ಬ್ರೇಕಿಂಗ್ ನ್ಯೂಸ್
09-08-21 05:47 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 9: ಈ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ ಬಿಡುಗಡೆಯಾಗಿದ್ದು ಶೇ.99.09 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. 157 ಮಂದಿ ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆಯುವ ಮೂಲಕ ಸಾಧನೆ ಮಾಡಿದ್ದಾರೆ.
ಕೊರೊನಾ ಆತಂಕದ ನಡುವೆ ಜುಲೈ 19 ಮತ್ತು 22ರಂದು ಎರಡೇ ದಿನದಲ್ಲಿ ಈ ಬಾರಿಯ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಅಬ್ಜೆಕ್ಟಿವ್ ಆಗಿದ್ದ ಪ್ರಶ್ನೆ ಪತ್ರಿಕೆಯ ಮೂಲಕ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸೀಮಿತವಾಗಿ ಮುಗಿಸಲಾಗಿತ್ತು. ಒಬ್ಬಳು ವಿದ್ಯಾರ್ಥಿನಿ ಬೇರೆಯವರ ಮೂಲಕ ಪರೀಕ್ಷೆ ಬರೆಸಿದ್ದರಿಂದ ಆಕೆಯನ್ನು ಫೈಲ್ ಮಾಡಿದ್ದು ಬಿಟ್ಟರೆ ಉಳಿದೆಲ್ಲರೂ ಪಾಸ್ ಆಗಿದ್ದಾರೆ. ರಾಜ್ಯದಲ್ಲಿ ಒಟ್ಟು 8,71,443 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.


ಈ ಬಾರಿ ಅಂಕಗಳನ್ನು ಗ್ರೇಡ್ ಆಧಾರದಲ್ಲಿ ನೀಡಲಾಗಿದ್ದು, ಎ, ಎ ಪ್ಲಸ್, ಬಿ, ಸಿ ಹೀಗೆ ಅಂಕಗಳ ಆಧಾರದಲ್ಲಿ ಗ್ರೇಡ್ ಕೊಡಲಾಗಿದೆ. 2,50,317 ಮಂದಿ ಎ ಗ್ರೇಡ್ ನಲ್ಲಿ ಪಾಸ್ ಆಗಿದ್ದರೆ, ಬಿ ಗ್ರೇಡ್ ನಲ್ಲಿ 2,87,694 ಮಂದಿ ತೇರ್ಗಡೆಯಾಗಿದ್ದಾರೆ. ಇತರ ಶೇ. 9 ಮಂದಿ ವಿದ್ಯಾರ್ಥಿಗಳಿಗೆ ಸಿ ಗ್ರೇಡ್ ನೀಡಲಾಗಿದೆ.

265ರಿಂದ 625 ಅಂಕ ಪಡೆದವರಿಗೆ ಎ ಪ್ಲಸ್ ಗ್ರೇಡ್ ನೀಡಲಾಗಿದೆ. 437ರಿಂದ 499 ಅಂಕ ಪಡೆದವರಿಗೆ ಬಿ ಪ್ಲಸ್ ಗ್ರೇಡ್ ನೀಡಲಾಗಿದೆ. ಈ ಬಾರಿ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬಳ್ಳಾರಿ ಜಿಲ್ಲೆ ಕೊನೆಯ ಸ್ಥಾನ ಪಡೆದಿದೆ. ಸೆಪ್ಟಂಬರ್ ಮೂರನೇ ವಾರದಲ್ಲಿ ಪೂರಕ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಸುದ್ದಿಗೋಷ್ಟಿ ನಡೆಸಿದ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
SSLC Results 2021 Announced on Monday August 9 says new Education Minister BC Nagesh
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm