ಬ್ರೇಕಿಂಗ್ ನ್ಯೂಸ್
25-07-21 09:29 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 25: ಸಿಎಂ ಬದಲಾವಣೆ ಬಗ್ಗೆ ಬಿಜೆಪಿ ಹೈಕಮಾಂಡ್ ನೀಡಿದ್ದ ಜುಲೈ 25ರ ಗಡುವು ಮುಗಿದಿದ್ದು ಮೇಲಿನಿಂದ ಬರುತ್ತೆ ಎಂದು ಕಾದಿದ್ದ ಆದೇಶ ಇನ್ನೂ ಬಂದಿಲ್ಲ. ಹೀಗಾಗಿ ಕೊನೆಯ ದಿನದ ಆಟ ನಾಳೆಗೆ ಶಿಫ್ಟ್ ಆಗಿದೆ. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಸುದ್ದಿಗಾರರ ಪ್ರಶ್ನೆಗೆ ಸಂಜೆ ವೇಳೆಗೆ ಮತ್ತೊಂದು ದಾಳ ಎಸೆಯುವ ರೀತಿ ಉತ್ತರ ಕೊಟ್ಟಿದ್ದಾರೆ.
ಇಂದು ರಾತ್ರಿ ವರೆಗೂ ಹೈಕಮಾಂಡ್ ಆದೇಶಕ್ಕೆ ಕಾಯುತ್ತೇನೆ. ಏನು ಸುದ್ದಿ ಬರುತ್ತೆ ಅಂತ ಬೆಳಗ್ಗೆ ಹೇಳುತ್ತೇನೆ. ಅಲ್ಲಿ ವರೆಗೂ ಕಾಯಿರಿ. ಹೈಕಮಾಂಡ್ ಹೇಳಿದರೆ ರಾಜಿನಾಮೆ ನೀಡುತ್ತೇನೆ. ಪಕ್ಷದ ಕೆಲಸ ಮಾಡಲು ಹೇಳಿದರೆ ಅದನ್ನೂ ಮಾಡುತ್ತೇನೆ. ನಾನು ಎಲ್ಲದಕ್ಕೂ ಸಿದ್ಧವಾಗಿದ್ದೇನೆ. ಮುಖ್ಯಮಂತ್ರಿ ಬದಲಾವಣೆ ಏಕೆ ಮಾಡುತ್ತಾರೆಂದು ನನಗೆ ತಿಳಿದಿಲ್ಲ. ಕೊನೆ ಕ್ಷಣದ ವರೆಗೂ ಕೆಲಸ ಮಾಡುತ್ತೇನೆ ಎಂದು ಅಡ್ಡಗೋಡೆ ಮೇಲೆ ದೀಪ ಇಟ್ಟ ರೀತಿ ಹೇಳಿಕೆ ನೀಡಿದ್ದಾರೆ.
ಇಂದು ಬೆಳಗ್ಗೆ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ್ದ ಯಡಿಯೂರಪ್ಪ, ಸಂಜೆಯೊಳಗೆ ಹೈಕಮಾಂಡ್ ಆದೇಶ ಬರಲಿದೆ, ಕಾದು ನೋಡಿ ಎಂದು ಹೇಳಿಕೆ ನೀಡಿ ಕುತೂಹಲ ಮೂಡಿಸಿದ್ದರು. ಆದರೆ ಗಡುವು ಕಳೆದರೂ ಹೈಕಮಾಂಡ್ ಕಡೆಯಿಂದ ಯಾವುದೇ ಕಮಾಂಡ್ ಬರದೇ ಇರುವುದು ರಾಜ್ಯ ರಾಜಕೀಯದಲ್ಲಿ ಮತ್ತಷ್ಟು ಕುತೂಹಲ ಹೆಚ್ಚಿಸಿದೆ.
ನಾಳೆ ಜುಲೈ 26 ಕ್ಕೆ ಬಿಜೆಪಿ ಸರಕಾರಕ್ಕೆ ಎರಡು ವರ್ಷ ಪೂರೈಸಲಿದ್ದು ಅದರ ಪ್ರಯುಕ್ತ ಬೆಂಗಳೂರಿನಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಎರಡು ವರ್ಷದ ಸಾಧನೆಯ ಬಗ್ಗೆ ಯಡಿಯೂರಪ್ಪ ಭಾಷಣ ಮಾಡಲಿದ್ದಾರೆ. ಆದರೆ ಅದಕ್ಕೂ ಮುನ್ನ ಹೈಕಮಾಂಡ್ ಕಡೆಯಿಂದ ಸಿಎಂ ಸ್ಥಾನದಿಂದ ಇಳಿಯಲು ಸೂಚನೆ ಕೊಟ್ಟರೆ ಯಡಿಯೂರಪ್ಪ ವಿದಾಯ ಭಾಷಣ ಮಾಡಲಿದ್ದಾರೆ ಎನ್ನಲಾಗುತ್ತಿದೆ.
ಆದರೆ, ಇದೇ ಸಂದರ್ಭದಲ್ಲಿ ಗೋವಾಕ್ಕೆ ಬಂದಿದ್ದ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ, ಯಡಿಯೂರಪ್ಪ ಸರಕಾರದ ಬಗ್ಗೆ ಬಹುಪರಾಕ್ ಹೇಳಿದ್ದಾರೆ. ಯಡಿಯೂರಪ್ಪ ಕರ್ನಾಟಕದಲ್ಲಿ ಒಳ್ಳೆ ಆಡಳಿತ ನೀಡುತ್ತಿದ್ದಾರೆ ಎಂದು ಹೇಳಿದ್ದು ಸಿಎಂ ಯಡಿಯೂರಪ್ಪ ಬೀಸೋ ದೊಣ್ಣೆಯಿಂದ ಸದ್ಯಕ್ಕೆ ಪಾರಾದ್ರಾ ಎನ್ನುವ ಕುತೂಹಲದ ಪ್ರಶ್ನೆ ಎದುರಾಗಿದೆ.
ಒಂದೆಡೆ 500ಕ್ಕೂ ಹೆಚ್ಚು ಲಿಂಗಾಯತ ಸ್ವಾಮೀಜಿಗಳ ಶಕ್ತಿಪ್ರದರ್ಶನ, ಇನ್ನೊಂದೆಡೆ ಪ್ರವಾಹ ಪೀಡಿತ ಪ್ರದೇಶದಲ್ಲಿ ತನ್ನನ್ನು ತೊಡಗಿಸಿಕೊಂಡಿದ್ದು ಹೈಕಮಾಂಡ್ ರಾಜಕೀಯ ಲೆಕ್ಕಾಚಾರವನ್ನು ಬುಡಮೇಲು ಮಾಡುತ್ತಾ ಎನ್ನುವ ಹೊಸ ಲೆಕ್ಕ ಶುರುವಾಗಿದೆ.
With no official word yet from the BJP high command on leadership change in the state, chief minister B S Yediyurappa on Sunday July 25 evening said that a decision on whether he will continue in office or not will be known by Monday July 26. The speculation about change of guard had gained momentum in the state after the 78-year-old Lingayat strongman and BJP's aging mascot in Karnataka had stated that he would abide by the party high command's decision whether to remain CM or step down.
26-06-25 10:37 pm
HK News Desk
Heart Attack, Hassan District: ಹಾಸನ ಜಿಲ್ಲೆಯಲ್...
26-06-25 02:15 pm
ಬೈಕ್ ಟ್ಯಾಕ್ಸಿ ನಿಷೇಧಿಸುವ ಅಧಿಕಾರ ರಾಜ್ಯ ಸರ್ಕಾರಕ್...
26-06-25 12:44 pm
Bangalore Old Couple Suicide, Crime: ಬೆಂಗಳೂರಲ...
25-06-25 10:32 pm
Bomb Threat, Arrest, Udupi: ಲವ್ ನಿರಾಕರಿಸಿದ್ದಕ...
25-06-25 02:56 pm
26-06-25 10:22 pm
HK News Desk
ರೈಲು ಹಳಿ ಮೇಲೆ ಕಾರು ಓಡಿಸಿ ಹುಚ್ಚಾಟ ; ಆಂಟಿಯ ರಂಪಾ...
26-06-25 07:40 pm
PFI Hit List 977, Kerala, NIA: ಕೇರಳದಲ್ಲಿ ಹಿಂದ...
25-06-25 10:05 pm
Vijayan Chennai, Donation, Property: ದಾಂಪತ್ಯ...
25-06-25 07:40 pm
ಕದನ ವಿರಾಮ ಉಲ್ಲಂಘನೆ ; ಕೂಡಲೇ ಸೇನಾ ಕಾರ್ಯಾಚರಣೆ ನ...
25-06-25 11:10 am
26-06-25 10:08 pm
Mangalore Correspondent
St. Anthony’s Church Puttur, News, Cemetery:...
26-06-25 12:02 pm
Canara Bank, Suicide, Mangalore: ತಾನು ಕೆಲಸ ಮಾ...
26-06-25 11:52 am
Lokayukta Raids Mangalore City Corporation, M...
25-06-25 10:46 pm
C T Ravi, Mangalore, Kharge: ತುರ್ತು ಸ್ಥಿತಿ ಸಂ...
25-06-25 09:27 pm
26-06-25 10:49 pm
Mangalore Correspondent
Varkady, Manjeshwar Crime, Son Kills Mother:...
26-06-25 05:32 pm
Mangalore Youth, IIT Bombay Campus, Crime Bra...
26-06-25 02:54 pm
“Pastor Alwyn Dmello, Mangalore: The Foreign...
26-06-25 12:42 am
Puttur rape, Crime: ಸಹಪಾಠಿ ವಿದ್ಯಾರ್ಥಿನಿಯನ್ನು...
25-06-25 11:11 pm