ಬ್ರೇಕಿಂಗ್ ನ್ಯೂಸ್
26-07-21 05:27 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 26: ಸಿಎಂ ಸ್ಥಾನಕ್ಕೆ ಯಡಿಯೂರಪ್ಪ ರಾಜಿನಾಮೆ ನೀಡುತ್ತಿದ್ದಂತೆ ಕರ್ನಾಟಕ ಕಾಂಗ್ರೆಸ್, ರಾಜ್ಯ ಬಿಜೆಪಿಯನ್ನು ತಿವಿಯುವ ರೀತಿ ಟ್ವೀಟ್ ಮೂಲಕ ಟೀಕೆ ಮಾಡಿದೆ. ವಾರದ ಹಿಂದೆ ಆಡಿಯೋ ಹೊರ ಬಂದಿದ್ದನ್ನು ನೆಪವಾಗಿರಿಸಿ, ಮೀರ್ ಸಾದಿಕ್ ಕಟೀಲರ ಆಡಿಯೋ ಮಿಮಿಕ್ರಿ ಆರ್ಟಿಸ್ಟ್ ನಳಿನ್ ಕುಮಾರ್ ಕಟೀಲು ಅವರೇ ಅನ್ನುವುದು ಸಾಬೀತಾಯ್ತು. ಯಡಿಯೂರಪ್ಪ ಬಿಜೆಪಿ ಪಾಲಿಗೆ ಆತ್ಮ ಎನ್ನುತ್ತಲೇ ಆತ್ಮವಂಚನೆಯ ಕೆಲಸ ಮಾಡಿದ್ದಾರೆ. ಅವರು ಇಂದು ‘ಸಂತೋಷ’ದಿಂದ ಕುಣಿದು ಕುಪ್ಪಳಿಸುತ್ತಿರಬಹುದು. ಅದೇನೇ ಆದರೂ ಹಿರಿಯ ನಾಯಕನಿಗೆ ಕಣ್ಣೀರು ಹಾಕುವ ಕಷ್ಟ ಕೊಡಬಾರದಿತ್ತು ಎಂದು ಟ್ವೀಟ್ ಮಾಡಿದೆ.


ಮೀರ್ಸಾದಿಕ್ ಕಟೀಲರ ಆಡಿಯೋದ ಮಿಮಿಕ್ರೀ ಆರ್ಟಿಸ್ಟ್ ಸ್ವತಃ @nalinkateel ಅವರೇ ಎನ್ನುವುದು ಸಾಭೀತಾಯ್ತು!@BSYBJP ಅವರು ಬಿಜೆಪಿಯ ಆತ್ಮ ಎನ್ನುತ್ತಲೇ ಆತ್ಮ'ವಂಚನೆ' ಮಾಡಿದ ಕಟೀಲ್ ಇಂದು ಬಲು 'ಸಂತೋಷ'ದಿಂದ ಕುಣಿದು ಕುಪ್ಪಳಿಸುತ್ತಿರಬಹುದು!
— Karnataka Congress (@INCKarnataka) July 26, 2021
ಅದೇನೇ ಆದರೂ ಹಿರಿಯ ನಾಯಕನಿಗೆ ಕಣ್ಣೀರು ಹಾಕುವಂತಹ ಕಷ್ಟ ಕೊಡಬಾರದಿತ್ತು @BJP4Karnataka!
ಮೊನ್ನೆ ಮೊನ್ನೆ ವರೆಗೂ ಇನ್ನೆರಡು ವರ್ಷ ನಾನೇ ಸಿಎಂ ಎನ್ನುತ್ತಿದ್ದವರು ಈಗ ರಾಜಿನಾಮೆ ನೀಡಿದ ಕಾರಣವೇನು ? ನಿಮ್ಮ ಭೀಷ್ಮನನ್ನು ಸಿ.ಟಿ.ರವಿ, ನಳಿನ್ ಕಟೀಲ್ ಸೇರಿ ಬಾಣ ಬಿಟ್ಟು ಶರಶಯ್ಯೆಯಲ್ಲಿ ಮಲಗಿಸಿಬಿಟ್ಟಿರಲ್ಲ. ಅವರ ಕಣ್ಣೀರಿಗೆ ನಿಮ್ಮ ದ್ರೋಹ ಕಾರಣವಲ್ಲವೇ ? ಎಂದು ಮತ್ತೊಂದು ಟ್ವೀಟ್ ನಲ್ಲಿ ಪ್ರಶ್ನೆ ಮಾಡಿದೆ.

ಇದೇ ವಿಚಾರದಲ್ಲಿ ಟ್ವೀಟ್ ಮೂಲಕ ಪ್ರಶ್ನೆ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಇದು ಒಬ್ಬ ವ್ಯಕ್ತಿಯ ಕಣ್ಣೀರಲ್ಲ. ರಾಜ್ಯವನ್ನು ಪ್ರತಿನಿಧಿಸುವ ಮುಖ್ಯಮಂತ್ರಿಯ ಕಣ್ಣೀರು. ಅವರ ರಾಜಿನಾಮೆ ಹಿಂದೆ ಸಂತೋಷ ಕಾಣಲಿಲ್ಲ. ಬದಲಿಗೆ ಅವರ ನಿರ್ಧಾರದಲ್ಲಿ ನೋವಿತ್ತು. ಆ ನೋವು ಕೊಟ್ಟವರು ಯಾರು ಎಂಬ ಬಗ್ಗೆ ರಾಜ್ಯದ ಜನರಿಗೆ ತಿಳಿಸಬೇಕು ಎಂದಿದ್ದಾರೆ.
ರಾಜೀನಾಮೆ ವಿಚಾರ ಪ್ರಸ್ತಾಪಿಸಿದ @BSYBJP ಅವರು ಕಣ್ಣೀರಿಟ್ಟಿದ್ದು, ಇದು ಒಬ್ಬ ವ್ಯಕ್ತಿಯ ಕಣ್ಣೀರಲ್ಲ, ರಾಜ್ಯವನ್ನು ಪ್ರತಿನಿಧಿಸುವ ಮುಖ್ಯಮಂತ್ರಿಯ ಕಣ್ಣೀರು.
— Karnataka Congress (@INCKarnataka) July 26, 2021
ಅವರ ರಾಜೀನಾಮೆ ಹಿಂದೆ ಸಂತೋಷ ಕಾಣಲಿಲ್ಲ, ಬದಲಿಗೆ ಅವರ ನಿರ್ಧಾರದಲ್ಲಿ ನೋವಿತ್ತು.
ಆ ನೋವು ಕೊಟ್ಟವರ್ಯಾರು ಎಂಬುದನ್ನು ಅವರು ರಾಜ್ಯದ ಜನರಿಗೆ ತಿಳಿಸಬೇಕು.
- @DKShivakumar pic.twitter.com/jOOd5W3xgG
'@BJP4Karnataka, ಮೊನ್ನೆ ಮೊನ್ನೆಯವರೆಗೂ ನಾನೇ ಇನ್ನೆರೆಡು ವರ್ಷ ಸಿಎಂ ಎನ್ನುತ್ತಿದ್ದವರು ಈಗ ಏಕಾಏಕಿ ರಾಜೀನಾಮೆ ನೀಡಿದ ಕಾರಣವೇನು ಹೇಳಿ?
— Karnataka Congress (@INCKarnataka) July 26, 2021
ನಿಮ್ಮ ಭೀಷ್ಮನನ್ನ @CTRavi_BJP @nalinkateel ಎಲ್ಲರೂ ಸೇರಿ ಪುಂಖಾನುಪುಂಖವಾಗಿ ಬಾಣ ಬಿಟ್ಟು ಶರಶಯ್ಯೆಯಲ್ಲಿ ಮಲಗಿಸಿಬಿಟ್ಟಿರಲ್ಲ!@BSYBJP ಅವರ ಕಣ್ಣೀರಿಗೆ ನಿಮ್ಮ ದ್ರೋಹವೇ ಕಾರಣವಲ್ಲವೇ? pic.twitter.com/7NaMYa6fUf
Yediyurappa resigns as Karnataka CM congress take Twitter to slam party. Yediyurappa announced his resignation at the event to commemorate the second anniversary of the BJP government.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm