ಬ್ರೇಕಿಂಗ್ ನ್ಯೂಸ್
27-07-21 09:52 pm Headline Karnataka News Network ಕರ್ನಾಟಕ
ಬೆಂಗಳೂರು, ಜುಲೈ 27: ರಾಜ್ಯದಲ್ಲಿ ನಿರೀಕ್ಷತೆಯಂತೆ ಲಿಂಗಾಯತ ಸಮುದಾಯದವರನ್ನೇ ಮುಖ್ಯಮಂತ್ರಿ ಸ್ಥಾನಕ್ಕೆ ಆಯ್ಕೆ ಮಾಡಲಾಗಿದೆ. ಇದೇ ವೇಳೆ, ಜಾತಿ ಆಧರಿಸಿ ಮೂರು ಮಂದಿಯನ್ನು ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಪರಿಗಣಿಸಲಾಗಿದೆ.
2023ರ ವಿಧಾನಸಭೆ ಚುನಾವಣೆಗೆ ಸಿದ್ಧತೆ ಹಿನ್ನೆಲೆಯಲ್ಲಿ ಜಾತಿ, ಪ್ರಾದೇಶಿಕತೆ, ಸಂಘಟನೆ, ಅನುಭವ ಎಲ್ಲವನ್ನು ಅಳೆದು ತೂಗಿ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಮೂರು ಹೆಸರುಗಳನ್ನು ಅಂತಿಮಗೊಳಿಸಲಾಗಿದೆ.
ಬಿ. ಶ್ರೀರಾಮುಲು, ಆರ್. ಅಶೋಕ ಹಾಗೂ ಗೋವಿಂದ ಕಾರಜೋಳ ಅವರಿಗೆ ಡಿಸಿಎಂ ಹುದ್ದೆ ಒಲಿದು ಬಂದಿದೆ.
ಒಕ್ಕಲಿಗ ಸಮುದಾಯದಲ್ಲಿ ಡಿಸಿಎಂ ಆಗಿದ್ದ ಡಾ. ಸಿ.ಎನ್ ಅಶ್ವಥ ನಾರಾಯಣ ಅವರು ತಮ್ಮ ಸ್ಥಾನವನ್ನು ಅದೇ ಸಮುದಾಯದ ಅಶೋಕ ಅವರಿಗೆ ಬಿಟ್ಟುಕೊಡಲಿದ್ದಾರೆ. ದಲಿತ ಕೋಟಾದಡಿ ಹಿರಿಯ ನಾಯಕ ಗೋವಿಂದ ಕಾರಜೋಳರನ್ನು ಆಯ್ಕೆ ಮಾಡಲಾಗಿದೆ. ಜೊತೆಗೆ ವಾಲ್ಮೀಕಿ ಸಮುದಾಯದ ಬಿ ಶ್ರೀರಾಮುಲುರನ್ನು ಡಿಸಿಎಂ ಪಟ್ಟಕ್ಕೇರಿಸಲಾಗಿದೆ.
ನಾಲ್ವರು ಡಿಸಿಎಂ ನೇಮಕದ ಬಗ್ಗೆ ಚರ್ಚೆ ನಡೆಸಲಾಗಿತ್ತು. ಬ್ರಾಹ್ಮಣ ಸಮುದಾಯ ಹಾಗೂ ಒಬಿಸಿ ಸಮುದಾಯದ ಒಬ್ಬರಿಗೆ ಸ್ಥಾನ ಸಿಗುವ ನಿರೀಕ್ಷೆಯಿತ್ತು. ಸುರೇಶ್ ಕುಮಾರ್ ಅಥವಾ ಸುನಿಲ್ ಕುಮಾರ್ ಡಿಸಿಎಂ ಆಗುತ್ತಾರೆ ಎನ್ನಲಾಗಿತ್ತು. ಆದರೆ, ಎಲ್ಲಾ ಲೆಕ್ಕಾಚಾರವನ್ನು ಉಲ್ಟಾ ಮಾಡಿದ ಬಿಜೆಪಿ ವರಿಷ್ಠರು ಡಿಸಿಎಂ ಸ್ಥಾನಕ್ಕೆ ಮೂರು ಹೆಸರುಗಳನ್ನು ಅಂತಿಮಗೊಳಿಸಿದ್ದಾರೆ. ಇದರ ಜೊತೆಗೆ ಹೊಸ ಸಂಪುಟದಲ್ಲಿ ಅನೇಕ ಹಿರಿಯರಿಗೆ ಕೊಕ್ ಸಿಗುವ ಸಾಧ್ಯತೆ ಹೆಚ್ಚಿದೆ.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm