ಬ್ರೇಕಿಂಗ್ ನ್ಯೂಸ್
06-09-21 09:44 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಸೆ.6 : ಅಜ್ಜಿ, ಮಗಳು, ಮೊಮ್ಮಗಳು ಸೇರಿದಂತೆ ಒಂದೇ ಕುಟುಂಬದ ಮೂವರು ಸಂಬಂಧಿಗಳು ನೇಣುಬಿಗಿದುಕೊಂಡು ಆತ್ಮಹತ್ಯೆ ಶರಣಾಗಿರುವ ದಾರುಣ ಘಟನೆ ಜಿಲ್ಲೆಯ ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಮಕ್ಕಿಮನೆ ಗ್ರಾಮದಲ್ಲಿ ವರದಿಯಾಗಿದೆ.
ಆತ್ಮಹತ್ಯೆ ಶರಣಾದವರನ್ನು ಮಕ್ಕಿಮನೆ ಗ್ರಾಮದ ಶಾರದಾ (70), ವೀಣಾ(49) ಹಾಗೂ ಶ್ರಾವ್ಯಾ(16) ಎಂದು ತಿಳಿದು ಬಂದಿದ್ದು, ವೃದ್ಧೆ ಶಾರದಾ ಅವರು ತನ್ನ ಮಗಳು ವೀಣಾ ಹಾಗೂ ಮೊಮ್ಮಗಳೊಂದಿಗೆ ಮನೆಯ ಒಂದೇ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದು ಬಂದಿದೆ.

ಶಾರದಾ ಅವರ ಮಗಳು ವೀಣಾ ಅವರು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಶಿಕ್ಷಕಿಯಾಗಿದ್ದು, ಮಗಳು ಶ್ರಾವ್ಯಾ ಎಸೆಸೆಲ್ಸಿ ಒದುತ್ತಿದ್ದಳು. ಸೋಮವಾರ ಬೆಳಗ್ಗೆ ಅಂಗನವಾಡಿ ಕೇಂದ್ರದ ಆಯಾ ಪೂರ್ಣಿಮಾ ಎಂಬವರು ಶಿಕ್ಷಕಿ ವೀಣಾ ಅವರಿಗೆ ಎಷ್ಟೇ ಕರೆ ಮಾಡಿದರೂ ಕರೆ ಸ್ವೀಕರಿಸಿರಲಿಲ್ಲ. ಇದರಿಂದ ಅನುಮಾನಗೊಂಡ ಗ್ರಾಮಸ್ಥರು ಶಿಕ್ಷಕಿ ವೀಣಾ ಅವರ ಮನೆಗೆ ಬಂದು ಪರಿಶೀಲಿಸಿದ್ದಾರೆ. ಈ ವೇಳೆ ಮನೆಯ ಒಳಗಿನಿಂದ ಚಿಲಕ ಹಾಕಿದ್ದನ್ನು ಗಮನಿಸಿದ ಸ್ಥಳೀಯರು ಎಷ್ಟೇ ಕರೆದರೂ ಪ್ರತಿಕ್ರಿಯೆ ಬಾರದ್ದನ್ನು ಕಂಡು ಮನೆಯ ಹೆಂಚು ತೆಗೆದು ನೋಡಿದಾಗ ವೀಣಾ ಸೇರಿದಂತೆ ತಾಯಿ ಶಾರದಾ, ಮಗಳು ಶ್ರಾವ್ಯಾ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.
ಘಟನೆ ನಡೆದ ಸಂದರ್ಭದಲ್ಲಿ ವೀಣಾ ಅವರ ಪತಿ ಸುಧಾಕರ್ ಮನೆಯಲ್ಲಿರಲಿಲ್ಲ ಎಂದು ತಿಳಿದು ಬಂದಿದ್ದು, ಸುದ್ದಿ ತಿಳಿದ ಶೃಂಗೇರಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.
ಘಟನೆ ಸಂಬಂಧ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಆತ್ಮಹತ್ಯೆಯೋ, ಕೊಲೆಯೊ ಎಂಬ ಬಗ್ಗೆ ತನಿಖೆ ಆರಂಭಿಸಿದ್ದು, ವೀಣಾ ಪತಿ ಸುಧಾಕರ್ ಅವರ ವಿಚಾರಣೆ ನಡೆಸಿದ್ದಾರೆಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.
Chikmagalur family of three commit suicide at home. Police suspect murder, husband introgarted.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 09:44 pm
Mangalore Correspondent
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm