ಬ್ರೇಕಿಂಗ್ ನ್ಯೂಸ್
21-07-21 11:42 am Headline Karnataka ಕರ್ನಾಟಕ
ಬೆಂಗಳೂರು, ಜುಲೈ 21: ನಗರದ ವಿವಿಧೆಡೆಯಿರುವ ಓಲಾ ಮತ್ತು ಊಬರ್ ಕಚೇರಿಗಳ ಮೇಲೆ ಆರ್ಟಿಒ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಲೈಸೆನ್ಸ್ ಪಡೆಯುವ ವಿಚಾರದಲ್ಲಿ ಲೋಪಗಳಾಗಿರುವುದು ಮತ್ತು ಪ್ರಯಾಣಿಕರಿಗೆ ಸೇವೆ ಒದಗಿಸುವ ವಿಚಾರದಲ್ಲಿ ತಪ್ಪುಗಳಾಗಿರುವ ಬಗ್ಗೆ ದಾಳಿ ನಡೆಸಿದ ಅಧಿಕಾರಿಗಳು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ಸಂಸ್ಥೆಗಳಿಗೆ ಪೂರಕ ದಾಖಲೆಗಳನ್ನು ಒದಗಿಸಲು ಕಾಲಾವಕಾಶ ನೀಡಲಾಗಿದೆ.
ಕೋರಮಂಗಲದಲ್ಲಿರುವ ಓಲಾ ಕಚೇರಿ ಮೇಲೆ RTO ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಯಾಣಿಕರಿಂದ ನಿಗದಿತ ದರಕ್ಕಿಂತ ಹೆಚ್ಚು ಹಣ ಪಡೆಯುತ್ತಿದ್ದಾರೆ, ನಿಗದಿತ ಸ್ಥಳಕ್ಕೆ ಸೂಕ್ತ ಸಮಯಕ್ಕೆ ಬರುವುದಿಲ್ಲ, ಡ್ರೈವಿಂಗ್ ಲೈಸೆನ್ಸ್ ಇಲ್ಲದವರು ವಾಹನ ಚಾಲನೆ ಮಾಡುತ್ತಿದ್ದಾರೆ, ಮೋಟಾರು ವಾಹನ ಕಾಯ್ದೆ ಉಲ್ಲಂಘನೆಯಾಗಿದೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಯಿತು ಎಂದು ಸಾರಿಗೆ ಇಲಾಖೆ ಜಂಟಿ ಆಯುಕ್ತ ಹಾಲಸ್ವಾಮಿ ಹೇಳಿದರು.

ದಾಳಿ ವೇಳೆ ಸಂಸ್ಥೆಯ ಸಿಬ್ಬಂದಿಗೆ ತಕ್ಷಣಕ್ಕೆ ಸೂಕ್ತ ದಾಖಲೆ ಒದಗಿಸಲು ಸಾಧ್ಯವಾಗಿಲ್ಲ. ದಾಖಲೆಗಳನ್ನು ಒದಗಿಸಲು ಕಾಲಾವಕಾಶ ಕೇಳಿದ್ದಾರೆ. ಕಾನೂನು ರೀತಿಯಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ. ಕೆಲ ಮಾಲೀಕರು ಚಾಲಕರಿಗೂ ಸರಿಯಾಗಿ ಹಣ ಕೊಡುತ್ತಿಲ್ಲ ಎಂಬ ಆರೋಪಗಳು ಕೇಳಿ ಬಂದಿದ್ದವು ಎಂದು ತಿಳಿಸಿದರು.
ಇಂದ್ರ ನಗರದ ಊಬರ್ ಕಚೇರಿಯ ಮೇಲೆಯೂ ಆರ್ಟಿಒ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿಯ ಕುರಿತು ಮಾಹಿತಿ ನೀಡಿದ ಹಿರಿಯ ಮೋಟಾರು ವಾಹನ ತನಿಖಾಧಿಕಾರಿ ನಾಸೀರ್ ಅಹಮ್ಮದ್, ಪ್ರಯಾಣಿಕರ ದೂರಿನ ಮೇರೆಗೆ ದಾಳಿ ನಡೆಸಿದ್ದೇವೆ. 100 ವಾಹನಗಳ ಸಂಚಾರಕ್ಕೆ ಅನುಮತಿ ಪಡೆದು, 10 ಸಾವಿರಕ್ಕೂ ಹೆಚ್ಚು ವಾಹನಗಳು ಓಡಾಡುತ್ತಿದ್ದವು. ಲಾಕ್ಡೌನ್ಗೂ ಮೊದಲು 5 ಸಾವಿರ ವಾಹನಗಳು ಓಡುತ್ತಿದ್ದವು ಎಂಬ ದೂರುಗಳು ಬಂದಿದ್ದವು. ದಾಖಲೆ ಸಲ್ಲಿಸಲು ಓಲಾ ಸಂಸ್ಥೆಯ ಸಿಬ್ಬಂದಿ ಕಾಲಾವಕಾಶ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.
ಸಾರಿಗೆ ಇಲಾಖೆಗೆ ಪ್ರತಿ ಮೂರು ತಿಂಗಳಿಗೊಮ್ಮೆ ಚಾಲಕರ ವಿವರ, ವಾಹನಗಳ ವಿವರ, ವಿಮೆ, ಅರ್ಹತಾ ಪ್ರಮಾಣ ಪ್ರಮಾಣಪತ್ರ, ವಾಯುಮಾಲಿನ್ಯ ನಿಯಂತ್ರಣ ಪ್ರಮಾಣಪತ್ರಗಳನ್ನು ಆರ್ಟಿಒಗೆ ಸಲ್ಲಿಸಬೇಕು ಈ ನಿಯಮಗಳ ಪಾಲನೆಯಾಗಿಲ್ಲ ಎಂಬ ದೂರುಗಳಿವೆ ಎಂದು ಅವರು ಹೇಳಿದರು.
The transport department conducted raids at offices of app-based aggregators of Ola and Uber in the city.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm