ಬ್ರೇಕಿಂಗ್ ನ್ಯೂಸ್
07-09-21 11:45 am Headline Karnataka News Network ಕರ್ನಾಟಕ
ಮೈಸೂರು, ಸೆ.7 : ಮುಂದಿನ ಚುನಾವಣೆ ಯಾರ ನಾಯಕತ್ವದಲ್ಲಿ ನಡೆಯಬೇಕು ಅನ್ನೋದನ್ನು ಪಕ್ಷ ತೀರ್ಮಾನ ಮಾಡುತ್ತೆ. ಅದರ ಬಗ್ಗೆ ಈಗಲೇ ಚರ್ಚೆ ಮಾಡುವ ಅಗತ್ಯ ಇಲ್ಲ ಎಂದು ಉನ್ನತ ಶಿಕ್ಷಣ ಡಾ.ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಯಾವುದೇ ಪಕ್ಷದಲ್ಲಿ ಯಾರು ನಾಯಕ ಸ್ಥಾನದಲ್ಲಿ ಇರುತ್ತಾರೋ ಅವರ ಮುಂದಾಳತ್ವದಲ್ಲಿ ಎಲ್ಲ ನಡೆದುಕೊಂಡು ಹೋಗುತ್ತೆ. ಈಗ ಬೊಮ್ಮಾಯಿ ಸಿಎಂ ಇದ್ದಾರೆ, ಅಧ್ಯಕ್ಷರು ಕಟೀಲ್ ಇದ್ದಾರೆ. ಅವರ ಮುಂದಾಳತ್ವದಲ್ಲಿ ಪಕ್ಷ ನಡೆಯುತ್ತಿದೆ. ಮುಂದಿನ ಚುನಾವಣೆ ಯಾರ ನಾಯಕತ್ವದಲ್ಲಿ ನಡೆಯಬೇಕು ಅನ್ನೋದನ್ನು ಪಕ್ಷ ತೀರ್ಮಾನ ಮಾಡುತ್ತದೆ. ಅದರ ಚರ್ಚೆ ಈಗ ಬೇಡ ಎನ್ನುವ ಮೂಲಕ ಸಚಿವ ಅಶ್ವತ್ಥ ನಾರಾಯಣ ಅಡ್ಡಗೋಡೆ ಮೇಲೆ ದೀಪ ಇಟ್ಟ ರೀತಿ ಮಾತನಾಡಿದ್ದಾರೆ. ಇತ್ತೀಚೆಗೆ ರಾಜ್ಯಕ್ಕೆ ಬಂದಿದ್ದ ಅಮಿತ್ ಷಾ, ಬೊಮ್ಮಾಯಿ ನೇತೃತ್ವದಲ್ಲಿಯೇ ಮುಂದಿನ ಚುನಾವಣೆ ಎನ್ನುವ ಮೂಲಕ ನಾಯಕ ಮಣಿಗಳ ತಲೆಗೆ ಹುಳ ಬಿಟ್ಟಿದ್ದರು.


ರಾಷ್ಟ್ರೀಯ ಶಿಕ್ಷಣ ನೀತಿಗೆ ಜಾರಿ ವಿಚಾರದಲ್ಲಿ ಪ್ರತಿಕ್ರಿಯಿಸಿದ ಅವರು, ಎನ್ಇಪಿ ಪ್ರಸಕ್ತ ಸಾಲಿನಿಂದಲೇ ಜಾರಿಯಾಗಲಿದೆ. ಈ ನೀತಿ ಸಂಪೂರ್ಣ ಅನುಷ್ಠಾನಕ್ಕೆ 15 ವರ್ಷ ಕಾಲಾವಕಾಶ ಇದೆ. ಈ ಬಗ್ಗೆ ಏಳೆಂಟು ವರ್ಷದಿಂದಲೇ ಚರ್ಚೆಯಲ್ಲಿದೆ. ಹಾಗಾಗಿ ಮತ್ತೆ ಅಭಿಪ್ರಾಯ ಸಂಗ್ರಹ ಅಗತ್ಯವಿಲ್ಲ. ಈ ವಿಚಾರದಲ್ಲಿ ಕಾಂಗ್ರೆಸ್ ಅನಗತ್ಯ ಗೊಂದಲ ಸೃಷ್ಠಿ ಮಾಡ್ತಿದೆ. ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಹಿಂದುಳಿದ ವರ್ಗ ಸೇರಿ ಎಲ್ಲರ ಅಭಿವೃದ್ಧಿ ಸಾಧ್ಯ ಇದೆ. ಕಾಂಗ್ರೆಸ್ ಗೆ ಯಾವುದೇ ಅಭಿವೃದ್ಧಿ ಬೇಕಾಗಿಲ್ಲ. ಹೀಗಾಗಿಯೇ ಅವರು ಅನಗತ್ಯ ಹೊಂದಲ ಸೃಷ್ಠಿ ಮಾಡಿ ವಿರೋಧ ಮಾಡ್ತಿದ್ದಾರೆ ಎಂದು ಹೇಳಿದ್ದಾರೆ.
ಆಫ್ಗನ್ ವಿದ್ಯಾರ್ಥಿಗಳ ವೀಸಾ ವಿಸ್ತರಣೆ ವಿಚಾರವನ್ನು ವಿದೇಶಾಂಗ ಇಲಾಖೆ, ಅದರ ಸಚಿವರು ನೋಡಿಕೊಳ್ತಾರೆ. ವೀಸಾ ಅವಧಿ ಮುಗಿದವರು ಅರ್ಜಿ ಹಾಕಿಕೊಳ್ಳಲಿ. ಅದನ್ನು ವಿದೇಶಾಂಗ ಇಲಾಖೆಯವರು ಪರಿಶೀಲನೆ ಮಾಡ್ತಾರೆ. ನಾವು ಯಾರಿಗೂ ತಿಂಗಳ ಅವಧಿಗೆ ವೀಸಾ ಕೊಡೋದಿಲ್ಲ. ಶೈಕ್ಷಣಿಕ ಅವಧಿಗೆ ಅಂತ ವೀಸಾ ಪಡೆದುಕೊಂಡಿರುತ್ತಾರೆ. ಇದರಲ್ಲಿ ನಾವು ತಲೆ ತೂರಿಸುವ ಪ್ರಮೇಯ ಇಲ್ಲ ಎಂದು ಹೇಳಿದರು.
The party will decide on the next election DCM Dr Ashwaththa Narayana.
02-03-26 09:19 pm
HK News Staffer
ಗಲ್ಫ್ ಯುದ್ಧ; ಬಳ್ಳಾರಿಯಿಂದ ದುಬೈ ಟೂರ್ ತೆರಳಿದ್ದ 5...
01-03-26 09:20 pm
ಅಯತೊಲ್ಲಾ ಖಮೇನಿ ಹತ್ಯೆ ; ಚಿಕ್ಕಬಳ್ಳಾಪುರದ ಅಲೀಪುರದ...
01-03-26 05:16 pm
ಮಡಿಕೇರಿ ; ಕಾಡಾನೆ ದಾಳಿಗೆ ಪಿಯುಸಿ ವಿದ್ಯಾರ್ಥಿನಿ ಬ...
01-03-26 04:59 pm
ರಾಜ್ಯ ಮುಸ್ಲಿಮರಿಗೆ ಸ್ವರ್ಗ, ಹಿಂದುಗಳಿಗೆ ನರಕವಾಗಿದ...
01-03-26 04:56 pm
02-03-26 09:23 pm
HK News Staffer
ಇರಾನ್ ಸಂಘರ್ಷ ; ಸುಪ್ರೀಂ ಲೀಡರ್ ಆಗಿ ನೇಮಿಸಲ್ಪಟ್ಟ...
02-03-26 06:51 pm
ಖಮೇನಿ ಹತ್ಯೆಗೆ ಕಾಶ್ಮೀರದಲ್ಲಿ ಬೀದಿಗಿಳಿದ ಶಿಯಾಗಳು...
02-03-26 03:10 pm
ಇರಾನ್ ಸಂಘರ್ಷ; ಭಾರತದಲ್ಲಿ ಹಿಂಸಾಚಾರ ಸಾಧ್ಯತೆ, ತುರ...
02-03-26 02:26 pm
ಮಧ್ಯಪ್ರಾಚ್ಯ ಯುದ್ಧ ಎಫೆಕ್ಟ್ ; ಸೆನ್ಸೆಕ್ಸ್ 1,000...
02-03-26 01:34 pm
02-03-26 10:06 pm
HK News Staffer
ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆಂದು ಪ್ರಚ...
02-03-26 07:57 pm
'ಬೊಲ್ಪು’ ಯೋಜನೆಯಡಿ 11 ಸ್ಟಾರ್ಟಪ್ಗಳ ಆಯ್ಕೆ ; ಭಾವ...
01-03-26 08:37 pm
PSI Nasir Hussain: ಉಡುಪಿ ; ಮ್ಯಾರಥಾನಲ್ಲಿ ಪಾಲ್ಗ...
01-03-26 04:07 pm
ಹುಲಿಕಲ್ ಘಾಟಿಯಲ್ಲಿ ದುರ್ಗಾಂಬಾ ಬಸ್ ಗೆ ಬೆಂಕಿ ; ಕು...
28-02-26 08:53 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm