ಬ್ರೇಕಿಂಗ್ ನ್ಯೂಸ್
04-08-21 11:58 am Headline Karnataka News Network ಕರ್ನಾಟಕ
ಬೆಂಗಳೂರು, ಆ.4 : ಪ್ರೀತಿಯನ್ನು ನಿರಾಕರಿಸಿದ ನೆಪದಲ್ಲಿ ಯುವತಿಯ ಕಪಾಳಕ್ಕೆ ಬಾರಿಸಿ ಹಲ್ಲೆಗೈದ ಘಟನೆ ಬಸವನಗುಡಿಯ ಡೊಮಿನೊಸ್ ಪಿಜ್ಜಾ ಸೆಂಟರ್ ನಲ್ಲಿ ನಡೆದಿದೆ. ಡೊಮಿನೊಸ್ ಪಿಜ್ಜಾ ಕಂಪನಿಯಲ್ಲಿ ಮ್ಯಾನೇಜರ್ ಆಗಿದ್ದ ಪುರುಷೋತ್ತಮ್ ಎಂಬಾತ ಹಲ್ಲೆಗೈದು ಪರಾರಿಯಾಗಿದ್ದು ಯುವತಿ ಕುಸಿದು ಬಿದ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಬಸವನಗುಡಿಯ ರಾಮಕೃಷ್ಣ ಆಶ್ರಮದ ಸಮೀಪ ಇರುವ ಡೊಮಿನೋಸ್ ಪಿಜ್ಜಾ ಹಟ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಪ್ರೀತಿಸುವಂತೆ ಅಲ್ಲಿನ ಮ್ಯಾನೇಜರ್ ಪುರುಷೋತ್ತಮ್ ಬಲವಂತ ಪಡಿಸುತ್ತಿದ್ದ. ಯುವತಿ ಆತನ ಪ್ರೀತಿಯನ್ನು ನಿರಾಕರಿಸಿ ಬೇರೊಬ್ಬ ಯುವಕನನ್ನು ಪ್ರೀತಿಸುತ್ತಿದ್ದಳು ಎನ್ನಲಾಗಿದೆ. ಇದರಿಂದ ದ್ವೇಷ ಕಾರುತ್ತಿದ್ದ ಮ್ಯಾನೇಜರ್ ಕೆಲಸ ಹೇಳುವ ನೆಪದಲ್ಲಿ ಕಪಾಳಕ್ಕೆ ಬಾರಿಸಿದ್ದಾನೆ. ಏಟಿನ ರಭಸಕ್ಕೆ ಯುವತಿ ಕುಸಿದು ಬಿದ್ದಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೆಲಸ ಹೋಗುತ್ತದೆ ಎನ್ನುವ ಭಯದಿಂದ ಆಕೆ ಈವರೆಗೂ ದೂರು ನೀಡಿರಲಿಲ್ಲ.

ಹಲ್ಲೆಗೈದ ವಿಡಿಯೋ ವೈರಲ್ ಆಗುತ್ತಿದ್ದಂತೆ ಬಸವನಗುಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಪುರುಷೋತ್ತಮ್ಗಾಗಿ ಶೋಧ ನಡೆಸುತ್ತಿದ್ದಾರೆ. ಘಟನೆ ಬಳಿಕ ಎಚ್ಚೆತ್ತ ಡೊಮಿನೊಸ್ ಪಿಜ್ಜಾ ಕಂಪನಿಯು, ಮ್ಯಾನೇಜರ್ ಪುರುಷೋತ್ತಮ್ ನನ್ನು ಕೆಲಸದಿಂದ ವಜಾ ಮಾಡಿದೆ. ಬಸವನಗುಡಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇನ್ನೊಬ್ಬ ಮ್ಯಾನೇಜರ್ ಮಹದೇವ್ ಎಂಬಾತನನ್ನು ವಶಕ್ಕೆ ಪಡೆದು ಮಾಹಿತಿ ಪಡೆದಿದ್ದಾರೆ. ಪುರುಷೋತ್ತಮ್ ತಲೆಮರೆಸಿಕೊಂಡಿದ್ದಾನೆ.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 02:26 pm
HK News Desk
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm