ಬ್ರೇಕಿಂಗ್ ನ್ಯೂಸ್
08-08-21 11:51 am Headline Karnataka News Network ಕರ್ನಾಟಕ
ಮಡಿಕೇರಿ, ಆಗಸ್ಟ್ 8 : ಕೇರಳದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಕಾರಣ ಕೊಡಗು ಜಿಲ್ಲೆಯಿಂದ ಕೇರಳಕ್ಕೆ ಸರ್ಕಾರಿ ಮತ್ತು ಖಾಸಗಿ ಬಸ್ ಸಂಚಾರವನ್ನು ರದ್ದುಗೊಳಿಸಿ ಆದೇಶ ಹೊರಡಿಸಲಾಗಿದೆ.
ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಈ ಕುರಿತು ಆದೇಶ ಹೊರಡಿಸಿದ್ದಾರೆ. ಪಕ್ಕದ ರಾಜ್ಯದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯ ಗಡಿಯಲ್ಲಿರುವ ಅಂತರರಾಜ್ಯ ಚೆಕ್ಪೋಸ್ಟ್ನಲ್ಲಿ ಪ್ರಯಾಣಿಕರನ್ನು ತಪಾಸಣೆ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಜಿಲ್ಲೆಯಿಂದ ಕೇರಳಕ್ಕೆ ತೆರಳುವ ಎಲ್ಲಾ ಸರ್ಕಾರಿ, ಖಾಸಗಿ ಬಸ್ಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಆಗಸ್ಟ್ 16ರ ತನಕ ಈ ಆದೇಶ ಜಾರಿಯಲ್ಲಿರುತ್ತದೆ. ಪರಿಸ್ಥಿತಿ ನೋಡಿಕೊಂಡು ಮುಂದಿನ ತೀರ್ಮಾನವನ್ನು ಜಿಲ್ಲಾಡಳಿತ ಕೈಗೊಳ್ಳಲಿದೆ.

ಕರ್ನಾಟಕ ಸರ್ಕಾರ ಮಹಾರಾಷ್ಟ್ರ, ಕೇರಳದ ಜೊತೆ ಗಡಿ ಹಂಚಿಕೊಂಡಿರುವ ಜಿಲ್ಲೆಗಳಲ್ಲಿ ಈಗಾಗಲೇ ವಾರಾಂತ್ಯದ ಕರ್ಫ್ಯೂ ಜಾರಿಗೊಳಿಸಿ ಆದೇಶ ಹೊರಡಿಸಿದೆ. ಇದರಿಂದಾಗಿ ಕೊಡಗು ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದೆ.
ಶುಕ್ರವಾರ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿಗಳ ಸೂಚನೆಯಂತೆ ಕೊಡಗು ಜಿಲ್ಲೆಗೆ ಭೇಟಿ ನೀಡಿದ್ದರು. ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ಹಿನ್ನೆಲೆ ಜಿಲ್ಲೆಯ ಚೆಕ್ ಪೋಸ್ಟ್ಗಳಲ್ಲಿ ಸಿಸಿಟಿವಿ ಅಳವಡಿಸಿ ಕೊರೊನಾ ನಿಯಂತ್ರಿಸಲು ಬಿಗಿಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.


ಕೇರಳ ರಾಜ್ಯದಲ್ಲಿ 3ನೇ ಅಲೆ ಕಂಡುಬಂದಿದೆ. ಆದ್ದರಿಂದ ಯಾವುದೇ ಕಾರಣಕ್ಕೂ ಕೇರಳದಿಂದ ಆಗಮಿಸುವವರನ್ನು ಕೊಡಗು ಜಿಲ್ಲೆ ಪ್ರವೇಶಕ್ಕೆ ಅವಕಾಶ ನೀಡಬಾರದು. ತುರ್ತು ಕೆಲಸ ಇದ್ದವರಿಗೆ 72 ಗಂಟೆಗಳ ಆರ್ಟಿಪಿಸಿಆರ್ ಪರೀಕ್ಷೆ ಮಾಡಿಸಿರುವ ನೆಗೆಟಿವ್ ವರದಿ ಇರುವವರಿಗೆ ಮಾತ್ರ ಅವಕಾಶ ನೀಡಬೇಕು ಎಂದು ನಿರ್ದೇಶನ ನೀಡಿದ್ದರು.
ಕೊಡಗು ಜಿಲ್ಲೆಗೆ ಸರಕು ಸಾಗಣಿಕೆ ವಾಹನದಲ್ಲಿ ಪ್ರವೇಶಿಸುವವರು 7 ದಿನಕ್ಕೊಮ್ಮೆ ಕೋವಿಡ್ ಪರೀಕ್ಷೆ ನೆಗೆಟಿವ್ ವರದಿ ನೀಡಬೇಕು. ಜೊತೆಗೆ ಆಂಟಿಜೆನ್ ಪರೀಕ್ಷೆ ಮಾಡಿ ಜಿಲ್ಲೆಗೆ ಪ್ರವೇಶಕ್ಕೆ ಅವಕಾಶ ನೀಡಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದರು. ಕೊಡಗು ಜಿಲ್ಲೆಯಲ್ಲಿ ಶನಿವಾರ 71 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ.
Kodagu Banned Government and Private Bus to Kerala.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm