ಬ್ರೇಕಿಂಗ್ ನ್ಯೂಸ್
24-08-21 05:51 pm Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 24: ಮಹತ್ವದ ಖಾತೆ ನೀಡಬೇಕೆಂದು ಪಟ್ಟು ಹಿಡಿದು ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲು ಮುಂದಾಗಿದ್ದ ವಿಜಯನಗರ ಶಾಸಕ ಆನಂದ ಸಿಂಗ್, ಕೊನೆಗೂ ತಮಗೆ ನೀಡಿರುವ ಪ್ರವಾಸೋದ್ಯಮ ಮತ್ತು ಪರಿಸರ ಖಾತೆಯಲ್ಲೇ ಮುಂದುವರಿಯಲು ಒಪ್ಪಿದ್ದಾರೆ. ಇಂದು ವಿಧಾನಸೌಧದಲ್ಲಿ ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಸಿಂಗ್, ಖಾತೆಯ ವಿಚಾರದಲ್ಲಿ ಮಾತುಕತೆ ನಡೆಸಿದ್ದಾರೆ.
ಮುಂದಿನ ಬಾರಿ ದೆಹಲಿಗೆ ಹೋದ ಸಂದರ್ಭದಲ್ಲಿ ಈ ಬಗ್ಗೆ ವರಿಷ್ಠರ ಜೊತೆ ಮಾತನಾಡುತ್ತೇನೆ. ಸದ್ಯಕ್ಕೆ ಯಾವುದೇ ಮುನಿಸು ಇಟ್ಟುಕೊಳ್ಳದೆ ಇದ್ದ ಖಾತೆಯಲ್ಲೇ ಮುಂದುವರಿಯುವಂತೆ ಸಿಎಂ ಬಸವರಾಜ್ ಬೊಮ್ಮಾಯಿ, ಆನಂದ್ ಸಿಂಗ್ ಅವರನ್ನು ಮನವೊಲಿಸಿದ್ದಾರೆ. ಆನಂತರ ಸಿಎಂ ಕಚೇರಿಯಿಂದ ಹೊರಬಂದ ಆನಂದ್ ಸಿಂಗ್ ಮಾಧ್ಯಮಕ್ಕೆ ಹೇಳಿಕೆ ನೀಡದೇ ವಿಕಾಸ ಸೌಧಕ್ಕೆ ತೆರಳಿದ್ದರು.

ಆನಂತರ, ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಆನಂದ ಸಿಂಗ್ ಈ ಬಗ್ಗೆ ಸಿಎಂ ಬೊಮ್ಮಾಯಿ ಮತ್ತು ಪಕ್ಷದ ರಾಜ್ಯಾಧ್ಯಕ್ಷರ ಜೊತೆ ಮಾತನಾಡಿದ್ದೇನೆ. ಮೊದಲು ಕೊಟ್ಟ ಖಾತೆಯಲ್ಲಿ ಅಧಿಕಾರ ವಹಿಸಿಕೊಳ್ಳಲು ಸೂಚಿಸಿದ್ದಾರೆ. ಅದರಂತೆ, ಖಾತೆಯಲ್ಲಿ ಅಧಿಕಾರ ವಹಿಸಿಕೊಳ್ಳುತ್ತೇನೆ. ಮುಖ್ಯಮಂತ್ರಿ ತಮ್ಮ ಮಾತನ್ನು ಉಳಿಸಿಕೊಳ್ಳುತ್ತಾರೆಂದು ಭರವಸೆ ಇಡುತ್ತೇನೆ ಎಂದರು.

ಇದೇ ವೇಳೆ, ಮಾತನಾಡಿದ ಸಚಿವ ಆರ್. ಅಶೋಕ್, ಆನಂದ್ ಸಿಂಗ್ ಯಾವುದೇ ಮುನಿಸು ಮಾಡಿಕೊಂಡಿಲ್ಲ. ಎಲ್ಲವೂ ಮುಗಿದ ಅಧ್ಯಾಯ. ನಾನು ಮತ್ತು ರಾಜು ಗೌಡ ಮಾತುಕತೆ ನಡೆಸಿ, ಆನಂದ್ ಸಿಂಗ್ ಅವರನ್ನು ಒಪ್ಪಿಸಿದ್ದೇವೆ. ಅವರು ತಮ್ಮ ಖಾತೆಯಲ್ಲಿ ಅಧಿಕಾರ ಸ್ವೀಕರಿಸಲು ಒಪ್ಪಿದ್ದಾರೆ ಎಂದರು.
ರಾಜು ಗೌಡ ಮಾತನಾಡಿ, ಆನಂದ್ ಸಿಂಗ್ ಯಾರನ್ನು ಬ್ಲಾಕ್ ಮೇಲ್ ಮಾಡಿಲ್ಲ. ಆರು ಕೋಟಿ ಜನರಲ್ಲಿ ಮೂವತ್ತು ಮಂದಿಗೆ ಮಾತ್ರ ಸಚಿವ ಸ್ಥಾನಕ್ಕೇರುವ ಅವಕಾಶ ಸಿಗುತ್ತದೆ. ಎಲ್ಲ ಖಾತೆಗಳೂ ಮಹತ್ವದ್ದೇ ಎಂದು ಹೇಳಿದರು.
CM Basavaraj Bommai Succeed to Convince Minister Anand Singh in Ministry Post Issue.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm