ಬ್ರೇಕಿಂಗ್ ನ್ಯೂಸ್
20-08-21 11:05 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 20: ಅಫ್ಘಾನಿಸ್ತಾನದಲ್ಲಿ ಸಿಕ್ಕಿಬಿದ್ದಿರುವ ಕನ್ನಡಿಗರ ರಕ್ಷಣೆಗೆ ಕರ್ನಾಟಕ ಸರಕಾರ ಮುಂದಾಗಿದೆ. ಅಲ್ಲದೆ, ಕನ್ನಡಿಗರ ರಕ್ಷಣೆಗಾಗಿ ಕೇಂದ್ರ ಸರಕಾರದ ಜೊತೆ ವ್ಯವಹರಿಸಲು ಹಿರಿಯ ಐಪಿಎಸ್ ಅಧಿಕಾರಿ, ಸಿಐಡಿ ವಿಭಾಗದ ಎಡಿಜಿಪಿ ಉಮೇಶ್ ಕುಮಾರ್ ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿದೆ.
ಕನ್ನಡಿಗರ ರಕ್ಷಣೆಗಾಗಿ ಕಂಟ್ರೋಲ್ ರೂಂ ತೆರೆಯಲಿದ್ದು ಐಪಿಎಸ್ ಅಧಿಕಾರಿ ವಿದೇಶಾಂಗ ಇಲಾಖೆಯ ಜೊತೆ ವ್ಯವಹರಿಸಲಿದ್ದಾರೆ ಎಂದು ಕರ್ನಾಟಕ ಸರಕಾರ ಹೇಳಿಕೆಯಲ್ಲಿ ತಿಳಿಸಿದೆ. ಈಗಾಗ್ಲೇ ಕೇಂದ್ರ ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ಮುಂದಾಗಿದ್ದು ಅದಕ್ಕಾಗಿ ಹೆಲ್ಪ್ ಲೈನ್ ಆರಂಭಿಸಿದೆ.



ಈ ನಡುವೆ, ಆಗಸ್ಟ್ 17 ರಂದು ಭಾರತೀಯ ರಾಯಭಾರ ಕಚೇರಿಯ ಪ್ರತಿನಿಧಿಗಳು ಮತ್ತು ಸಿಬಂದಿಯನ್ನು ಕಾಬೂಲಿನಿಂದ ಕರೆತಂದಿತ್ತು. ರಾಜಧಾನಿ ಕಾಬೂಲ್ ತಾಲಿಬಾನ್ ಕೈವಶವಾಗಿದ್ದರೂ, ಏರ್ಪೋರ್ಟ್ ಮೂಲಕ ಭಾರತೀಯರ ರಕ್ಷಣೆಗೆ ವಾಯುಪಡೆ ಮುಂದಾಗಿದೆ.
ಈ ನಡುವೆ, ರಾಜ್ಯದಲ್ಲಿ 339 ಅಫ್ಘನ್ ಪ್ರಜೆಗಳು ಇರುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಈ ಪೈಕಿ 192 ಮಂದಿ ವಿದ್ಯಾರ್ಥಿಗಳಾಗಿದ್ದು ವಿವಿಧ ಕಡೆ ಶಿಕ್ಷಣ ಪಡೆಯುತ್ತಿದ್ದಾರೆ. ಶಿಕ್ಷಣಕ್ಕಾಗಿ ಬಂದಿರುವ ವಿದ್ಯಾರ್ಥಿಗಳ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಅವರ ವೀಸಾ ಅವಧಿ ಮುಗಿದಿದ್ದರೆ ವಿಸ್ತರಣೆ ಮಾಡಲಾಗುವುದು ಎಂದು ಗೃಹ ಸಚಿವರು ತಿಳಿಸಿದ್ದಾರೆ.
ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಕರ್ನಾಟಕದ ನಿವಾಸಿಗಳು ಈ ಹೆಲ್ಪ್ ಲೈನ್ ನಂಬರಿಗೆ ಕರೆ ಮಾಡಬಹುದು. 080-22094498 / 080-22942628, 9480800187, [email protected]
Read: ಅಫ್ಘಾನಿಸ್ತಾನದಲ್ಲಿ ಸಿಕ್ಕಿಬಿದ್ದ ಮಂಗಳೂರಿನ ಸಿಸ್ಟರ್ ! ಕಾಬೂಲಿನಲ್ಲಿ ಹೊರಗೆ ಬರಲಾಗದೆ ಚಡಪಡಿಕೆ
Karnataka Home Minister Araga Jnanendra has assured all Afghan nationals, including students living in the State, that the government will help them during the crisis. Of the 339 Afghan nationals in Karnataka, 192 have student visas that are nearing expiry date. With the Taliban taking over Afghanistan, many are looking at an uncertain future.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm