ಬ್ರೇಕಿಂಗ್ ನ್ಯೂಸ್
01-09-21 03:48 pm Headline Karnataka News Network ಕರ್ನಾಟಕ
ಮೈಸೂರು, ಸೆ.1: ಅರುಣ್ ಸಿಂಗ್ ಕೇಂದ್ರ ಸರ್ಕಾರದ ಏಜೆಂಟ್, ದಲ್ಲಾಳಿ. ಅವನು ರಾಜ್ಯಕ್ಕೆ ಬಂದಿದ್ದು ದುಡ್ಡು ಕಲೆಕ್ಷನ್ ಮಾಡೋದಕ್ಕಾಗಿ.. ಹೀಗೆಂದು ಬಿಜೆಪಿ ರಾಜ್ಯ ಉಸ್ತುವಾರಿಯನ್ನು ಹೀನಾಯವಾಗಿ ಜರೆದಿದ್ದು ಜೆಡಿಎಸ್ ವರಿಷ್ಠ ಎಚ್.ಡಿ.ಕುಮಾರಸ್ವಾಮಿ.
ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಅವನಿಗೆ ಇಲ್ಲಿಯ ರಾಜಕಾರಣ ಗೊತ್ತಿಲ್ಲ. ಹೀಗಾಗಿ ಜೆಡಿಎಸ್ ಅನ್ನು ಮುಳುಗುತ್ತಿರುವ ಹಡಗು ಎಂದಿದ್ದಾರೆ. ಮುಳುಗುತ್ತಿರುವುದು ಬಿಜೆಪಿ ಪಕ್ಷ. ಜೆಡಿಎಸ್ ಬಗ್ಗೆ ಲಘುವಾಗಿ ಮಾತನಾಡಬೇಡಿ. ಕೇಂದ್ರದಿಂದ ಬರುವ ಇಂತಹ ದಲ್ಲಾಳಿಗಳಿಗೆ ಇಲ್ಲಿನ ವಾಸ್ತವವನ್ನ ರಾಜ್ಯ ನಾಯಕರು ಹೇಳಬೇಕು ಎಂದು ಹೇಳಿದರು.
ನಾವೇನು ನಿಮ್ಮ ಮನೆ ಬಾಗಿಲಿಗೆ ಬಂದಿದ್ದೀವಾ? ಅರ್ಧ ರಾತ್ರಿಯಲ್ಲಿ ಮೈಸೂರಿನ ಸಾ.ರಾ.ಮಹೇಶ್ ಮನೆಗೆ ಬಂದಿದ್ದು ಯಾರು? ಜೆಡಿಎಸ್ ಬಗ್ಗೆ ಮಾತನಾಡಿದವರು ಯಾರ್ಯಾರು ಏನೇನಾಗಿದ್ದಾರೆ ಅಂತ ಇತಿಹಾಸ ಇದೆ. ಜೆಡಿಎಸ್ನ ಫ್ಯೂಸ್ ಕೀಳಲು ಯಾರಿಂದಲೂ ಸಾಧ್ಯವಿಲ್ಲ. ಜೆಡಿಎಸ್ ಗ್ರೌಂಡಿಂಗ್ ಬಹಳ ಭದ್ರವಾಗಿದೆ ಎಂದು ಹೇಳಿದರು ಕುಮಾರಸ್ವಾಮಿ. ಮೇಕೆದಾಟು ಸೇರಿದಂತೆ ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಕೇಂದ್ರ ಸರ್ಕಾರವನ್ನ ಒತ್ತಾಯಿಸಲು ಕರ್ನಾಟಕ ಸಂಸದರಿಗೆ ಮೂಳೆ, ಎಲುಬು ಎರಡೂ ಇಲ್ಲ. ಅರುಣ್ ಸಿಂಗ್ ಸೂಟ್ಕೇಸ್ ತಗೊಂಡೋದ್ರೆ ಸಾಲದು. ಇಂತಹ ಸಮಸ್ಯೆಯನ್ನ ಕೇಂದ್ರಕ್ಕೆ ಮನವರಿಕೆ ಮಾಡಿಕೊಡಬೇಕು ಎಂದು ಟಾಂಗ್ ನೀಡಿದ್ರು. ನಾಯಕರು ಕೂಡ ಜೆಡಿಎಸ್ ಬಿಟ್ಟು ಹೋಗುತ್ತಿದ್ದಾರಲ್ಲಾ ಎಂಬ ಪ್ರಶ್ನೆಗೆ, ಜೆಡಿಎಸ್ ಬಾಗಿಲು ದೊಡ್ಡದಾಗಿ ತೆರೆದಿದೆ.

ಬರುವವರು ಬರಬಹುದು, ಹೋಗೋರು ಹೋಗಬಹುದು ಎಂದು ಹೇಳಿದ ಕುಮಾರಸ್ವಾಮಿ, ಶಾಸಕ ಜಿ.ಟಿ.ದೇವೇಗೌಡ ಪಕ್ಷ ತೊರೆಯುವ ವಿಚಾರದಲ್ಲಿ ಪ್ರತಿಕ್ರಿಯಿಸಿ, ಎರಡು ವರ್ಷದ ಹಿಂದೆಯೇ ಪಕ್ಷದಿಂದ ದೂರ ಸರಿದಿದ್ದೇನೆ ಎಂದು ಅವರೇ ಹೇಳಿದ್ದಾರೆ. ಈಗ ಒಂದು ನೆಪ ಹೇಳಿ ಹೋಗೋಕೆ ಮುಂದಾಗಿದ್ದಾರೆ. ದ್ರಾಕ್ಷಿ ಕೈಗೆಟಕುದಿದ್ದಾಗ ನರಿ ಹೇಳುವ ಕಥೆಯಂತಾಗಿದೆ. ಈಗ ನಮ್ಮಿಂದ ಹೊರ ಹೋಗುವುದಾದರೆ 2008 ರಲ್ಲಿ ಯಾವ ಕಾರಣಕ್ಕಾಗಿ ಬಿಜೆಪಿಗೆ ಹೋದರು ಎಂದು ಶಾಸಕ ಜಿಟಿಡಿಗೆ ಟಾಂಗ್ ಕೊಟ್ಟರು.
ಜೆಡಿಎಸ್ ದುಡ್ಡಿಗಾಗಿ ರಾಜಕಾರಣ ಮಾಡ್ತಾರೆ
ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ದುಡ್ಡು ವಸೂಲಿಗಾಗಿ ಕರ್ನಾಟಕಕ್ಕೆ ಬರುತ್ತಾರೆಂಬ ಕುಮಾರಸ್ವಾಮಿ ಟೀಕೆಗೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್, ಜೆಡಿಎಸ್ ನವರು ದುಡ್ಡಿಗಾಗಿ ರಾಜಕಾರಣ ಮಾಡುತ್ತಾರೆ.
ಅದು ಜೆಡಿಎಸ್ ಸಂಸ್ಕೃತಿ. ಹಳದಿ ರೋಗದವರಿಗೆ ನೋಡಿದ್ದೆಲ್ಲಾ ಹಳದಿಯಾಗಿ ಕಾಣಿಸುತ್ತದೆ. ಇವರು ರಾಜ್ಯವನ್ನು, ದೇಶವನ್ನು ಆಳಿದವರು. ಇವರಿಗೆ ಎಲುಬು, ನಾಲಿಗೆ ಸರಿಯಾಗಿದ್ದರೇ ಜೆಡಿಎಸ್ ಗೆ ಇಂತಹ ಸ್ಥಿತಿ ಬರುತ್ತಿರಲಿಲ್ಲ ಎಂದು ಟಾಂಗ್ ಕೊಟ್ಟರು.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm