ಬ್ರೇಕಿಂಗ್ ನ್ಯೂಸ್
31-08-21 11:47 am Headline Karnataka News Network ಕರ್ನಾಟಕ
ಬೆಂಗಳೂರು, ಆಗಸ್ಟ್ 31; ಬೆಂಗಳೂರು ನಗರದಲ್ಲಿ ತಡರಾತ್ರಿ ಐಷಾರಾಮಿ ಕಾರು ಅಪಘಾತಕ್ಕೀಡಾಗಿದೆ. ಒಟ್ಟು 7 ಜನರು ಈ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಪೊಲೀಸರು ಘಟನೆ ಬಗ್ಗೆ ತನಿಖೆಯನ್ನು ಕೈಗೊಂಡಿದ್ದಾರೆ. ಮೃತಪಟ್ಟವರಲ್ಲಿ ಹೊಸರು ಕ್ಷೇತ್ರದ ಶಾಸಕರ ಮಗ ಮತ್ತು ಸೊಸೆ ಸೇರಿದ್ದಾರೆ.
ಕೋರಮಂಗಲದ ಮಂಗಳ ಕಲ್ಯಾಣ ಮಂಟಪದ ಸಮೀಪ ಮಂಗಳವಾರ ಮುಂಜಾನೆ 1.45ರ ಸುಮಾರಿಗೆ ಐಷಾರಾಮಿ ಕಾರು ಅಪಘಾತ ನಡೆದಿದೆ. ಮೂವರು ಮಹಿಳೆಯರು, ನಾಲ್ವರು ಪುರುಷರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನಲ್ಲಿದ್ದ 6 ಜನರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಒಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅಪಘಾತ ನಡೆದಾಗ ಭಾರೀ ಶಬ್ದವಾಗಿದ್ದು ತಡರಾತ್ರಿಯಲ್ಲಿ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ.
ರಸ್ತೆ ಅಪಘಾತದಲ್ಲಿ ಮೃತಪಟ್ಟ ಕರುಣಾಸಾಗರ್ (28) ತಮಿಳುನಾಡಿನ ಹೊಸೂರು ಕ್ಷೇತ್ರದ ಡಿಎಂಕೆ ಶಾಸಕ ವೈ. ಪ್ರಕಾಶ್ ಪುತ್ರ ಎಂದು ತಿಳಿದುಬಂದಿದೆ. ಸೋಮವಾರ ಸಂಜೆ 5.30ರ ಸುಮಾರಿಗೆ ಬೆಂಗಳೂರಿಗೆ ಕರುಣಾಸಾಗರ್ ಬಂದಿದ್ದರು. ರಾತ್ರಿ ಮನೆಯವರು ಕರೆ ಮಾಡಿ ಊಟಕ್ಕೆ ಬರುತ್ತೀಯಾ? ಎಂದು ವಿಚಾರಿಸಿದ್ದರು. ಆಗ ಬರುವುದಿಲ್ಲ ಎಂದು ಹೇಳಿದ್ದರು.
ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಶವಗಳಿದ್ದು, ಮರಣೋತ್ತರ ಪರೀಕ್ಷೆ ನಡೆಯಬೇಕಿದೆ. ಕಾರಿನಲ್ಲಿದ್ದವರು ಮದ್ಯ ಸೇವಿಸಿದ್ದರೆಯೇ? ಎಂಬುದು ಪರೀಕ್ಷೆ ಬಳಿಕ ತಿಳಿಯಲಿದೆ. ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು, ಅಪಘಾತ ಸ್ಥಳದಿಂದ ಕಾರನ್ನು ಸ್ಥಳಾಂತರ ಮಾಡಲಾಗಿದೆ.
ಶವಗಳನ್ನು ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಇಡಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಆಸ್ಪತ್ರೆಗೆ ಭೇಟಿ ನೀಡಿದರು. ಹೊಸೂರು ಕ್ಷೇತ್ರದ ಡಿಎಂಕೆ ಶಾಸಕ ವೈ. ಪ್ರಕಾಶ್ ರಾಮಲಿಂಗಾ ರೆಡ್ಡಿಗೆ ಆಪ್ತರು ಎಂದು ತಿಳಿದುಬಂದಿದೆ. ಕರುಣಾಸಾಗರ್ ಶಾಸಕರ ಏಕೈಕ ಪುತ್ರ.
ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಘಾತದ ಭೀಕರತೆಗೆ ಕಾರಿನ ಎಡಭಾಗದ ಎರಡು ಟೈರ್ಗಳು ಸ್ಫೋಟಗೊಂಡು ರಸ್ತೆಗೆ ಹಾರಿ ಬಿದ್ದಿವೆ. ಕಾರಿನಲ್ಲಿದ್ದವರು ಸೀಟ್ ಬೆಲ್ಟ್ ಧರಿಸಿರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಕಾರು ಅಪಘಾತಗೊಂಡಾಗ ಏರ್ ಬ್ಯಾಗ್ ಸಹ ಓಪನ್ ಆಗಿಲ್ಲ.
ಆಡುಗೋಡಿ ಸಂಚಾರಿ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ. ಅತಿಯಾದ ವೇಗವೇ ಘಟನೆಗೆ ಕಾರಣ ಎಂದು ಅಂದಾಜಿಸಲಾಗಿದೆ.
ತಮಿಳುನಾಡು ವಿಧಾನಸಭೆ ಅಧಿವೇಶನ ನಡೆಯುತ್ತಿದ್ದು, ಅಧಿವೇಶನದಲ್ಲಿ ಪಾಲ್ಗೊಳ್ಳಲು ಚೆನ್ನೈಗೆ ತೆರಳಿದ್ದ ಶಾಸಕ ವೈ. ಪ್ರಕಾಶ್ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಕರುಣಾಸಾಗರ್ ಪತ್ನಿ ಬಿಂದು ಸಹ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಮೃತದೇಹಗಳನ್ನು ಕುಟುಂಬದವರಿಗೆ ಹಸ್ತಾಂತರ ಮಾಡಲಾಗುತ್ತದೆ. ಪೊಲೀಸರು ಘಟನೆ ಕುರಿತು ತನಿಖೆ ನಡೆಸುತ್ತಿದ್ದಾರೆ.
ಕೋರಮಂಗಲದಲ್ಲಿ ನಡೆದಿರುವ ಐಷಾರಾಮಿ ಆಡಿ ಕಾರು ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಪಘಾತದ ಬಳಿಕ ಕಾರಿನ ಟೈರ್ ರಸ್ತೆಗೆ ಹಾರಿ ಬಂದು ಬಿದ್ದಿದೆ.
A CCTV has captured the accident in Koramangala where 7 people were killed including son & daughter-in-law of Hosur DMK MLA. The footage shows how the Audi lost control ramming into the bollards on the footpath & then hits a wall & bounces back to a halt pic.twitter.com/Mja8BxFueN
— Deepak Bopanna (@dpkBopanna) August 31, 2021
Seven people were killed in a car accident in Bengaluru’s Koramangala when a speeding Audi Q3 lost control, climbing onto the footpath before hitting a Punjab National Bank branch building in the wee hours of Tuesday, August 31. The incident took place on 80 feet road in Koramangala between 1 am and 2am.
19-04-25 12:24 pm
HK News Desk
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
Chennaiyya Swamiji, Caste census: ಪರಿಶಿಷ್ಟ ಜಾ...
17-04-25 11:41 am
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 10:51 am
Mangalore Correspondent
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
Waqf Protest, Mangalore, Traffic: ಎಪ್ರಿಲ್ 18...
17-04-25 11:06 pm
Karnataka High Court, Waqf protest Mangalore...
17-04-25 10:27 pm
19-04-25 11:01 am
Bangalore Correspondent
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm