ಬ್ರೇಕಿಂಗ್ ನ್ಯೂಸ್
01-08-21 10:25 pm Headline Karnataka News Network ಕರ್ನಾಟಕ
Photo credits : Facebook
ಚಿಕ್ಕಮಗಳೂರು, ಆ.1: ಮುಂದಿನ ಮಾರ್ಚ್ ವೇಳೆಗೆ ಗಡ್ಡಧಾರಿ ವ್ಯಕ್ತಿ ಸಿಎಂ ಆಗಲಿದ್ದಾರೆ ಎಂಬ ವಿಜಯನಗರ ಜಿಲ್ಲೆಯ ಮೈಲಾರಲಿಂಗ ಸ್ವಾಮಿ ಭವಿಷ್ಯ ನುಡಿದಿರುವ ಬಗ್ಗೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ ಪ್ರತಿಕ್ರಿಯೆ ನೀಡಿದ್ದಾರೆ.
ಭವಿಷ್ಯ ನುಡಿದಿರುವ ಬಗ್ಗೆ
ನನಗೆ ಗೊತ್ತಿಲ್ಲ. ನಾನಂತೂ ಮುಖ್ಯಮಂತ್ತಿ ಆಗಬೇಕು ಅನ್ನೋದಕ್ಕೆ ಗಡ್ಡ ಬಿಟ್ಟಿದ್ದಲ್ಲ. ಕಾಲೇಜು ದಿನಗಳಿಂದಲೂ ನಿರಂತರವಾಗಿ ಗಡ್ಡ ಬಿಟ್ಟುಕೊಂಡು ಬಂದಿದ್ದೇನೆ. ಗಡ್ಡಧಾರಿ ಅಂತ ಅವ್ರು ಹೇಳಿದ್ದು ನಿಜವಾಗಿದ್ರೆ ಬಹಳ ಜನ ಗಡ್ಡ ಬಿಡಬಹುದು. ಯಾರ್ಯಾರು ಮುಖ್ಯಮಂತ್ರಿಯಾಗಬೇಕು ಅಂತಾ ಆಕಾಂಕ್ಷಿ ಇರ್ತಾರೋ ಅವ್ರೆಲ್ಲ ಗಡ್ಡ ಬಿಡೋಕೆ ಪ್ರಾರಂಭಿಸಬಹುದು ಎಂದು ವ್ಯಂಗ್ಯವಾಡಿದ್ದಾರೆ.
ನನಗೆ ಪಕ್ಷ ನಿಷ್ಠೆ, ಶ್ರಮದ ಮೇಲೆ ನಂಬಿಕೆ ಇರೋದು. ಏನೇನು ಆಗಬೇಕೆಂದು ಭಗವಂತ ಬರೆದಿದ್ದಾನೋ, ತಾಯಿಯ ಆರ್ಶಿವಾದ ಇದಿಯೋ ಗೊತ್ತಿಲ್ಲ. ಏನಾದ್ರೂ ಆಗೋದಿದ್ದರೆ ಆಗುತ್ತೆ ಎಂದು ಹೇಳಿದ್ದಾರೆ.
ವಿಜಯಪುರದ ಮೈಲಾರಲಿಂಗ ಸ್ವಾಮಿ ಭವಿಷ್ಯ ಹೇಳಿರುವ ವಿಚಾರ ರಾಜಕೀಯದಲ್ಲಿ ಸಂಚಲನ ಎಬ್ಬಿಸಿದೆ. ವಾರದ ಹಿಂದಷ್ಟೇ ಬಸವರಾಜ್ ಬೊಮ್ಮಾಯಿ ನೂತನ ಸಿಎಂ ಆಗಿದ್ದು ಇದೀಗ ವರ್ಷದ ನಂತರ ಸಿಎಂ ಬದಲಾಗಲಿದ್ದಾರೆ ಎನ್ನುವ ಮಾತು ಕೇಳಿಬಂದಿದೆ. ಅದರಲ್ಲೂ 2022 ರ ಮಾರ್ಚ್ ತಿಂಗಳಲ್ಲಿ ಗಡ್ಡಧಾರಿ ವ್ಯಕ್ತಿ ಸಿಎಂ ಸ್ಥಾನದಲ್ಲಿ ಕೂರಲಿದ್ದಾರೆ ಎನ್ನುವ ಭವಿಷ್ಯ ಕೇಳಿಬಂದಿದೆ.
ಸದ್ಯಕ್ಕೆ ಸಿಎಂ ಆಗಬಲ್ಲ ಗಡ್ಡಧಾರಿ ವ್ಯಕ್ತಿ ಇರುವುದು ಸಿಟಿ ರವಿ ಮಾತ್ರ. ಮೊನ್ನೆಯೂ ಯಡಿಯೂರಪ್ಪ ಸ್ಥಾನಕ್ಕೆ ಸಿಟಿ ರವಿ ಸೇರಿದಂತೆ ಹಲವರ ಹೆಸರು ಕೇಳಿಬಂದಿತ್ತು. ಆದರೆ ಕೊನೆಕ್ಷಣದಲ್ಲಿ ಎಲ್ಲ ನಿರೀಕ್ಷೆ ಬದಿಗೊತ್ತಿ ಬೊಮ್ಮಾಯಿ ಸಿಎಂ ಆಗಿದ್ದರು.
C T Ravi response to the statement of Beard CM in Karnataka. Vijayapuram BJP MLA Basanagouda Patil Yatnal has answered a question asking whether he was bearded.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm