ಬ್ರೇಕಿಂಗ್ ನ್ಯೂಸ್
04-09-20 09:34 pm Crime Reporter - Bengaluru ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 4: ಡ್ರಗ್ಸ್ ನಂಟಿನಲ್ಲಿ ಸಿಸಿಬಿ ಪೊಲೀಸರ ಬಲೆಗೆ ಬಿದ್ದಿರುವ ಚಿತ್ರನಟಿ ರಾಗಿಣಿ ದ್ವಿವೇದಿ ಹೆಸರು 2017ರಲ್ಲೇ ಕೇಳಿಬಂದಿತ್ತು. ಆದರೆ ಪ್ರಭಾವಿಗಳ ಕೈವಾಡ ರಾಗಿಣಿ ಹೆಸರು ಹೊರಗೆ ಬರದಂತೆ ಪೊಲೀಸರ ಕೈಯನ್ನು ಕಟ್ಟಿಹಾಕಿತ್ತು ಎನ್ನುವ ಮಾಹಿತಿ ಈಗ ಬಹಿರಂಗ ಆಗಿದೆ.
2017 ರಲ್ಲಿ ಡ್ರಗ್ ಮಾರಾಟ ಮಾಡುತ್ತಿದ್ದ ವೇಳೆ ಸಿಕ್ಕಿಬಿದ್ದಿದ್ದ ನೈಜೀರಿಯನ್ ಪ್ರಜೆಗಳಿಬ್ಬರು ರಾಗಿಣಿ ಸೇರಿ ಬೆಂಗಳೂರಿನ 15 ಮಂದಿಯ ಹೆಸರು ಹೇಳಿದ್ದರು. ಅಂದು, ರಾಗಿಣಿ, ರವಿಶಂಕರ್ ಮತ್ತು ಪ್ರತೀಕ್ ಶೆಟ್ಟಿ ಹೆಸರು ಪೊಲೀಸರಿಗೆ ಲಭಿಸಿದ್ದರೂ ಪೊಲೀಸರ ಕೈಯನ್ನು ರಾಜಕಾರಣಿಗಳೇ ಕಟ್ಟಿಹಾಕಿದ್ದರು ಎನ್ನುವ ಸ್ಫೋಟಕ ಮಾಹಿತಿ ಹೊರಬಂದಿದೆ.

ಬೆಂಗಳೂರಿಗೆ ಡ್ರಗ್ ಪೂರೈಸುತ್ತಿದ್ದ ನೈಜೀರಿಯಾ ಮೂಲದ ವಿದ್ಯಾರ್ಥಿಗಳಿಂದ 1.70 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಅಂದೇ ರಾಗಿಣಿ ಹೆಸರನ್ನು ನೈಜೀರಿಯನ್ ಪ್ರಜೆಗಳು ಪೊಲೀಸರ ವಿಚಾರಣೆಯಲ್ಲಿ ಬಾಯಿಬಿಟ್ಟಿದ್ದರು. ಆದರೆ, ರಾಗಿಣಿ ಸೇರಿ ಬೆಂಗಳೂರಿನ ಡ್ರಗ್ ಕಿಂಗ್ ಪಿನ್ ಗಳ ಹೆಸರೇ ಹೊರಬರದಂತೆ ಆಗಿನ ರಾಜಕೀಯ ನೋಡಿಕೊಂಡಿತ್ತೇ ಎನ್ನುವ ಪ್ರಶ್ನೆ ಈಗ ಎದುರಾಗಿದೆ. ಅಲ್ಲದೆ, ಮುಂಬೈನಲ್ಲಿ ಬಾಲಿವುಡ್ ನಟ ನಟಿಯರಿಗೆ ಡ್ರಗ್ಸ್ ಪೂರೈಸುತ್ತಿದ್ದ ಬಹುದೊಡ್ಡ ಜಾಲದ ರೂವಾರಿ ಇಮ್ತಿಯಾಜ್ ಖಾತ್ರಾ ಹೆಸರು ಕೂಡ ಪೊಲೀಸರಿಗೆ ಲಭಿಸಿತ್ತು. ಮುಂಬೈನಲ್ಲಿ ದೊಡ್ಡ ಮಟ್ಟದ ಪಾರ್ಟಿಗಳನ್ನು ನಡೆಸುತ್ತಿದ್ದ ಇಮ್ತಿಯಾಜ್ ಜೊತೆಗೆ ಸ್ಯಾಂಡಲ್ ವುಡ್ ಮತ್ತು ಬಾಲಿವುಡ್ ನಟರು ಹತ್ತಿರದ ನಂಟು ಹೊಂದಿದ್ದರು. ಇವೆಲ್ಲ ವಿಚಾರ ಪೊಲೀಸರು ಮತ್ತು ಆಯಕಟ್ಟಿನ ರಾಜಕಾರಣಿಗಳಿಗೆ ಗೊತ್ತಿದ್ದರೂ ಎಲ್ಲವನ್ನೂ ಹೊರಗೆ ಬರದಂತೆ ನೋಡಿಕೊಂಡಿದ್ದರು ಎನ್ನುವ ಮಾಹಿತಿ ಈಗ ಹೊರಗೆ ಬಂದಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm