ಬ್ರೇಕಿಂಗ್ ನ್ಯೂಸ್
04-08-21 11:58 am Headline Karnataka News Network ಕರ್ನಾಟಕ
ಬೆಂಗಳೂರು, ಆ.4 : ಪ್ರೀತಿಯನ್ನು ನಿರಾಕರಿಸಿದ ನೆಪದಲ್ಲಿ ಯುವತಿಯ ಕಪಾಳಕ್ಕೆ ಬಾರಿಸಿ ಹಲ್ಲೆಗೈದ ಘಟನೆ ಬಸವನಗುಡಿಯ ಡೊಮಿನೊಸ್ ಪಿಜ್ಜಾ ಸೆಂಟರ್ ನಲ್ಲಿ ನಡೆದಿದೆ. ಡೊಮಿನೊಸ್ ಪಿಜ್ಜಾ ಕಂಪನಿಯಲ್ಲಿ ಮ್ಯಾನೇಜರ್ ಆಗಿದ್ದ ಪುರುಷೋತ್ತಮ್ ಎಂಬಾತ ಹಲ್ಲೆಗೈದು ಪರಾರಿಯಾಗಿದ್ದು ಯುವತಿ ಕುಸಿದು ಬಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬಸವನಗುಡಿಯ ರಾಮಕೃಷ್ಣ ಆಶ್ರಮದ ಸಮೀಪ ಇರುವ ಡೊಮಿನೋಸ್ ಪಿಜ್ಜಾ ಹಟ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಪ್ರೀತಿಸುವಂತೆ ಅಲ್ಲಿನ ಮ್ಯಾನೇಜರ್ ಪುರುಷೋತ್ತಮ್ ಬಲವಂತ ಪಡಿಸುತ್ತಿದ್ದ. ಯುವತಿ ಆತನ ಪ್ರೀತಿಯನ್ನು ನಿರಾಕರಿಸಿ ಬೇರೊಬ್ಬ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಇದರಿಂದ ದ್ವೇಷ ಕಾರುತ್ತಿದ್ದ ಮ್ಯಾನೇಜರ್ ಕೆಲಸ ಹೇಳುವ ನೆಪದಲ್ಲಿ ಕಪಾಳಕ್ಕೆ ಬಾರಿಸಿದ್ದಾನೆ. ಏಟಿನ ರಭಸಕ್ಕೆ ಯುವತಿ ಕುಸಿದು ಬಿದ್ದಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೆಲಸ ಹೋಗುತ್ತದೆ ಎನ್ನುವ ಭಯದಿಂದ ಆಕೆ ಈವರೆಗೂ ದೂರು ನೀಡಿರಲಿಲ್ಲ.

ಹಲ್ಲೆಗೈದ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಸವನಗುಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಪುರುಷೋತ್ತಮ್ಗಾಗಿ ಶೋಧ ನಡೆಸುತ್ತಿದ್ದಾರೆ. ಘಟನೆ ಬಳಿಕ ಎಚ್ಚೆತ್ತ ಡೊಮಿನೊಸ್ ಪಿಜ್ಜಾ ಕಂಪನಿಯು, ಮ್ಯಾನೇಜರ್ ಪುರುಷೋತ್ತಮ್ ನನ್ನು ಕೆಲಸದಿಂದ ವಜಾ ಮಾಡಿದೆ. ಬಸವನಗುಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನೊಬ್ಬ ಮ್ಯಾನೇಜರ್ ಮಹದೇವ್ ಎಂಬಾತನನ್ನು ವಶಕ್ಕೆ ಪಡೆದು ಮಾಹಿತಿ ಪಡೆದಿದ್ದಾರೆ. ಪುರುಷೋತ್ತಮ್ ತಲೆಮರೆಸಿಕೊಂಡಿದ್ದಾನೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm