ಬ್ರೇಕಿಂಗ್ ನ್ಯೂಸ್
25-07-21 09:29 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 25: ಸಿಎಂ ಬದಲಾವಣೆ ಬಗ್ಗೆ ಬಿಜೆಪಿ ಹೈಕಮಾಂಡ್ ನೀಡಿದ್ದ ಜುಲೈ 25ರ ಗಡುವು ಮುಗಿದಿದ್ದು ಮೇಲಿನಿಂದ ಬರುತ್ತೆ ಎಂದು ಕಾದಿದ್ದ ಆದೇಶ ಇನ್ನೂ ಬಂದಿಲ್ಲ. ಹೀಗಾಗಿ ಕೊನೆಯ ದಿನದ ಆಟ ನಾಳೆಗೆ ಶಿಫ್ಟ್ ಆಗಿದೆ. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಸುದ್ದಿಗಾರರ ಪ್ರಶ್ನೆಗೆ ಸಂಜೆ ವೇಳೆಗೆ ಮತ್ತೊಂದು ದಾಳ ಎಸೆಯುವ ರೀತಿ ಉತ್ತರ ಕೊಟ್ಟಿದ್ದಾರೆ.
ಇಂದು ರಾತ್ರಿ ವರೆಗೂ ಹೈಕಮಾಂಡ್ ಆದೇಶಕ್ಕೆ ಕಾಯುತ್ತೇನೆ. ಏನು ಸುದ್ದಿ ಬರುತ್ತೆ ಅಂತ ಬೆಳಗ್ಗೆ ಹೇಳುತ್ತೇನೆ. ಅಲ್ಲಿ ವರೆಗೂ ಕಾಯಿರಿ. ಹೈಕಮಾಂಡ್ ಹೇಳಿದರೆ ರಾಜಿನಾಮೆ ನೀಡುತ್ತೇನೆ. ಪಕ್ಷದ ಕೆಲಸ ಮಾಡಲು ಹೇಳಿದರೆ ಅದನ್ನೂ ಮಾಡುತ್ತೇನೆ. ನಾನು ಎಲ್ಲದಕ್ಕೂ ಸಿದ್ಧವಾಗಿದ್ದೇನೆ. ಮುಖ್ಯಮಂತ್ರಿ ಬದಲಾವಣೆ ಏಕೆ ಮಾಡುತ್ತಾರೆಂದು ನನಗೆ ತಿಳಿದಿಲ್ಲ. ಕೊನೆ ಕ್ಷಣದ ವರೆಗೂ ಕೆಲಸ ಮಾಡುತ್ತೇನೆ ಎಂದು ಅಡ್ಡಗೋಡೆ ಮೇಲೆ ದೀಪ ಇಟ್ಟ ರೀತಿ ಹೇಳಿಕೆ ನೀಡಿದ್ದಾರೆ.
ಇಂದು ಬೆಳಗ್ಗೆ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ್ದ ಯಡಿಯೂರಪ್ಪ, ಸಂಜೆಯೊಳಗೆ ಹೈಕಮಾಂಡ್ ಆದೇಶ ಬರಲಿದೆ, ಕಾದು ನೋಡಿ ಎಂದು ಹೇಳಿಕೆ ನೀಡಿ ಕುತೂಹಲ ಮೂಡಿಸಿದ್ದರು. ಆದರೆ ಗಡುವು ಕಳೆದರೂ ಹೈಕಮಾಂಡ್ ಕಡೆಯಿಂದ ಯಾವುದೇ ಕಮಾಂಡ್ ಬರದೇ ಇರುವುದು ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಕುತೂಹಲ ಹೆಚ್ಚಿಸಿದೆ.
ನಾಳೆ ಜುಲೈ 26 ಕ್ಕೆ ಬಿಜೆಪಿ ಸರಕಾರಕ್ಕೆ ಎರಡು ವರ್ಷ ಪೂರೈಸಲಿದ್ದು ಅದರ ಪ್ರಯುಕ್ತ ಬೆಂಗಳೂರಿನಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಎರಡು ವರ್ಷದ ಸಾಧನೆಯ ಬಗ್ಗೆ ಯಡಿಯೂರಪ್ಪ ಭಾಷಣ ಮಾಡಲಿದ್ದಾರೆ. ಆದರೆ ಅದಕ್ಕೂ ಮುನ್ನ ಹೈಕಮಾಂಡ್ ಕಡೆಯಿಂದ ಸಿಎಂ ಸ್ಥಾನದಿಂದ ಇಳಿಯಲು ಸೂಚನೆ ಕೊಟ್ಟರೆ ಯಡಿಯೂರಪ್ಪ ವಿದಾಯ ಭಾಷಣ ಮಾಡಲಿದ್ದಾರೆ ಎನ್ನಲಾಗುತ್ತಿದೆ.
ಆದರೆ, ಇದೇ ಸಂದರ್ಭದಲ್ಲಿ ಗೋವಾಕ್ಕೆ ಬಂದಿದ್ದ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಯಡಿಯೂರಪ್ಪ ಸರಕಾರದ ಬಗ್ಗೆ ಬಹುಪರಾಕ್ ಹೇಳಿದ್ದಾರೆ. ಯಡಿಯೂರಪ್ಪ ಕರ್ನಾಟಕದಲ್ಲಿ ಒಳ್ಳೆ ಆಡಳಿತ ನೀಡುತ್ತಿದ್ದಾರೆ ಎಂದು ಹೇಳಿದ್ದು ಸಿಎಂ ಯಡಿಯೂರಪ್ಪ ಬೀಸೋ ದೊಣ್ಣೆಯಿಂದ ಸದ್ಯಕ್ಕೆ ಪಾರಾದ್ರಾ ಎನ್ನುವ ಕುತೂಹಲದ ಪ್ರಶ್ನೆ ಎದುರಾಗಿದೆ.
ಒಂದೆಡೆ 500ಕ್ಕೂ ಹೆಚ್ಚು ಲಿಂಗಾಯತ ಸ್ವಾಮೀಜಿಗಳ ಶಕ್ತಿಪ್ರದರ್ಶನ, ಇನ್ನೊಂದೆಡೆ ಪ್ರವಾಹ ಪೀಡಿತ ಪ್ರದೇಶದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದು ಹೈಕಮಾಂಡ್ ರಾಜಕೀಯ ಲೆಕ್ಕಾಚಾರವನ್ನು ಬುಡಮೇಲು ಮಾಡುತ್ತಾ ಎನ್ನುವ ಹೊಸ ಲೆಕ್ಕ ಶುರುವಾಗಿದೆ.
With no official word yet from the BJP high command on leadership change in the state, chief minister B S Yediyurappa on Sunday July 25 evening said that a decision on whether he will continue in office or not will be known by Monday July 26. The speculation about change of guard had gained momentum in the state after the 78-year-old Lingayat strongman and BJP's aging mascot in Karnataka had stated that he would abide by the party high command's decision whether to remain CM or step down.
15-04-25 12:51 pm
HK News Desk
Hubballi encounter, PSI Annapurna: ಹುಬ್ಬಳ್ಳಿ...
14-04-25 09:48 pm
Bangalore Suicide: ಅಪಾರ್ಟ್ಮೆಂಟ್ನ ನಾಲ್ಕನೇ ಮಹ...
14-04-25 07:51 pm
Kannada comedy actor Bank Janardhan, Death: ಕ...
14-04-25 03:09 pm
SIT, Probe, Dysp Kanakalakshmi: ಸಿಐಡಿ ಡಿವೈಎಸ್...
14-04-25 02:06 pm
15-04-25 04:40 pm
HK News Desk
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
ಕುರಾನ್ ಪ್ರತಿ, ಪೆನ್- ಪೇಪರ್ ಪಡೆದ ತಹಾವ್ವುರ್ ರಾಣಾ...
13-04-25 06:15 pm
Waqf clashes: ವಕ್ಫ್ ವಿರುದ್ಧ ಬೀದಿಗಿಳಿದ ಜನರು ;...
12-04-25 09:01 pm
14-04-25 09:20 pm
Mangalore Correspondent
Drowning Ullal, Mangalore: ಉಳ್ಳಾಲದಲ್ಲಿ ಸಮುದ್ರ...
13-04-25 05:20 pm
ಮಂಗಳೂರಿಗೆ ಮತ್ತೊಂದು ವಂದೇ ಭಾರತ್ ರೈಲು ; ಪ್ರತ್ಯೇಕ...
13-04-25 01:27 pm
Siddaramaiah, caste census, Somanna: ಜಾತಿಗಣತಿ...
12-04-25 10:13 pm
Mangalore Kambala, Dk Shivakumar: ಮುಂದಿನ ವರ್ಷ...
12-04-25 09:43 pm
15-04-25 06:17 pm
HK News Desk
Mangalore Crime, Fire: ಕುಡಿದ ಮತ್ತಿನಲ್ಲಿ ಏಸಿಡ್...
15-04-25 05:13 pm
Mangalore CCB, Drugs, Crime: ಮಂಗಳೂರು ಸಿಸಿಬಿ ಪ...
12-04-25 10:52 pm
ಸರ್ಕಾರಿ ಅಧಿಕಾರಿ ಸೋಗಿನಲ್ಲಿ ನಕಲಿ ಕೋರ್ಟ್ ಆದೇಶ ಸೃ...
12-04-25 01:53 pm
Cyber Command Centre, Bangalore: ದೇಶದ ಮೊದಲ ಸೈ...
11-04-25 04:38 pm