ಬ್ರೇಕಿಂಗ್ ನ್ಯೂಸ್
03-09-21 01:22 pm Headline Karnataka News Network ಕರ್ನಾಟಕ
ಕೊಪ್ಪಳ, ಸೆ.3: ಮಹಾಮಾರಿ ಕೊರೊನಾದಿಂದ ತಂದೆಯನ್ನು ಕಳೆದುಕೊಂಡ ಪುಟ್ಟ ಬಾಲಕಿಯೊಬ್ಬಳು ಆತನ ಸಮಾಧಿ ಬಳಿ ಕೇಕ್ ಕಟ್ ಮಾಡಿ ತನ್ನ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾಳೆ.
ಜಿಲ್ಲೆಯ ಕುಷ್ಟಗಿ ಪಟ್ಟಣದ ಸ್ಪಂದನ ಎಂಬ ಬಾಲಕಿ ತನ್ನ 8ನೇ ವರ್ಷದ ಹುಟ್ಟುಹಬ್ಬವನ್ನು ಇತ್ತೀಚೆಗೆ ತಂದೆಯ ಸಮಾಧಿ ಬಳಿ ಆಚರಿಸಿಕೊಂಡಿದ್ದಾಳೆ. ಸ್ಪಂದನ ತಂದೆ ಮಹೇಶ್ ಕೋನಸಾಗರ ಕಳೆದ ಮೇ ತಿಂಗಳಲ್ಲಿ ಕೊರೊನಾ ಸೋಂಕು ತಗುಲಿ ಮೃತಪಟ್ಟಿದ್ದರು. ಮಗಳು ತಂದೆಯ ಸಮಾಧಿ ಬಳಿ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸ್ಪಂದನ ತಂದೆ ಮಹೇಶ್ ಸ್ನೇಹಜೀವಿಯಾಗಿದ್ದು, ಅನೇಕ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಆದರೆ ಮಹಾಮಾರಿ ಕೋವಿಡ್ ತಗುಲಿ, ಚೇತರಿಸಿಕೊಳ್ಳದೆ ಮೃತಪಟ್ಟಿದ್ದರು. ಪ್ರತಿ ವರ್ಷ ಮಗಳ ಜನ್ಮದಿನ ಆಚರಿಸುತ್ತಿದ್ದ ಅಪ್ಪ ಈ ಬಾರಿ ಜೊತೆಗಿರಲಿಲ್ಲ. ಬಾಲಕಿಯು ತನ್ನ ಅಪ್ಪನ ಜೊತೆ ತಾನು ಹುಟ್ಟಿದ ದಿನ ಕ್ಷಣವನ್ನು ಕಳೆಯಬೇಕೆಂದು ಮನೆಯವರ ಬಳಿ ಕೇಳಿಕೊಂಡಿದ್ದಳು. ಹೀಗಾಗಿ ಮನೆಯವರೆಲ್ಲ ಸೇರಿ ಮಗಳ ಆಸೆಯಂತೆ ಸಮಾಧಿ ಬಳಿ ತೆರಳಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ್ದಾರೆ. ಬಾಲಕಿಯು ಕೇಕ್ ಕಟ್ ಮಾಡಿ, ಭಾವುಕಳಾಗಿ ಸಮಾಧಿಗೆ ಅರ್ಪಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
ಈ ಬಗ್ಗೆ ಮಾತನಾಡಿರುವ ಬಾಲಕಿ, ನನ್ನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದ ತನ್ನ ತಂದೆಗೆ ನಾನು ಮುಂದೊಂದು ದಿನ ದೊಡ್ಡ ಅಧಿಕಾರಿಯಾಗಬೇಕೆಂಬ ಆಸೆ ಇತ್ತು. ಅಲ್ಲದೆ ಅವರು ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಿಗಿಸಿಕೊಂಡಿದ್ದರು. ಅವರ ಆಸೆಯಂತೆ ತಾನು ಮುಂದೆ ಚೆನ್ನಾಗಿ ಓದಿ ಆಧಿಕಾರಿಯಾಗುತ್ತೇನೆ. ತಂದೆಯವರ ಸಾಮಾಜಿಕ ಕಳಕಳಿಯ ಮಾರ್ಗದಲ್ಲೇ ತಾನೂ ಮುನ್ನಡೆಯುತ್ತೇನೆ ಎನ್ನುತ್ತಾಳೆ ಬಾಲಕಿ ಸ್ಪಂದನ.
Koppal Little Girl Celebrating Birthday in Father Graveyard.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 09:44 pm
Mangalore Correspondent
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm