ಬ್ರೇಕಿಂಗ್ ನ್ಯೂಸ್
20-08-21 02:25 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 20 : ಕುಟುಂಬವೊಂದು ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದ್ದು ಈ ಬಗ್ಗೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.
ಬಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಗಾಂಧಿ, ಶಾಲಿನಿ, ಭಾನುಶ್ರೀ ಹಾಗೂ ಹೇಮಶ್ರೀ ನಾಪತ್ತೆಯಾದವರು. ದಂಪತಿಗೆ ಮತ್ತೋರ್ವ ಮಗ ಚಿರಂಜೀವಿ ಎಂಬಾತನಿದ್ದಾನೆ. ಆತ ತುಮಕೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ.
ಪ್ರತಿನಿತ್ಯ ಸಹೋದರಿ ಮತ್ತು ಹೆತ್ತವರ ಜೊತೆ ಮಾತನಾಡುತ್ತಿದ್ದ ಚಿರಂಜೀವಿ, ಆ.12ರಂದು ಮನೆಗೆ ಕರೆ ಮಾಡಿದಾಗ ಎಲ್ಲರ ಫೋನ್ ಸ್ವಿಚ್ ಆಫ್ ಆಗಿತ್ತು. ಇದರಿಂದ ಭಯಗೊಂಡ ಚಿರಂಜೀವಿ ಮನೆಯ ಬಳಿ ಇದ್ದ ಸ್ನೇಹಿತನಿಗೆ ಹೇಳಿ, ಮನೆಗೆ ಹೋಗಿ ಚೆಕ್ ಮಾಡಲು ಹೇಳಿದ್ದಾನೆ.

ಈ ವೇಳೆ ಮನೆ ಸಂಪೂರ್ಣ ಲಾಕ್ ಆಗಿತ್ತು. ಮನೆ ಮಾಲೀಕರನ್ನ ಕೇಳಿದಾಗ, ಅವರು ಫ್ಯಾಮಿಲಿ ಸಮೇತ ವಸ್ತುಗಳೆಲ್ಲವನ್ನು ತೆಗೆದುಕೊಂಡು ಹೋಗಿದ್ದಾರೆ ಎಂದು ಹೇಳಿದ್ದರು. ಕೂಡಲೇ ಈ ಮಾಹಿತಿಯನ್ನ ಸ್ನೇಹಿತ ಚಿರಂಜೀವಿಗೆ ತಿಳಿಸಿದ್ದಾನೆ.
ವಿಷಯ ತಿಳಿದು ಗಾಬರಿಗೊಂಡ ಚಿರಂಜೀವಿ ನೇರವಾಗಿ ಬೆಂಗಳೂರಿಗೆ ಬಂದಿದ್ದಾನೆ. ನಂತರ ತನ್ನ ಬಳಿ ಇದ್ದ ಡೂಪ್ಲಿಕೇಟ್ ಕೀಯಲ್ಲಿ ಬಾಗಿಲು ತೆರೆದು ನೋಡಿದಾಗ ನಾಪತ್ತೆ ವಿಚಾರ ತಿಳಿದುಬಂದಿದೆ. ಮನೆಯ ಕಿಟಿಕಿ ಬಳಿ ಸೂಸೈಡ್ ನೋಟ್ ಬರೆದಿಟ್ಟಿರುವ ಕುಟುಂಬ ಕಣ್ಮರೆಯಾಗಿರುವುದು ಬೆಳಕಿಗೆ ಬಂದಿದೆ.
'ನಮಗೆ ಜೀವನ ನಡೆಸಲು ತುಂಬಾ ಕಷ್ಟವಾಗುತ್ತಿದೆ. ಈ ಜೀವನ ಬೇಡವೇ ಬೇಡ. ದಯಮಾಡಿ ನಮ್ಮನ್ನ ಸಾಯಲು ಬಿಡಿ. ಹೀಗಂತ ಸೂಸೈಡ್ ನೋಟ್ ಬರೆದಿಟ್ಟು ಕುಟುಂಬ ಸದಸ್ಯರು ಕಾಣೆಯಾಗಿದ್ದಾರೆ. ಕೂಡಲೇ ಬಗಲಗುಂಟೆ ಪೊಲೀಸರಿಗೆ ಮಾಹಿತಿ ತಿಳಿಸಿದ ಚಿರಂಜೀವಿ, ಮಿಸ್ಸಿಂಗ್ ಕಂಪ್ಲೇಂಟ್ ದಾಖಲಿಸಿಕೊಂಡು ಹುಡುಕಾಟ ನಡೆಸುತ್ತಿದ್ದಾರೆ.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm