ಬ್ರೇಕಿಂಗ್ ನ್ಯೂಸ್
05-09-20 06:10 pm Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 5: ಮಾದಕ ವ್ಯಸನಕ್ಕೆ ಸಂಬಂಧಪಟ್ಟಂತೆ ಚಿರು ಸರ್ಜಾ ಹೆಸರು ಕೇಳಿಬಂದಿದ್ದು ತೀವ್ರ ದುಃಖ ತಂದಿದೆ..ಇಂದ್ರಜಿತ್ ಲಂಕೇಶ್ ಅವರು ಸಾರ್ವಜನಿಕವಾಗಿ ಬೇಷರತ್ ಕ್ಷಮೆ ಕೇಳಬೇಕು ಎಂದು ಚಿರು ಪತ್ನಿ ಮೇಘನಾ ರಾಜ್ ಚಲನಚಿತ್ರ ವಾಣಿಜ್ಯ ಮಂಡಳಿಗೆ ಪತ್ರ ಬರೆದ ಪತ್ರದಿದ್ದರು. ಇದರ ಬೆನ್ನಲ್ಲೇ ವಾಣಿಜ್ಯ ಮಂಡಳಿ ಸದಸ್ಯರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಇಂದ್ರಜಿತ್ ಲಂಕೇಶ್ ಚರಂಜೀವಿ ಸರ್ಜಾ ವಿಚಾರವಾಗಿ ಬಹಿರಂಗ ಕ್ಷಮೆಯಾಚಿಸಿದ್ದಾರೆ.
ಇಂದು ಫಿಲ್ಮ್ಂ ಚೇಂಬರ್ನಲ್ಲಿ ನಡೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತಾಡಿದ ಇಂದ್ರಜಿತ್ ಲಂಕೇಶ್, ನನ್ನಿಂದ ಚಿರು ಕುಟುಂಬಕ್ಕೆ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ. ಈಗಾಗಲೇ ನನ್ನ ಹೇಳಿಕೆಯನ್ನು ನಾನು ವಾಪಸ್ ಪಡೆದಿದ್ದೇನೆ. ಚಿರು ನನಗೆ ಆತ್ಮೀಯ ಸ್ನೇಹಿತ ಮತ್ತು ತಮ್ಮ ಇದ್ದಂತೆ. ನನ್ನ ಹೇಳಿಕೆಯಿಂದ ಅವರ ಕುಟುಂಬಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ ಎಂದರು.
ಮೇಘನಾ ರಾಜ್ ಪತ್ರ ಬರೆದು ನೋವು ವ್ಯಕ್ತಪಡಿಸಿದ್ದಾರೆ. ಅವರ ತಂದೆ ತಾಯಿ ನನ್ನನ್ನ ಎತ್ತಿ ಆಡಿಸಿದ್ದಾರೆ. ಚಿರಂಜೀವಿ ನನಗೆ ಗೆಳೆಯನಂತೆ. ಅವರು ಆಕಸ್ಮಿಕ ಸಾವು ನಾನು ನೋವು ತಂದಿತ್ತು. ಆ ನೋವಿನಲ್ಲೇ ಅವರ ಪೋಸ್ಟ್ ಮಾರ್ಟಂ ಮಾಡ್ಬೋದಿತ್ತು ಅಂತ ಹೇಳಿದ್ದೇ. ಆ ಮಾತು ಅವರಿಗೆ ನೋವಾಗಿದೆ. ಈ ಮುನ್ನವೇ ನಾನು ನನ್ನ ಮಾತನ್ನ ವಾಪಸ್ ತಗಂಡಿದ್ದೇ. ಇದಕ್ಕೆ ವಿಷಾದ ವ್ಯಕ್ತಪಡಿಸ್ತೇನೆ ಅಂತೇಳಿದ್ದೇ. ಈಗ ಎಲ್ಲರ ಮುಂದೆ ಕ್ಷಮೆ ಕೇಳ್ತೇನೆ. ಕ್ಷಮೆ ಕೇಳೋದ್ರಿಂದ ಯಾರೂ ಚಿಕ್ಕೋರಾಗೋದಿಲ್ಲ ಎಂದರು.
ನಾನು ಚಿರಂಜೀವಿಗೂ ಡ್ರಗ್ ಮಾಫಿಯಾಗೂ ಲಿಂಕ್ ಮಾಡಿ ಮಾತನಾಡಿಲ್ಲ. ಪೋಸ್ಟ್ ಮಾರ್ಟಂ ಆಗಬೇಕಿತ್ತು ಅಂತೇಳಿದ್ದೇ. ಆ ಮಾತನ್ನ ನಾನೀಗ ವಾಪಸ್ ಪಡಿದಿದ್ದೇನೆ ಎಂದು ತಿಳಿಸಿದರು.
13-01-26 10:13 pm
HK News Desk
ಇಲೆಕ್ಟ್ರಾನಿಕ್ ಸಿಟಿ ಪಕ್ಕದಲ್ಲೇ ಬಾಂಗ್ಲಾ ವಲಸಿಗರ ಅ...
13-01-26 03:04 pm
ಉಪನ್ಯಾಸಕರ ಟಾರ್ಚರ್ ಎಂದು ಡೆಂಟಲ್ ವಿದ್ಯಾರ್ಥಿನಿ ಆತ...
13-01-26 12:57 pm
Gadag Lakkundi, Gold: ಲಕ್ಕುಂಡಿ ನಿಧಿ ಪತ್ತೆ ಜಾಗ...
12-01-26 08:20 pm
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
13-01-26 06:39 pm
HK News Desk
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
ಮುಂಬೈಗೆ ಬಂದೇ ಬರುತ್ತೇನೆ, ತಾಕತ್ತಿದ್ದರೆ ತಡೆಯಿರಿ....
12-01-26 11:00 pm
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
13-01-26 10:30 pm
Mangalore Correspondent
Ayyappa Death, Mangalore: ಶಬರಿಮಲೆ ಹೊರಟಿದ್ದ ಅಯ...
12-01-26 08:03 pm
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
13-01-26 05:28 pm
HK News Desk
ಡಿಜಿಟಲ್ ಅರೆಸ್ಟ್ ನೆಪದಲ್ಲಿ ದೆಹಲಿಯ ವೃದ್ಧ ವೈದ್ಯ...
13-01-26 03:37 pm
ಡ್ರಗ್ಸ್ ನೆಟ್ವರ್ಕ್ ಭೇದಿಸಿದ ಮಂಗಳೂರು ಪೊಲೀಸರು ; ಬ...
12-01-26 06:28 pm
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm