ಬ್ರೇಕಿಂಗ್ ನ್ಯೂಸ್
11-08-21 08:45 am Bengaluru Correspondent ಕರ್ನಾಟಕ
ವಿಜಯನಗರ, ಆಗಸ್ಟ್ 11: ತಮ್ಮ ಸಚಿವ ಸ್ಥಾನದ ಬಗ್ಗೆ ತೀವ್ರ ಮುನಿಸಿಕೊಂಡಿರುವ ಹೊಸಪೇಟೆ ಶಾಸಕ ಆನಂದ್ ಸಿಂಗ್ ಶಾಸಕ ಸ್ಥಾನಕ್ಕೇ ರಾಜಿನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ಹೊಸಪೇಟೆಯ ತಮ್ಮ ಕಚೇರಿಯನ್ನು ಮಂಗಳವಾರ ರಾತ್ರಿ ದಿಢೀರ್ ತೆರವು ಮಾಡಿದ್ದು ಅದರ ನಾಮಫಲಕ ತೆಗೆದು ಹಾಕಲಾಗಿದೆ.
ಅಲ್ಲದೆ, ಆ.11ರಿಂದ ಕಚೇರಿಯಲ್ಲಿ ಯಾವುದೇ ಸಾರ್ವಜನಿಕರ ಅಹವಾಲು ಸ್ವೀಕರಿಸದಿರಲು ನಿರ್ಧರಿಸಿದ್ದಾರೆ. ಕಚೇರಿ ಬಂದ್ ಕುರಿತು ಪ್ರತಿಕ್ರಿಯಿಸಿದ ಸಚಿವ ಆನಂದ್ ಸಿಂಗ್, ಈ ಬಗ್ಗೆ ನಾನೇನೂ ಪ್ರತಿಕ್ರಿಯಿಸಲಾರೆ. ಏನು ಹೇಳಬೇಕಿತ್ತೋ ಅದನ್ನು ಮುಖ್ಯಮಂತ್ರಿಯವರಿಗೆ ಹೇಳಿದ್ದೇನೆ ಎಂದಿದ್ದಾರೆ.


ಎರಡು ದಿನಗಳ ಹಿಂದೆ ಸಿಎಂ ಬೊಮ್ಮಾಯಿ ಅವರನ್ನು ಸಚಿವ ಸ್ಥಾನದ ವಿಚಾರದಲ್ಲಿ ಭೇಟಿಯಾಗಿದ್ದ ಆನಂದ ಸಿಂಗ್, ಬೇರೆ ಖಾತೆ ನೀಡಲು ಪಟ್ಟು ಹಿಡಿದಿದ್ದರು. ಅಲ್ಲದೆ ಎರಡು ದಿನಗಳ ಗಡುವನ್ನೂ ನೀಡಿದ್ದರು. ಇದೀಗ ಸಿಎಂ ಕಡೆಯಿಂದ ಸ್ಪಂದನೆ ಸಿಕ್ಕಿರದ ಹಿನ್ನೆಲೆಯಲ್ಲಿ ಆನಂದ್ ಸಿಂಗ್ ಒತ್ತಡ ತಂತ್ರ ಅನುಸರಿಸುತ್ತಿದ್ದಾರೆ ಎನ್ನಲಾಗಿದೆ. ಬೇಡಿಕೆ ಈಡೇರದಿದ್ದರೆ ಆ. 15ರಂದು ಧ್ವಜಾರೋಹಣವನ್ನೂ ಮಾಡದಿರಲು ಆನಂದ ಸಿಂಗ್ ತೀರ್ಮಾನಿಸಿದ್ದಾರೆ ಎಂದು ತಿಳಿದುಬಂದಿದೆ.
ಆನಂದ್ ಸಿಂಗ್ ಅವರಿಗೆ ಪ್ರವಾಸೋದ್ಯಮ ಮತ್ತು ಪರಿಸರ, ಜೀವಿಶಾಸ್ತ್ರ ಖಾತೆ ನೀಡಲಾಗಿದೆ. ಆದರೆ ಈ ಖಾತೆ ಬೇಡ ಎನ್ನುತ್ತಿರುವ ಆನಂದ್ ಸಿಂಗ್, ಖಾತೆಗಳ ಜವಾಬ್ದಾರಿ ವಹಿಸಿಕೊಳ್ಳದೆ ಮುನಿಸಿಕೊಂಡಿದ್ದಾರೆ.
14 ವರ್ಷಗಳಿಂದ ಕಾರ್ಯ ನಿರ್ವಹಿಸಿದ್ದ ಹೊಸಪೇಟೆಯ ರಾಣಿಪೇಟ್ ಎಂಬಲ್ಲಿದ್ದ ಶಾಸಕರ ಕಚೇರಿಯನ್ನು ತೆರವು ಮಾಡಿದ್ದು ಶಾಸಕ ಸ್ಥಾನಕ್ಕೇ ರಾಜಿನಾಮೆ ನೀಡುವ ಸೂಚನೆ ಎನ್ನಲಾಗಿದೆ. ಇತರ ಅತೃಪ್ತ ಶಾಸಕರ ಜೊತೆ ಸಂಪರ್ಕದಲ್ಲಿರುವ ಆನಂದ್ ಸಿಂಗ್, ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡುತ್ತಾರೋ ಮತ್ತೆ ಸರಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಾರೋ ಎನ್ನುವ ಕುತೂಹಲ ಎದ್ದಿದೆ. ಕಳೆದ ಬಾರಿ ಬಿಜೆಪಿ ಸರಕಾರ ಬರಲು ಆನಂದ್ ಸಿಂಗ್ ಕೂಡ ಕಾರಣರಾಗಿದ್ದರು. ಇದೇ ವಿಚಾರದಲ್ಲಿ ಯಡಿಯೂರಪ್ಪ ಸರಕಾರ ಇದ್ದಾಗ ಒತ್ತಡ ತಂತ್ರ ಅನುಸರಿಸಿ ಸಚಿವರಾಗಿದ್ದರು. ಆದರೆ ಈ ಬಾರಿ ಪ್ರಮುಖ ಖಾತೆಯ ಮೇಲೆ ಕಣ್ಣಿಟ್ಟಿದ್ದರು.
Anand Singh dissatisfaction with his portfolio Likely To Resign Closes MLA Office In Hospet. Just as Chief Minister Basavaraj Bommai allocated ministerial berths, B.S. Anand Singh, MLA for Vijayanagar, expressed his discontentment over the Tourism portfolio allocated to him.
16-01-26 04:35 pm
HK News Desk
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
ಧರ್ಮಸ್ಥಳದಲ್ಲಿ 74 ಅಸಹಜ ಸಾವು ಪ್ರಕರಣ ; ಪ್ರತ್ಯೇಕ...
14-01-26 01:34 pm
16-01-26 02:26 pm
HK News Desk
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
ರಷ್ಯಾ ಬಳಿಕ ಇರಾನ್ ಮುಂದಿಟ್ಟು ಟ್ರಂಪ್ ಬೆದರಿಕೆ ; ಇ...
13-01-26 04:21 pm
16-01-26 12:31 pm
Mangalore Correspondent
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್ ಡಿಜಿ...
15-01-26 09:04 pm
ಮನರೇಗಾ ಜಾರಿಗೆ ಒತ್ತಾಯಿಸಿ ಸುಳ್ಯದಿಂದ ಮುಲ್ಕಿಗೆ ಪಾ...
15-01-26 08:12 pm
15-01-26 11:07 pm
Bangalore Correspondent
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm
ಹೆಂಡತಿ ಮೇಲೆ ಕಣ್ಣು ; ಗುತ್ತಿಗೆದಾರನನ್ನು ಕೊಲೆ ಮಾಡ...
13-01-26 05:28 pm