ಬ್ರೇಕಿಂಗ್ ನ್ಯೂಸ್
04-09-21 05:48 pm Headline Karnataka News Network ಕರ್ನಾಟಕ
ಬೆಂಗಳೂರು, ಸೆ.4:ಇತ್ತೀಚಿನ ದಿನಗಳಲ್ಲಿ ವಿವಾದಕ್ಕೆ ಒಳಗಾಗುತ್ತಿರುವ ಸಂಚಾರ ಪೊಲೀಸರ ಟೋಯಿಂಗ್ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ವಾಹನ ಟೋಯಿಂಗ್ ಮಾಡುವಾಗ ನಿಯಮಗಳನ್ನು ಸರಿಯಾಗಿ ಪಾಲಿಸುವಂತೆ ಸೂಚಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಪಾರ್ಕಿಂಗ್ ನಿಯಮ ಉಲ್ಲಂಘನೆ ನೆಪದಲ್ಲಿ ವಾಹನಗಳ ಟೋಯಿಂಗ್ ಮಾಡುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ವಾಹನ ಸವಾರರಿಗೆ ಮುನ್ನೆಚ್ಚರಿಕೆ ನೀಡದೆ ಟೋಯಿಂಗ್ ಮಾಡಲಾಗುತ್ತಿದೆ. ಮಾಲೀಕರು ಅಲ್ಲಿಯೇ ಇದ್ದರೂ, ಮನವಿ ಮಾಡಿದರೂ ವಾಹನವನ್ನು ಬಿಡುತ್ತಿಲ್ಲ. ಅಲ್ಲದೆ, ವಾಹನವನ್ನು ಟೋಯಿಂಗ್ ಮಾಡುವಾಗ ಅದಕ್ಕೆ ಹಾನಿ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಅಲ್ಲದೆ, ವಾಹನ ಮಾಲೀಕರು ಹಾಗೂ ಟೋಯಿಂಗ್ ಸಿಬ್ಬಂದಿ ನಡುವೆ ವಾಗ್ವಾದ, ಸಂಘರ್ಷ ನಡೆದ ಅನೇಕ ಘಟನೆಗಳು ನಡೆದಿವೆ.

ಇನ್ನು ಮುಂದೆ ಟ್ರಾಫಿಕ್ ಪೊಲೀಸರು ವಾಹನ ಟೋಯಿಂಗ್ ಮಾಡುವ ಸಂದರ್ಭದಲ್ಲಿ ವಾಹನ ಮಾಲೀಕರು ಸ್ಥಳದಲ್ಲಿದ್ದರೆ ಅವರಿಂದ 'ನೋ ಪಾರ್ಕಿಂಗ್' ಶುಲ್ಕವನ್ನು ಮಾತ್ರ ವಸೂಲಿ ಮಾಡಬೇಕು ಹಾಗೂ ವಾಹನವನ್ನು ಅವರಿಗೆ ಅಲ್ಲಿಯೇ ಹಿಂದಿರುಗಿಸಬೇಕು ಎಂದು ಗೃಹ ಸಚಿವರು ಸೂಚನೆ ನೀಡಿದ್ದಾರೆ.
ಟೋಯಿಂಗ್ ಕ್ರಮದ ವೇಳೆ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಪೊಲೀಸರು ಎಚ್ಚರಿಗೆ ವಹಿಸಬೇಕು. ಟೋಯಿಂಗ್ ಸಿಬ್ಬಂದಿ ಸಾರ್ವಜನಿಕರ ಜತೆ ಸೌಜನ್ಯದಿಂದ ವರ್ತಿಸಬೇಕು. ವಾಹನಕ್ಕೆ ಹಾನಿ ಮಾಡಬಾರದು. ಜಾಗರೂಕತೆಯಿಂದ ಟೋಯಿಂಗ್ ಮಾಡಬೇಕು ಎಂದು ಅವರು ತಾಕೀತು ಮಾಡಿದ್ದಾರೆ.
ಟೋಯಿಂಗ್ ಮಾಡುವ ಮುನ್ನ ಅವರು ನೋ ಪಾರ್ಕಿಂಗ್ನಲ್ಲಿ ನಿಲ್ಲಿಸಿರುವುದನ್ನು ವಾಹನ ಮಾಲೀಕರ ಗಮನಕ್ಕೆ ತರಬೇಕು. ವಾಹನ ಮಾಲೀಕರ ಗಮನ ಸೆಳೆಯಲು ಸೈರನ್ ಅಥವಾ ಹಾರ್ನ್ ಮಾಡಬೇಕು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಮತ್ತು ಹೆಚ್ಚುವರಿ ಆಯುಕ್ತ (ಸಂಚಾರ) ರವಿಕಾಂತೇಗೌಡ ಅವರೊಂದಿಗೆ ನಡೆದ ಸಭೆಯಲ್ಲಿ ಆರಗ ಜ್ಞಾನೇಂದ್ರ ಸೂಚಿಸಿದ್ದಾರೆ.
Follow towing rules dont harass public Home minister Arag Jnanendra to Bengaluru traffic police
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm