ಬ್ರೇಕಿಂಗ್ ನ್ಯೂಸ್
05-08-21 12:11 pm Headline Karnataka News Network ಕರ್ನಾಟಕ
ಹಾವೇರಿ, ಆಗಸ್ಟ್ 5: ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ರಚನೆ ಬೆನ್ನಲ್ಲೇ ಬೊಮ್ಮಾಯಿ ಅವರ ಸ್ವಂತ ಜಿಲ್ಲೆಯಲ್ಲಿಯೇ ಅಸಮಾಧಾನ ಸ್ಫೋಟಗೊಂಡಿದೆ. ತನಗೆ ಸಚಿವ ಸ್ಥಾನ ಸಿಗದಂತೆ ಮಾಡಿದ್ದೇ ಬೊಮ್ಮಾಯಿ ಎಂದು ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಶಾಸಕ ನೆಹರು ಓಲೇಕಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನಗೆ ಸಚಿವ ಸ್ಥಾನ ಕೈ ತಪ್ಪಲು ಬಸವರಾಜ ಬೊಮ್ಮಾಯಿ ಕಾರಣ. ಸರ್ಕಾರ ರಚನೆಯಲ್ಲಿ ನನ್ನ ಪಾತ್ರ ಇದೆ. ಸಂಪುಟದಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯ ಮಾಡಲಾಗಿದೆ. ನಾನು ಪಕ್ಷ ಕಟ್ಟಿ ಬೆಳಸಿದವನು. ನನ್ನನ್ನು ಉದ್ದೇಶ ಪೂರ್ವಕವಾಗಿ ಕೈಬಿಡಲಾಗಿದೆ ಎಂದು ಬಸವರಾಜ್ ಬೊಮ್ಮಾಯಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಸಚಿವ ಸ್ಥಾನ ಕೈತಪ್ಪಿದ ಎಲ್ಲ ಶಾಸಕರ ಜೊತೆ ಸಂಪರ್ಕದಲ್ಲಿದ್ದೇನೆ. ಇಂದಿನಿಂದಲೇ ಮುಂದೇನು ಮಾಡಬೇಕು ಎನ್ನುವ ಬಗ್ಗೆ ಚರ್ಚೆ ನಡೆಯಲಿದೆ. ಸರ್ಕಾರ ಉಳಿದ ದಿನಗಳನ್ನು ಪೂರೈಸುತ್ತದೆಯೋ, ಇಲ್ಲವೋ ಎಂದು ಕಾದು ನೋಡಿ ಎಂದು ಪರೋಕ್ಷವಾಗಿ ಸರ್ಕಾರದ ವಿರುದ್ಧ ಶಾಸಕ ನೆಹರು ಓಲೇಕಾರ ಕತ್ತಿ ಮಸೆಯುವ ಹೇಳಿಕೆ ನೀಡಿದ್ದಾರೆ.
ನಿನ್ನೆ ಸಚಿವ ಸಂಪುಟದ ಪಟ್ಟಿ ಹೊರಬೀಳುತ್ತಿದ್ದಂತೆ ರಾಜ್ಯದ ಹಲವೆಡೆ ಸಚಿವ ಸ್ಥಾನ ಸಿಗದ ವಿಚಾರದಲ್ಲಿ ಆಕ್ರೋಶ, ಪ್ರತಿಭಟನೆ ಕೇಳಿಬಂದಿತ್ತು. ಕೆಲವರು ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಬಿಜೆಪಿಯ ಶಿಸ್ತಿನ ನಾಯಕ ನೆಹರು ಓಲೇಕಾರ ಜನತಾ ಪರಿವಾರ ಮೂಲದ ಬಸವರಾಜ್ ಬೊಮ್ಮಾಯಿ ಸರಕಾರದ ವಿರುದ್ಧ ಏನು ಮಾಡಬೇಕೋ ಅದನ್ನು ಮಾಡ್ತೀವಿ ಅನ್ನುವ ಮೂಲಕ ಅಸ್ಥಿರಗೊಳಿಸುವ ತಂತ್ರಗಾರಿಕೆಗೆ ಮುಂದಾಗುವ ಸೂಚನೆ ನೀಡಿದ್ದಾರೆ.
Haveri Neharu olekar slams at CM Bommai says couldn't enter cabinet becuade of him. Neharu fans protest widely in Haveri for not entering him into new cabinet
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm