ಬ್ರೇಕಿಂಗ್ ನ್ಯೂಸ್
20-07-21 03:46 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 20: ಸಿಎಂ ಯಡಿಯೂರಪ್ಪ ಸ್ಥಾನಕ್ಕೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿಯ ಹೆಸರು ಕೇಳಿ ಬರ್ತಿರುವಾಗಲೇ ನಿರಾಣಿ ವಿರುದ್ಧ ಭಾರೀ ವಂಚನೆ ಆರೋಪ ಕೇಳಿಬಂದಿದೆ. ಎನ್ ಜಿಓ ಸಂಸ್ಥೆಯೊಂದರ ಆಲಂ ಪಾಷಾ ಎನ್ನುವವರು ನಿರಾಣಿ ವಿರುದ್ಧ ಸುದ್ದಿಗೋಷ್ಠಿ ನಡೆಸಿದ್ದಾರೆ.
ನಿರಾಣಿಯವರು ಮುಧೋಳ, ಬೆಳಗಾವಿ, ಬಾಗಲಕೋಟ ಭಾಗದ ಸಾವಿರಾರು ಸಣ್ಣ ರೈತರ ಹೆಸರಲ್ಲಿ ಬೆಳೆ ಸಾಲ ಪಡೆದು ವಂಚನೆ ಮಾಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಬೆಳೆಸಾಲವನ್ನು ಬೋಗಸ್ ಹೆಸರಲ್ಲಿ ಪಡೆದು ಅದರ ಹಣವನ್ನು ವಿಜಯ ಸೌಹಾರ್ದ ಕ್ರೆಡಿಟ್ ಸಹಕಾರಿ ಲಿ.ನಲ್ಲಿ ಜಮಾವಣೆ ಮಾಡಿದ್ದಾರೆ. ಶೇ.4ರ ಬಡ್ಡಿದರ ಕೃಷಿ ಸಾಲವನ್ನು ರೈತರ ನಕಲಿ ಆಧಾರ್ ಕಾರ್ಡ್, ನಕಲಿ ಬ್ಯಾಂಕ್ ಖಾತೆ ಮೂಲಕ ಸಾವಿರಾರು ಕೋಟಿ ರೂಪಾಯಿ ಪಡೆದು ಅವ್ಯವಹಾರ ಮಾಡಿದ್ದಾರೆ. ವಿಜಯ ಸೌಹಾರ್ದ ಕ್ರೆಡಿಟ್ ಸೊಸೈಟಿ ಹೆಸರಲ್ಲಿ ಎಂಟು ಸಾವಿರ ಕೋಟಿ ಅವ್ಯವಹಾರ ನಡೆದಿದ್ದು ಈ ಬಗ್ಗೆ ಲೋಕಾಯುಕ್ತದಿಂದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಇದಲ್ಲದೆ, ಮುರುಗೇಶ್ ನಿರಾಣಿ ಒಬ್ಬ ಸಿಡಿ ಬಾಬಾ. ನಿರಾಣಿ ಬಳಿ 500 ಸಿಡಿಗಳಿವೆ. ಹಾಗಾಗಿ ಅವರಿಗೆ ಹೆದರಿ ಸಚಿವ ಸ್ಥಾನ ಕೊಡಲಾಗಿತ್ತು. ಅದಕ್ಕಾಗಿಯೇ ಕೆಲವರು ಕೋರ್ಟಿಗೆ ಹೋಗಿ ಸ್ಟೇ ತಂದಿದ್ದಾರೆ. ಕೋರ್ಟಿಗೆ ಹೋದವರ ಎಲ್ಲಾ ಸಿಡಿಗಳು ಇದೆ. ಆರು ಮಂತ್ರಿಗಳು ಸ್ಟೇ ತಗೊಂಡಿದ್ದಾರೆ. ಸಾರ್ವಜನಿಕ ವಲಯದಲ್ಲಿ ಇರುವವರು ಸ್ಟೇ ತಗೊಳ್ಳಬೇಕು ಯಾಕೆ ? ಆನೇ ಆರೋಪ ಬಂದರೂ ಅದನ್ನು ಎದುರಿಸೋದು ಬಿಟ್ಟು ಅದನ್ನು ಮಾಧ್ಯಮಗಳು ಪ್ರಕಟಿಸಲೇಬಾರದು ಎಂದು ಸ್ಟೇ ತಗೊಳ್ಳೋದು ಏಕೆ ಎಂದು ಪ್ರಶ್ನೆ ಮಾಡಿದ್ದಾರೆ ಆಲಂ ಪಾಷಾ.
ನಿರಾಣಿ ವಿರುದ್ಧ ಹಲವಾರು ಕ್ರಿಮಿನಲ್ ಕೇಸುಗಳಿವೆ. ಸಿಡಿ ಮುಂದಿಟ್ಟು ಸಿಎಂ ಸ್ಥಾನಕ್ಕೆ ಬರುತ್ತಿದ್ದಾರೆ. ಸಿಎಂ ಯಡಿಯೂರಪ್ಪ ಬಿಡುವ ಜಾಗದಲ್ಲಿ ಅವರ ಅಪ್ಪನಂಥವರನ್ನು ಯಾಕೆ ತರಬೇಕು ಎಂದು ಪ್ರಶ್ನಿಸಿದ ಪಾಷಾ, ಬಿಜೆಪಿಯಲ್ಲಾಗಲೀ ಕಾಂಗ್ರೆಸಿನಲ್ಲಾಗಲೀ ಇಂಥವರನ್ನು ಯಾಕೆ ಆಯ್ಕೆ ಮಾಡಬೇಕು. ಹಣಕಾಸು ಇದ್ದವರಿಗೆ ಮಾತ್ರ ಸಿಎಂ ಸ್ಥಾನವಾ ? ನಾನು ಹೇಳ್ತಿರೋದು ತಪ್ಪು ಆಗಿದ್ದಲ್ಲಿ ಸಚಿವರಾಗಿರುವ ನಿರಾಣಿ ನನ್ನನ್ನು ಅರೆಸ್ಟ್ ಮಾಡಲಿ ಎಂದು ಸವಾಲೆಸೆದರು. ಬೆಂಗಳೂರಿನಲ್ಲಿ ದಿ ಹೆಲ್ಪಿಂಗ್ ಸಿಟಿಜನ್ ಅಂಡ್ ಪೀಪಲ್ಸ್ ಕೋರ್ಟ್ ಎನ್ನುವ ಎನ್ ಜಿಓ ಸಂಸ್ಥೆಯನ್ನು ಆಲಂ ಪಾಷಾ ನಡೆಸುತ್ತಿದ್ದಾರೆ.
Video:
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 07:25 pm
HK News Staffer
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm