ಬ್ರೇಕಿಂಗ್ ನ್ಯೂಸ್
21-07-21 02:52 pm Headline Karnataka News Network ಕರ್ನಾಟಕ
ಚಿತ್ರದುರ್ಗ, ಜುಲೈ 21 : ಕೇಂದ್ರ ಸರ್ಕಾರ ಸಿಎಂ ಬದಲಾವಣೆ ವಿಚಾರದಲ್ಲಿ ಮೂಗು ತೂರಿಸದೆ ಆರ್ಥಿಕ ನೆರವು ನೀಡಿ ಸಾಕು. ಯಡಿಯೂರಪ್ಪ ಅವರನ್ನು ಪೂರ್ಣಾವಧಿಗೆ ಸಿಎಂ ಆಗಿ ಮುಂದುವರೆಸುವ ಕೆಲಸ ಮಾಡಬೇಕು ಎಂದು ಸಾಣೆಹಳ್ಳಿ ಪಂಡಿತಾರಾಧ್ಯ ಸ್ವಾಮೀಜಿ ಹೇಳಿದ್ದಾರೆ.
ಅವರು ಚಿತ್ರದುರ್ಗದಿಂದ ವಿಡಿಯೋ ಮೂಲಕ ಬಿಜೆಪಿ ರಾಷ್ಟ್ರೀಯ ನಾಯಕರಿಗೆ ಸಂದೇಶವನ್ನು ರವಾನಿಸಿದ್ದಾರೆ. ಸಿಎಂ ಯಡಿಯೂರಪ್ಪ ಅವರನ್ನು ಬದಲಾಯಿಸುವ ವಿಚಾರ ಪದೆ ಪದೇ ಹರಿದಾಡುತ್ತಿದೆ. ಯಾವುದೇ ಸರ್ಕಾರ ಪೂರ್ಣಾವಧಿಯ ಸಮಯವಿದ್ದಾಗ ಮಾತ್ರ ಒಳ್ಳೆಯ ಆಡಳಿತ ನೀಡಲು ಸಾಧ್ಯ. ಅದು ಬಿಟ್ಟು ಕೇಂದ್ರ ಸರ್ಕಾರ, ರಾಜ್ಯ ಸರ್ಕಾರದ ಮೇಲೆ ಹತೋಟಿ ಸಾಧಿಸುವ ಸಂಚು ಮಾಡಿದರೆ ಎಂತಹ ಸಿಎಂ ಕೂಡ ಪರಿಪೂರ್ಣ ಆಡಳಿತ ನೀಡಲು ಸಾಧ್ಯವಿಲ್ಲ. ಇದರಿಂದಾಗಿ ಯಡಿಯೂರಪ್ಪ ಅವರ ಕೈ ಕಟ್ಟಿದಂತಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪ್ರತಿನಿಧಿಗಳಿಗೆ ನಾವು ಹೇಳೋದು ಎಲ್ಲರೂ ಒಳ್ಳೆ ಆಡಳಿತ ನೀಡಲು ಸಹಕರಿಸಿ ಎಂದರು.
ಯಾವುದೇ ಪಕ್ಷದ ಸಿಎಂ ಐದು ವರ್ಷಗಳ ಕಾಲ ಮುಂದುವರೆದರೆ ಮಾತ್ರ ಒಳ್ಳೆ ಕೆಲಸ ಆಗುತ್ತದೆ. ಈ ನಿಟ್ಟಿನಲ್ಲಿ ಸಿಎಂ ಗೆ ಪೂರ್ಣ ಸ್ವಾತಂತ್ರ್ಯ ನೀಡಿ. ಉತ್ತಮ ಆಡಳಿತ ಮಾಡಲು ಅವಕಾಶ ನೀಡಬೇಕು. ಒಂದು ವೇಳೆ ಅವರ ಆಡಳಿತದಲ್ಲಿ ದೋಷ ಕಂಡುಬಂದಾಗ ಕ್ರಮ ತೆಗೆದುಕೊಳ್ಳಬೇಕು. ಅದು ಬಿಟ್ಟು ಪದೇ ಪದೇ ಸಿಎಂ ಬದಲಾವಣೆ ಮಾಡಿದರೆ ಅಧಿಕಾರಿಗಳು ಕೂಡ ಉತ್ತಮ ಕೆಲಸ ಮಾಡದೆ ಇರುವ ಸನ್ನಿವೇಶ ನಿರ್ಮಾಣ ಆಗುತ್ತದೆ. ಇದನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ ಹಾಲಿ ಸಿಎಂ ಯಡಿಯೂರಪ್ಪ ಅವರನ್ನು ಮುಂದುವರೆಸಬೇಕು. ಎರಡು ವರ್ಷಗಳ ಕಾಲ ಕೋವಿಡ್ ಸಮಯದಲ್ಲಿ ಯಡಿಯೂರಪ್ಪ ಉತ್ತಮ ಕೆಲಸ ಮಾಡಿರುವುದು ಎಲ್ಲರಿಗೂ ತಿಳಿದಿದೆ. ಇಂತಹ ಸಮಯದಲ್ಲಿ ಯಾವುದೋ ಒಂದು ಸಣ್ಣ ನೆಪ ಮಾಡಿಕೊಂಡು ಸಿಎಂ ಬದಲಾವಣೆ ಮಾಡುವ ಕೃತ್ಯ ಒಳ್ಳೆಯ ರಾಜಕಾರಣದ ಸಂಕೇತ ಅಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇನ್ನಾದರೂ ಕೇಂದ್ರ ಸರ್ಕಾರ ಮೂಗು ತೂರಿಸದೆ ಕಿರುಕುಳ ನೀಡದೆ ಆರ್ಥಿಕ ನೆರವು ನೀಡುವ ಮೂಲಕ ಉತ್ತಮ ಕೆಲಸ ಮಾಡಲು ಹಾಲಿ ಸಿಎಂ ಯಡಿಯೂರಪ್ಪ ಅವರನ್ನೆ ಮುಂದುವರೆಸಲು ಪ್ರಯತ್ನ ಮಾಡಬೇಕು ಎಂದಿದ್ದಾರೆ.
Amid speculation about a change of leadership in Karnataka, Chief Minister BS Yediyurappa received the support of senior Congress leaders from the Lingayat community and seers from various mutts in the state.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 07:25 pm
HK News Staffer
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm
ಧರ್ಮಸ್ಥಳ ಶವ ಹೂತಿಟ್ಟ ಪ್ರಕರಣ ; ಒಂದು ವರ್ಷದ ಬಳಿಕ...
15-07-26 07:40 pm