ಬ್ರೇಕಿಂಗ್ ನ್ಯೂಸ್
03-09-21 01:22 pm Headline Karnataka News Network ಕರ್ನಾಟಕ
ಕೊಪ್ಪಳ, ಸೆ.3: ಮಹಾಮಾರಿ ಕೊರೊನಾದಿಂದ ತಂದೆಯನ್ನು ಕಳೆದುಕೊಂಡ ಪುಟ್ಟ ಬಾಲಕಿಯೊಬ್ಬಳು ಆತನ ಸಮಾಧಿ ಬಳಿ ಕೇಕ್ ಕಟ್ ಮಾಡಿ ತನ್ನ ಹುಟ್ಟುಹಬ್ಬ ಆಚರಣೆ ಮಾಡಿಕೊಂಡಿದ್ದಾಳೆ.
ಜಿಲ್ಲೆಯ ಕುಷ್ಟಗಿ ಪಟ್ಟಣದ ಸ್ಪಂದನ ಎಂಬ ಬಾಲಕಿ ತನ್ನ 8ನೇ ವರ್ಷದ ಹುಟ್ಟುಹಬ್ಬವನ್ನು ಇತ್ತೀಚೆಗೆ ತಂದೆಯ ಸಮಾಧಿ ಬಳಿ ಆಚರಿಸಿಕೊಂಡಿದ್ದಾಳೆ. ಸ್ಪಂದನ ತಂದೆ ಮಹೇಶ್ ಕೋನಸಾಗರ ಕಳೆದ ಮೇ ತಿಂಗಳಲ್ಲಿ ಕೊರೊನಾ ಸೋಂಕು ತಗುಲಿ ಮೃತಪಟ್ಟಿದ್ದರು. ಮಗಳು ತಂದೆಯ ಸಮಾಧಿ ಬಳಿ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಸ್ಪಂದನ ತಂದೆ ಮಹೇಶ್ ಸ್ನೇಹಜೀವಿಯಾಗಿದ್ದು, ಅನೇಕ ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದರು. ಆದರೆ ಮಹಾಮಾರಿ ಕೋವಿಡ್ ತಗುಲಿ, ಚೇತರಿಸಿಕೊಳ್ಳದೆ ಮೃತಪಟ್ಟಿದ್ದರು. ಪ್ರತಿ ವರ್ಷ ಮಗಳ ಜನ್ಮದಿನ ಆಚರಿಸುತ್ತಿದ್ದ ಅಪ್ಪ ಈ ಬಾರಿ ಜೊತೆಗಿರಲಿಲ್ಲ. ಬಾಲಕಿಯು ತನ್ನ ಅಪ್ಪನ ಜೊತೆ ತಾನು ಹುಟ್ಟಿದ ದಿನ ಕ್ಷಣವನ್ನು ಕಳೆಯಬೇಕೆಂದು ಮನೆಯವರ ಬಳಿ ಕೇಳಿಕೊಂಡಿದ್ದಳು. ಹೀಗಾಗಿ ಮನೆಯವರೆಲ್ಲ ಸೇರಿ ಮಗಳ ಆಸೆಯಂತೆ ಸಮಾಧಿ ಬಳಿ ತೆರಳಿ ಕೇಕ್ ಕತ್ತರಿಸಿ ಹುಟ್ಟುಹಬ್ಬ ಆಚರಿಸಿದ್ದಾರೆ. ಬಾಲಕಿಯು ಕೇಕ್ ಕಟ್ ಮಾಡಿ, ಭಾವುಕಳಾಗಿ ಸಮಾಧಿಗೆ ಅರ್ಪಿಸುತ್ತಿರುವ ವಿಡಿಯೋ ವೈರಲ್ ಆಗಿದೆ.
ಈ ಬಗ್ಗೆ ಮಾತನಾಡಿರುವ ಬಾಲಕಿ, ನನ್ನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದ ತನ್ನ ತಂದೆಗೆ ನಾನು ಮುಂದೊಂದು ದಿನ ದೊಡ್ಡ ಅಧಿಕಾರಿಯಾಗಬೇಕೆಂಬ ಆಸೆ ಇತ್ತು. ಅಲ್ಲದೆ ಅವರು ಹಲವು ಸಾಮಾಜಿಕ ಕಾರ್ಯಗಳಲ್ಲಿ ತೊಡಿಗಿಸಿಕೊಂಡಿದ್ದರು. ಅವರ ಆಸೆಯಂತೆ ತಾನು ಮುಂದೆ ಚೆನ್ನಾಗಿ ಓದಿ ಆಧಿಕಾರಿಯಾಗುತ್ತೇನೆ. ತಂದೆಯವರ ಸಾಮಾಜಿಕ ಕಳಕಳಿಯ ಮಾರ್ಗದಲ್ಲೇ ತಾನೂ ಮುನ್ನಡೆಯುತ್ತೇನೆ ಎನ್ನುತ್ತಾಳೆ ಬಾಲಕಿ ಸ್ಪಂದನ.
Koppal Little Girl Celebrating Birthday in Father Graveyard.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm