ಬ್ರೇಕಿಂಗ್ ನ್ಯೂಸ್
07-09-20 12:21 am Bangalore Correspondent ಕರ್ನಾಟಕ
ಬೆಂಗಳೂರು, ಸೆಪ್ಟೆಂಬರ್ 6: ನಟಿ ಸಂಯುಕ್ತಾ ಹೆಗ್ಡೆ ಮತ್ತು ಸ್ನೇಹಿತೆಯ ಮೇಲಿನ ನೈತಿಕ ಪೊಲೀಸ್ ಪ್ರಕರಣಕ್ಕೆ ಸಂಬಂಧಿಸಿ ಮಹಿಳಾ ಕಾಂಗ್ರೆಸ್ ನಾಯಕಿ ಕವಿತಾ ರೆಡ್ಡಿ ಬೇಷರತ್ ಕ್ಷಮೆ ಯಾಚಿಸಿದ್ದಾರೆ.
ಘಟನೆ ಬಗ್ಗೆ ವಿಷಾದವಿದೆ. ಯಾವುದೂ ಉದ್ದೇಶಪೂರ್ವಕ ನಡೆದಿದ್ದಲ್ಲ. ಅಲ್ಲದೆ, ನೈತಿಕ ಪೊಲೀಸ್ ಗಿರಿ ಅನ್ನುವುದನ್ನು ಹಿಂದಿನಿಂದಲೇ ವಿರೋಧಿಸುತ್ತಾ ಬಂದವಳು ನಾನು. ಏನ್ ಘಟನೆ ಆಗಿದೆಯೋ ಅದರ ಬಗ್ಗೆ ಪೂರ್ತಿಯಾಗಿ ಕ್ಷಮೆ ಯಾಚಿಸುತ್ತಿದ್ದೇನೆ ಎಂದು ಕವಿತಾ ರೆಡ್ಡಿ ಫೇಸ್ಬುಕ್ ಪೇಜ್ ನಲ್ಲಿ ಕ್ಷಮೆ ಕೇಳಿ ವಿಡಿಯೋ ಅಪ್ಲೋಡ್ ಮಾಡಿದ್ದಾರೆ.

ಬೆಂಗಳೂರಿನ ಎಚ್ಎಸ್ಆರ್ ಲೇಔಟ್ ಠಾಣೆ ವ್ಯಾಪ್ತಿಯ ಪಾರ್ಕ್ ಒಂದರಲ್ಲಿ ಸ್ಪೋರ್ಟ್ಸ್ ಸೂಟ್ ಹಾಕ್ಕೊಂಡು ಸಂಯುಕ್ತಾ ಮತ್ತು ಗೆಳೆತಿಯರು ವರ್ಕೌಟ್ ಮಾಡುತ್ತಿದ್ದರು. ಈ ವೇಳೆ ಅಲ್ಲಿಗೆ ಆಗಮಿಸಿದ್ದ ಕವಿತಾ ರೆಡ್ಡಿ ಸಂಯುಕ್ತಾ ಡ್ರೆಸ್ ಬಗ್ಗೆ ಆಕ್ಷೇಪಿಸಿದ್ದಲ್ಲದೆ ಸ್ನೇಹಿತೆಯ ಮೇಲೆ ಕೈಮಾಡಿದ್ದರು. ಇದನ್ನು ವಿಡಿಯೋ ಮಾಡಿದ್ದ ಸಂಯುಕ್ತಾ ಇನ್ ಸ್ಟಾ ಗ್ರಾಮಿನಲ್ಲಿ ಹಾಕಿದ್ದಲ್ಲದೆ ವಿಚಾರದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಘಟನೆ ಬಗ್ಗೆ ಸಾಮಾಜಿಕ ವಲಯದಲ್ಲಿ ಟೀಕೆಗೆ ವ್ಯಕ್ತವಾಗಿತ್ತು. ಅಲ್ಲದೆ, ಎಚ್ಎಸ್ಆರ್ ಲೇಔಟ್ ಠಾಣೆಯಲ್ಲಿ ಸಂಯುಕ್ತಾ ದೂರು ದಾಖಲಿಸಿದ್ದರು.
ಕವಿತಾ ರೆಡ್ಡಿ ಎಐಸಿಸಿ ಸದಸ್ಯೆ ಆಗಿರುವುದಲ್ಲದೆ ಮಹಿಳಾ ಕಾಂಗ್ರೆಸ್ ನಾಯಕಿ ಆಗಿದ್ದರಿಂದ ಪಕ್ಷದ ನಾಯಕರು ಮುಜುಗರ ಅನುಭವಿಸುವಂತಾಗಿತ್ತು. ಈಗ ಒಟ್ಟು ಘಟನೆ ಬಗ್ಗೆ ಕವಿತಾ ರೆಡ್ಡಿ ಮೂಲಕ ಕ್ಷಮೆ ಯಾಚಿಸುವಂತೆ ಮಾಡಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
14-07-26 07:55 pm
HK News Staffer
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
14-07-26 09:13 pm
HK News Staffer
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm
ಮಂಗಳೂರಿನಲ್ಲಿ 11 ಮಂದಿ ಬಾಂಗ್ಲಾನ್ನರ ಬಂಧನ ; ನಾಲ್ವ...
13-07-26 10:57 pm