ಬ್ರೇಕಿಂಗ್ ನ್ಯೂಸ್
26-08-21 06:00 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಆಗಸ್ಟ್ 26: ಕುಟುಂಬಸ್ಥರಿಗೆ ವಾಯ್ಸ್ ಮೆಸೇಜ್ ಕಳುಹಿಸಿ, ಒಂದೇ ಕುಟುಂಬದ ನಾಲ್ಕು ಮಂದಿ ಕಾರಿನಲ್ಲಿದ್ದುಕೊಂಡೇ ನೀರಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎಂ.ಸಿ ಹಳ್ಳಿ ಬಳಿಯ ಭದ್ರಾ ನಾಲೆಯಲ್ಲಿ ನಡೆದಿದ್ದು ಇಬ್ಬರು ಸಾವು ಕಂಡಿದ್ದಾರೆ.
ಮಂಜು, ಆತನ ಪತ್ನಿ ನೀತು, ಮಗ ಧ್ಯಾನ್ ಹಾಗು ನೀತು ತಾಯಿ ಆತ್ಮಹತ್ಯೆಗೆ ಯತ್ನಿಸಿದವರು. 13 ವರ್ಷದ ಮಗ ಧ್ಯಾನ್ ಮತ್ತು ಆತನ ತಾಯಿ ನೀತು(35) ಸಾವಿನಿಂದ ಪಾರಾಗಿದ್ದಾರೆ. ಮಂಜು ಮತ್ತು ಆತನ ಅತ್ತೆ ನೀರಿನಲ್ಲಿ ಮುಳುಗಿ ಸಾವು ಕಂಡಿದ್ದಾರೆ.
ಕಾರಿನಲ್ಲಿ ಪತ್ನಿ, ಮಗ ಹಾಗು ಅತ್ತೆ ಮಲಗಿದ್ದ ಸಂದರ್ಭದಲ್ಲಿ ತನ್ನ ಸೋದರನ ಮಕ್ಕಳೊಂದಿಗೆ ಮಂಜು ಕರೆ ಮಾಡಿ ಮಾತನಾಡಿದ್ದಾರೆ. ನನ್ನನ್ನು ನಂಬಿದವರಿದಂದಲೇ ನಾನು ಮೋಸ ಹೋದೆ. ನೀವು ಜಗತ್ತಿನಲ್ಲಿ ಯಾರನ್ನು ನಂಬಬೇಡಿ. ನನ್ನ ಪತ್ನಿಯೇ ನನ್ನ ಪ್ರಪಂಚ ಎಂದು ಹೇಳಿ ಇನ್ನು ಹತ್ತು ನಿಮಿಷದಲ್ಲಿ ನಾವೆಲ್ಲರು ಈ ಜಗದಲ್ಲಿ ಇರುವುದಿಲ್ಲ ಎಂದು ಮಂಜು ಹೇಳಿದ್ದಾರೆ.
ಘಟನೆಯಲ್ಲಿ ಮಂಜು ಹಾಗು ಸುನಂದಮ್ಮ ನೀರು ಪಾಲಾಗಿದ್ದು, ಮೃತದೇಹ ಪತ್ತೆ ಹಚ್ಚಲಾಗಿದೆ. ಅದೃಷ್ಟವಶಾತ್ ತಾಯಿ ನೀತು ಹಾಗು ಮಗ ಧ್ಯಾನ್ ಈಜಿ ದಡ ಸೇರಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.



ಬೆಂಗಳೂರಿನ ಗಿರಿನಗರದಲ್ಲಿ ನೆಲೆಸಿದ್ದ ಮಂಜು ಜೇಡಿಕಟ್ಟೆಯಲ್ಲಿರುವ ಪತ್ನಿ ಸುನಂದಾ ಜೊತೆಗೆ ತವರು ಮನೆಗೆ ಆಗಮಿಸಿದ್ದರು. ನಿನ್ನೆ ಪುನಃ ಬೆಂಗಳೂರಿಗೆ ವಾಪಸ್ಸಾಗುವಾಗ, ಮಂಜು ಸಂಬಂಧಿ ರಾಜುರವರಿಗೆ ವಾಟ್ಸಾಪ್ ಮೆಸೆಜ್ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವ ಬಗ್ಗೆ ಪ್ರಸ್ತಾಪಿಸಿದ್ದಾರೆ. ತಕ್ಷಣ ರಾಜು ಮಂಜುಗೆ ಫೋನ್ ಮಾಡಿ ಆತ್ಮಹತ್ಯೆ ಮಾಡಿಕೊಳ್ಳದಂತೆ ಪರಿಪರಿಯಾಗಿ ಬೇಡಿಕೊಂಡಿದ್ದಾರೆ. ರಾಜು ಎಷ್ಟೇ ಮನವೊಲಿಸಿದರೂ ಮಂಜು ಮತ್ತು ಕುಟುಂಬ ಆತ್ಮಹತ್ಯೆಯ ಕಠಿಣ ನಿರ್ಧಾರ ತಳೆದಿದ್ದರು.
ಕಡೂರು ತಾಲೂಕಿನ ಸಿಂಗಟನಕೆರೆ ಗ್ರಾಮದ ಮಂಜು ಹನ್ನೆರಡು ವರ್ಷಗಳ ಹಿಂದಷ್ಟೆ ನೀತುರನ್ನು ಮದುವೆಯಾಗಿದ್ರು. ಮಂಜು ವ್ಯವಹಾರದಲ್ಲಿ ಒಂದು ಕೋಟಿ ಲಾಸ್ ಆಗಿತ್ತು ಎನ್ನಲಾಗಿದೆ. ನಂಬಿದವರೇ ಕೈಕೊಟ್ಟಿದ್ದರಿಂದ ಮಂಜು ಆತ್ಮಹತ್ಯೆ ನಿರ್ಧಾರಕ್ಕೆ ಬಂದಿದ್ರು ಎನ್ನಲಾಗಿದೆ.
ಆದರೆ ಮಂಜು ಆತ್ಮಹತ್ಯೆ ನಿರ್ಧಾರ ಕುಟುಂಬದವರಿಗೆ ತಿಳಿದಿರಲಿಲ್ಲ. ಹೀಗಿದ್ರೂ ತನ್ನ ಕುಟುಂಬವನ್ನು ಮಂಜು ಬಲಿಕೊಡಲು ಮುಂದಾಗಿದ್ದು ಏಕೆ ಎಂಬುದು ತನಿಖೆಯಿಂದ ಬೆಳಕಿಗೆ ಬರಬೇಕಿದೆ. ತರೀಕೆರೆ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
Video:
Chikmagalur Family attempts suicide by sending voice message to family mother and son rescued
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm