳ 1965/89ರ ನಿಯಮ 5ರ ಅನ್ವಯ ಶಿಸ್ತು ಕ್ರಮ ಬಾಕಿ ಇರಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿ ಸರ್ಕಾರದ ಒಳಾಡಳಿತ ಇಲಾಖೆಯ (ಪೊಲೀಸ್ ಸೇವೆಗಳು) ಅಧೀನ ಕಾರ್ಯದರ್ಶಿ ಬಿ.ಕೆ ಭುವನೇಂದ್ರ ಕುಮಾರ್ ಈ ಆದೇಶ ಹೊರಡಿಸಿದ್ದಾರೆ.

ಮೇ 15 ರಂದು ಅಕ್ರಮವಾಗಿ ಮರಳು ಸಾಗಾಣಿಕೆ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಚಾಮರಾಜನಗರ ತಾಲೋಕಿನ ಮಾದಾಪುರದ ಬಳಿ ನಿಂತಿತ್ತು. ವಿಷಯ ಗೊತ್ತಾಗಿ ಚಾಮರಾಜನಗರ ಗ್ರಾಮಾಂತರ ಸರ್ಕಲ್ ಇನ್ಸ್ ಪೆಕ್ಟರ್ ಮಂಜು ತಮ್ಮ ಜೀಪಿನಲ್ಲಿ ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಪೊಲೀಸ್ ಜೀಪ್ ನೋಡಿದ ಚಾಲಕ ಟಿಪ್ಪರ್ ಲಾರಿಯಿಂದ ಇಳಿದು ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಎದುರಿನಿಂದ ಬಂದ ಮತ್ತೊಂದು ಲಾರಿ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದ.
ಆದರೆ ಅಕ್ರಮ ಮರಳು ಸಾಗಾಣಿಕೆ ವಿಚಾರ ಮೇಲಾಧಿಕಾರಿಗಳಿಗೆ ತಿಳಿದರೆ ತಮಗೆ ತೊಂದರೆಯಾಗುತ್ತದೆ ಎಂದು ಟಿಪ್ಪರ್ ನಲ್ಲಿದ್ದ ಮರಳನ್ನು ರಸ್ತೆ ಬದಿ ಸುರಿದು ಎಂ ಸ್ಯಾಂಡ್ ಸಾಗಾಣಿಕೆಯಾಗುತ್ತಿತ್ತು ಎಂದು ಬಿಂಬಿಸಲಾಗಿತ್ತು ಎಂಬ ಆರೋಪ ಪೊಲೀಸರ ಮೇಲೆ ಕೇಳಿ ಬಂದಿತ್ತು. ಈ ಆರೋಪದ ಮೇರೆಗೆ ಈಗಾಗಲೇ ಚಾಮರಾಜನಗರ ಗ್ರಾಮಾಂತರ ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎಂ ಮಂಜು, ಪೂರ್ವ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಎಸ್.ಪಿ ಸುನೀಲ್ ಹಾಗೂ ಹೆಡ್ ಕಾನ್ಸ್ ಟೇಬಲ್ ನಾಗ ನಾಯಕ ಎಂಬುವರನ್ನು ಅಮಾನತು ಮಾಡಲಾಗಿದೆ.
ಪೊಲೀಸರು ಯಾರಿಗೋ ಸಹಾಯ ಮಾಡಲು ತನಿಖೆಯನ್ನು ಸರಿಯಾಗಿ ಮಾಡದೆ ಕರ್ತವ್ಯ ಲೋಪ ಎಸಗಿದ್ದರು ಎಂಬ ಬಗ್ಗೆ ಸ್ಥಳೀಯರಿಂದ ದೂರುಗಳು ಬಂದಿದ್ದವು. ಈ ಹಿನ್ನಲೆಯಲ್ಲಿ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅನಿತಾಹದ್ದಣ್ಣನವರ್ ಮೇ 25 ರಂದು ಸಲ್ಲಿಸಿದ್ಡರು. ಡಿವೈಎಸ್ಪಿ ಜೆ.ಮೋಹನ್ ಗ್ರಾಮಾಂತರ ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎಂ ಮಂಜು, ಪೂರ್ವ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಎಸ್.ಪಿ ಸುನೀಲ್ ಅಕ್ರಮ ಮರಳು ಸಾಗಾಣಿಕೆದಾರರೊಂದಿಗೆ ಕೈ ಜೋಡಿಸಿದ್ದಾರೆ. ಜೊತೆಗೆ ತಮ್ಮ ವ್ಯಾಪ್ತಿಯಲ್ಲಿ ಅಕ್ರಮ ಮರಳು ಸಾಗಾಣಿಕೆಗೆ ಅನುವು ಮಾಡಿಕೊಟ್ಟು ಮರಳು ಟಿಪ್ಪರ್ ಲಾರಿ ಅಫಘಾತವಾದರೂ ತಮಗೆ ಸಮಸ್ಯೆಯಾಗಲಿದೆ ಎಂದು ಟಿಪ್ಪರ್ ಲಾರಿಯಲ್ಲಿದ್ದ ಮರಳನ್ನು ತೆರವುಗೊಳಿಸಿ, ಆ ಟಿಪ್ಪರ್ ಲಾರಿಗೆ ಎಂ.ಸ್ಯಾಂಡ್ ತುಂಬಿ ಮೂಲಕ ಪ್ರಕರಣ ತಿರುಚಲು ಪ್ರಯತ್ನಿಸಿ ಕರ್ತವ್ಯಲೋಪ ಎಸಗಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿತ್ತು.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm