ಬ್ರೇಕಿಂಗ್ ನ್ಯೂಸ್
27-07-21 04:37 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 27: ಏಷ್ಯನ್ ಚೆಸ್ ಚಾಂಪಿಯನ್ ಶಿಪ್ ನ ಏಳು ವರ್ಷದ ಒಳಗಿನ ಬಾಲಕಿಯರ ವಿಭಾಗದಲ್ಲಿ ಕರ್ನಾಟಕದ ಚಾರ್ವಿ ಅನಿಲ್ ಕುಮಾರ್ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಏಷ್ಯನ್ ಚಾಂಪಿಯನ್ ಶಿಪ್ ನಲ್ಲಿ ಭಾರತದವರೇ ಆದ ತೆಲಂಗಾಣದ ಸಂಹಿತಾ ಪುಂಗವನಮ್ ಪ್ರಥಮ ಸ್ಥಾನ ಗಳಿಸಿದ್ದು, ಪಿಲಿಪ್ಪೈನ್ಸ್ ನ ವೆಂಟುರಾ ತಾಲಿಯಾ ತೃತೀಯ ಸ್ಥಾನ ಗಳಿಸಿದ್ದಾರೆ.
ಹತ್ತು ದಿನಗಳ ಹಿಂದಷ್ಟೇ ನಡೆದಿದ್ದ ಭಾರತದ ರಾಷ್ಟ್ರೀಯ ಚಾಂಪಿಯನ್ ಶಿಪ್ ನಲ್ಲಿ ಪ್ರಥಮ ಸ್ಥಾನ ಗಳಿಸಿದ್ದ ಚಾರ್ವಿ, ಏಷ್ಯನ್ ಚಾಂಪಿಯನ್ ಶಿಪ್ ನಲ್ಲಿ ಕೊನೆಯ ಸುತ್ತಿನ ವರೆಗೂ ಪ್ರಥಮ ಸ್ಥಾನದಲ್ಲಿದ್ದರು.

ಏಷ್ಯನ್ ಚಾಂಪಿಯನ್ ಶಿಪ್ ನಲ್ಲಿ ಭಾರತದವರೇ ಆದ ಸಂಹಿತಾರಿಂದ ಪ್ರಬಲ ಪೈಪೋಟಿ ಎದುರಿಸಿದ್ದ ಚಾರ್ವಿ ಚಿನ್ನದ ಪದಕದ ಸನಿಹದಲ್ಲಿದ್ದರು. ಕೊನೆಯಲ್ಲಿ ಇಬ್ಬರೂ ತಲಾ 8 ಅಂಕ ಗಳಿಸಿದಾಗ ಟೈ ಬ್ರೇಕರ್ ಆಧಾರದ ಮೇಲೆ ಚಾರ್ವಿ ಎರಡನೇ ಸ್ಥಾನ ಹಾಗೂ ರಜತ ಪದಕಕ್ಕೆ ತೃಪ್ತಿ ಪಡಬೇಕಾಯಿತು. ಅದೇ ಪಂದ್ಯಾವಳಿಯ ತಂಡ ವಿಭಾಗದಲ್ಲಿ ಚಾರ್ವಿ ಪ್ರತಿನಿಧಿಸಿದ 4 ಜನರ ಭಾರತೀಯ ತಂಡ ಚಿನ್ನದ ಪದಕ ಗಳಿಸಿದೆ.
ಈ ಸಾಧನೆಯ ಮುಖಾಂತರ ಆಗಸ್ಟ್ ನಲ್ಲಿ ನಡೆಯಲಿರುವ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಅಂಡರ್ -7 ವಿಭಾಗದಲ್ಲಿ ಚಾರ್ವಿ ಭಾರತವನ್ನು ಅಧಿಕೃತವಾಗಿ ಪ್ರತಿನಿಧಿಸಲಿದ್ದಾರೆ. ಇದೇ ಪಂದ್ಯಾವಳಿಯ ಹತ್ತು ವರ್ಷದ ಒಳಗಿನವರ ವಿಭಾಗದಲ್ಲಿ ಕೂಡ ಚಾರ್ವಿ ಭಾರತವನ್ನು ಪ್ರತಿನಿಧಿಸಲಿದ್ದಾಳೆ.
ಮೂಲತಃ ಶ್ರವಣಬೆಳಗೊಳದ ಜಿನೇನಹಳ್ಳಿಯ ಅನಿಲ್ ಕುಮಾರ್ ಹಾಗೂ ಅಖಿಲಾ ಅವರ ಪುತ್ರಿಯಾಗಿರುವ ಚಾರ್ವಿ, ಕಳೆದ ಎರಡೂವರೆ ವರ್ಷಗಳಿಂದ ಮಲ್ಲೇಶ್ವರಂನ ಕರ್ನಾಟಕ ಚೆಸ್ ಅಕಾಡೆಮಿಯಲ್ಲಿ ಚದುರಂಗ ಅಭ್ಯಾಸ ಮಾಡುತ್ತಿದ್ದಾರೆ.
ಅಂತಾರಾಷ್ಟ್ರೀಯ ಚೆಸ್ ಆಟಗಾರ ಶಿವಾನಂದ ಬಿ.ಎಸ್ ಚಾರ್ವಿಯ ಮುಖ್ಯ ತರಬೇತುದಾರರಾಗಿದ್ದು, ಇನ್ನೋರ್ವ ಖ್ಯಾತ ಆಟಗಾರ ಗಹನ್ ಎಂ.ಜಿ ಸಹಾಯಕ ತರಬೇತುದಾರರಾಗಿ ಚಾರ್ವಿಗೆ ಮಾರ್ಗದರ್ಶನ
ನೀಡುತ್ತಿದ್ದಾರೆ.
Asian Chess Championship 2021 seven-year-old Charvi runner up in the finals. Charvi is from Hassan. 10 days back Chravi had won first place at Indian State Championship.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm