ಬ್ರೇಕಿಂಗ್ ನ್ಯೂಸ್
04-09-21 04:41 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.4 : ವಿದ್ಯುತ್ ಬಿಲ್ನಲ್ಲಿ ಉದ್ದೇಶಪೂರ್ವಕ ತಿದ್ದುಪಡಿ ಮಾಡಿ ಬೆಸ್ಕಾಂಗೆ ನಷ್ಟ ಉಂಟು ಮಾಡುತ್ತಿದ್ದ ಮೂವರು ಸಿಬ್ಬಂದಿಯನ್ನು ಇಂಧನ ಸಚಿವ ಸುನಿಲ್ ಕುಮಾರ್ ಸೇವೆಯಿಂದ ಅಮಾನತು ಮಾಡಿದ್ದಾರೆ.
ಮುಳಬಾಗಿಲು ಉಪ ವಿಭಾಗದ ಕಿರಿಯ ಸಹಾಯಕ ಮೆಹಬೂಬ್ ಪಾಷ, ಕಿರಿಯ ಸಹಾಯಕಿಯರಾದ ಗಾಯತ್ರಮ್ಮ ಹಾಗೂ ಸುಜಾತಮ್ಮ ಎಂಬವರೇ ಅಮಾನತುಗೊಂಡ ಸಿಬ್ಬಂದಿ. ಪ್ರತಿ ತಿಂಗಳು ಗ್ರಾಹಕರಿಗೆ ವಿದ್ಯುತ್ ಬಿಲ್ಲು ವಿತರಿಸುವ ವೇಳೆ ಕೆಲವು ಬಿಲ್ಗಳಲ್ಲಿ ತಿದ್ದುಪಡಿ ಮಾಡುವ ಮೂಲಕ ಬಿಲ್ ಮೊತ್ತವನ್ನು ಉದ್ದೇಶಪೂರ್ವಕ ಕಡಿಮೆ ಮಾಡಿದ್ದರು. ಆ ಮೂಲಕ ಬೆಸ್ಕಾಂಗೆ ಬರಬೇಕಾದ ಆದಾಯದಲ್ಲಿ ನಷ್ಟ ಉಂಟು ಮಾಡುತ್ತಿದ್ದರು.

ಇವರು ಬೇರೆ, ಬೇರೆ ಐಪಿ ವಿಳಾಸ ಹೊಂದಿರುವ ಗಣಕ ಯಂತ್ರಗಳಲ್ಲಿ ತಮ್ಮ ಐಡಿ ಉಪಯೋಗಿಸಿ ವಂಚನೆ ಎಸಗಿದ್ದರು. ಇದಲ್ಲದೆ, 8 ಆರ್ ಆರ್ ಸಂಖ್ಯೆಗಳಲ್ಲಿ ಒಟ್ಟು 4,44,966 ರೂ.ಗಳಷ್ಟು ಮೊತ್ತ ನಷ್ಟವಾಗಿತ್ತು. ಅದರಿಂದ ಇವರ ಮೇಲೆ ಇಲಾಖಾ ವಿಚಾರಣೆ ನಡೆಸಿ ಶಿಸ್ತು ಕ್ರಮ ಕೈಗೊಳ್ಳಲು ಆದೇಶಿಸಲಾಗಿದೆ. ಈ ಬಗ್ಗೆ ಕೋಲಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ ಎಂದು ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ತಾವು ಇಲಾಖೆಯಲ್ಲಿ ಯಾವುದೇ ರೀತಿಯ ಭ್ರಷ್ಟಾಚಾರವನ್ನು ಸಹಿಸುವುದಿಲ್ಲ, ಅಕ್ರಮ ಎಸಗಿ ಆ ಮೂಲಕ ಇಲಾಖೆಗೆ ನಷ್ಟವುಂಟು ಮಾಡುವ ಯಾವುದೇ ಅಧಿಕಾರಿ, ಸಿಬ್ಬಂದಿ ಇರಲಿ ಅವರ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಸುನಿಲ್ ಕುಮಾರ್ ಎಚ್ಚರಿಕೆ ಕೊಟ್ಟಿದ್ದಾರೆ.
Bangalore Current Minister suspends three employees of Bescom for fraudental activities
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm