ಬ್ರೇಕಿಂಗ್ ನ್ಯೂಸ್
04-09-21 04:41 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.4 : ವಿದ್ಯುತ್ ಬಿಲ್ನಲ್ಲಿ ಉದ್ದೇಶಪೂರ್ವಕ ತಿದ್ದುಪಡಿ ಮಾಡಿ ಬೆಸ್ಕಾಂಗೆ ನಷ್ಟ ಉಂಟು ಮಾಡುತ್ತಿದ್ದ ಮೂವರು ಸಿಬ್ಬಂದಿಯನ್ನು ಇಂಧನ ಸಚಿವ ಸುನಿಲ್ ಕುಮಾರ್ ಸೇವೆಯಿಂದ ಅಮಾನತು ಮಾಡಿದ್ದಾರೆ.
ಮುಳಬಾಗಿಲು ಉಪ ವಿಭಾಗದ ಕಿರಿಯ ಸಹಾಯಕ ಮೆಹಬೂಬ್ ಪಾಷ, ಕಿರಿಯ ಸಹಾಯಕಿಯರಾದ ಗಾಯತ್ರಮ್ಮ ಹಾಗೂ ಸುಜಾತಮ್ಮ ಎಂಬವರೇ ಅಮಾನತುಗೊಂಡ ಸಿಬ್ಬಂದಿ. ಪ್ರತಿ ತಿಂಗಳು ಗ್ರಾಹಕರಿಗೆ ವಿದ್ಯುತ್ ಬಿಲ್ಲು ವಿತರಿಸುವ ವೇಳೆ ಕೆಲವು ಬಿಲ್ಗಳಲ್ಲಿ ತಿದ್ದುಪಡಿ ಮಾಡುವ ಮೂಲಕ ಬಿಲ್ ಮೊತ್ತವನ್ನು ಉದ್ದೇಶಪೂರ್ವಕ ಕಡಿಮೆ ಮಾಡಿದ್ದರು. ಆ ಮೂಲಕ ಬೆಸ್ಕಾಂಗೆ ಬರಬೇಕಾದ ಆದಾಯದಲ್ಲಿ ನಷ್ಟ ಉಂಟು ಮಾಡುತ್ತಿದ್ದರು.
ಇವರು ಬೇರೆ, ಬೇರೆ ಐಪಿ ವಿಳಾಸ ಹೊಂದಿರುವ ಗಣಕ ಯಂತ್ರಗಳಲ್ಲಿ ತಮ್ಮ ಐಡಿ ಉಪಯೋಗಿಸಿ ವಂಚನೆ ಎಸಗಿದ್ದರು. ಇದಲ್ಲದೆ, 8 ಆರ್ ಆರ್ ಸಂಖ್ಯೆಗಳಲ್ಲಿ ಒಟ್ಟು 4,44,966 ರೂ.ಗಳಷ್ಟು ಮೊತ್ತ ನಷ್ಟವಾಗಿತ್ತು. ಅದರಿಂದ ಇವರ ಮೇಲೆ ಇಲಾಖಾ ವಿಚಾರಣೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ. ಈ ಬಗ್ಗೆ ಕೋಲಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ತಾವು ಇಲಾಖೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ, ಅಕ್ರಮ ಎಸಗಿ ಆ ಮೂಲಕ ಇಲಾಖೆಗೆ ನಷ್ಟವುಂಟು ಮಾಡುವ ಯಾವುದೇ ಅಧಿಕಾರಿ, ಸಿಬ್ಬಂದಿ ಇರಲಿ ಅವರ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸುನಿಲ್ ಕುಮಾರ್ ಎಚ್ಚರಿಕೆ ಕೊಟ್ಟಿದ್ದಾರೆ.
Bangalore Current Minister suspends three employees of Bescom for fraudental activities
19-04-25 03:04 pm
HK Staff
Janivara, Shivamogga, Suspend: ಜನಿವಾರ ತೆಗೆಸಿದ...
19-04-25 12:24 pm
Bidar Cet Exam, Janivara issue: ಜನಿವಾರ ಹಾಕಿದ್...
18-04-25 05:38 pm
Tumkur, Tiptur, Kidnap, Protest: ಹಾಡಹಗಲೇ ಮಗಳ...
18-04-25 03:38 pm
Grace Ministry Bangalore, Budigere, Ark of th...
17-04-25 05:01 pm
18-04-25 02:21 pm
HK News Desk
ನ್ಯಾಷನಲ್ ಹೆರಾಲ್ಡ್ ಪ್ರಕರಣ ; ಸೋನಿಯಾ, ರಾಹುಲ್ ವಿರ...
16-04-25 03:54 pm
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
19-04-25 06:19 pm
Mangaluru Correspondent
Mangalore Waqf protest, Traffic ACP Najma Far...
19-04-25 04:24 pm
Mangalore Bappanadu Mukii, Chariot Collapses;...
19-04-25 10:51 am
Mangalore Waqf protest, Adyar, Police: ವಕ್ಫ್...
18-04-25 10:17 pm
Mangalore Waqf Protest, Adyar, Police, Live:...
18-04-25 12:54 pm
19-04-25 11:01 am
Bangalore Correspondent
ರಾಣಾ ಬಳಿಕ ಮತ್ತೊಬ್ಬ ಮೋಸ್ಟ್ ವಾಂಟೆಡ್ ಖಲೀಸ್ತಾನಿ ಉ...
19-04-25 10:55 am
Mangalore Kuthar, Ullal Gang Rape, Arrest: ಕು...
18-04-25 10:59 pm
Hyderabad Murder, Mother suicide: ತೆಂಗಿನಕಾಯಿ...
18-04-25 08:14 pm
Dead Baby Found, Garbage, Bangalore crime: ಅಪ...
18-04-25 03:41 pm