ಬ್ರೇಕಿಂಗ್ ನ್ಯೂಸ್
07-08-21 02:39 pm Headline Karnataka News Network ಕರ್ನಾಟಕ
ಮಡಿಕೇರಿ, ಆಗಸ್ಟ್ 7: ನೂತನ ಸಂಪುಟದಲ್ಲಿ ಸಚಿವ ಸ್ಥಾನ ಸಿಗದ ವಿಚಾರದಲ್ಲಿ ಮಡಿಕೇರಿ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ಕಿಡಿಕಾರಿದ್ದಾರೆ. ಪಕ್ಷದವರೇ ನಮಗೆ ಮುಳ್ಳಾಗಿದ್ದಾರೆ. ನಾವು ಬೆಂಬಲಿಸಿ ಬೆಳೆಸಿದವರೇ ಮುಳ್ಳಾಗಿ ಪರಿಣಮಿಸಿದ್ದಾರೆ ಎಂದು ಹೇಳಿದ್ದಾರೆ.
ಪಕ್ಷದ ಮುಖಂಡರಿಂದಲೇ ನನಗೆ ತೊಂದರೆ ಆಯ್ತು. ಇಲ್ಲದಿದ್ರೆ ನನಗೆ ಸಚಿವ ಸ್ಥಾನ ಸಿಗುತ್ತಿತ್ತು. ಪಟ್ಟಿಯಲ್ಲಿ ನನ್ನ ಹೆಸರಿತ್ತು, ಕೊನೇ ಕ್ಷಣದಲ್ಲಿ ಕೈಬಿಟ್ಟಿದ್ದಾರೆ. ಅವರಿಗೆ ದೇವರು ಒಳ್ಳೇದು ಮಾಡಲಿ ಎಂದು ಪರೋಕ್ಷವಾಗಿ ಶಾಪ ಹಾಕಿದ್ದಾರೆ.
1983ರಿಂದ ಬೇತಾಳವನ್ನು ಹಿಂದೆ ಕಟ್ಕೊಂಡು ಬಂದೆ. ಆ ಬೇತಾಳ ಚನ್ನಾಗಿ ಬೆಳೀತು, ಈಗ ನನಗೇ ತಲೆಗೆ ಹೊಡೀತಿದೆ ಎಂದು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಮಾರ್ಮಿಕ ನುಡಿಗಳನ್ನಾಡಿದ್ದಾರೆ.

24 ವರ್ಷದಿಂದ ಶಾಸಕನಾಗಿದ್ರೂ ಸಚಿವ ಸ್ಥಾನ ಸಿಗಲಿಲ್ಲ. ಇದು ನನಗೆ ಮಾತ್ರವಲ್ಲ, ಕೊಡಗಿನ ಜನರಿಗೂ ಬೇಸರ ತರಿಸಿದೆ. ಸಂಪುಟದಲ್ಲಿ ಸಾಮಾಜಿಕ ನ್ಯಾಯ ಆಗಿಲ್ಲ. ಕೊಡಗು ಸೇರಿ 13 ಜಿಲ್ಲೆಗೆ ಸಚಿವ ಸ್ಥಾನ ಸಿಗಲಿಲ್ಲ. ಮೊದಲ ಸುತ್ತಿನಲ್ಲಿ ಸಚಿವನಾಗಿ ಮಾಡದಿರಲು ನನ್ನಲ್ಲೇನು ಕೊರತೆಯಿತ್ತು? ಎಂದು ಪಕ್ಷದ ವರಿಷ್ಠರನ್ನು ಅಪ್ಪಚ್ಚು ಪ್ರಶ್ನೆ ಮಾಡಿದ್ದಾರೆ.
ಕೋವಿಡ್ ಸೆಂಟರ್ಗೆ ಭೇಟಿ ನೀಡಿದ ಮೊದಲ ಶಾಸಕ ನಾನು. ಪಿಪಿಇ ಕಿಟ್ ಹಾಕಿ ಸೋಂಕಿತರಿಗೆ ಧೈರ್ಯ ಹೇಳಿದ್ದೇನೆ. ಆನಂತರ ಅನೇಕರು ಹೋಗಿದ್ದಾರೆ. ಜನತೆಯನ್ನು ನಾನು ಕೈಬಿಡಲ್ಲ, ಜನರ ಮನಸ್ಸಿನಲ್ಲಿ ನಾನಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್ ಮುಕ್ತ ಜಿಲ್ಲೆ ಕೊಡಗು ಮಾಡಿದ್ದೇವೆ. ಹಾಗಿದ್ದರೂ ನಮ್ಮನ್ನು ಕಡೆಗಣಿಸಿದ್ದಾರೆ. ಇದು ದೊಡ್ಡ ತಪ್ಪು. ಮಡಿಕೇರಿ ಜನರಿಗೆ ಮಾಡಿದ ಅನ್ಯಾಯ ಎಂದು ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.
Madikeri Appachu Ranjan disappointed about cabinet expansion slams party leaders
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm