ಬ್ರೇಕಿಂಗ್ ನ್ಯೂಸ್
09-09-21 04:27 pm Headline Karnataka News Network ಕರ್ನಾಟಕ
ತಿರುವನಂತಪುರಂ, ಸೆ.9 : ಕೊರೊನಾ ಸೋಂಕು ಮೊದಲ ಬಾರಿಗೆ ಕಾಣಿಸಿಕೊಂಡಿದ್ದಾಗ ಯಶಸ್ವಿಯಾಗಿ ನಿರ್ವಹಿಸಿ ಗಮನ ಸೆಳೆದಿದ್ದ ಕೇರಳ ಸರ್ಕಾರ ಎರಡನೇ ಅಲೆಯಲ್ಲಿ ಎಡವಟ್ಟು ಮಾಡಿಕೊಂಡು ಟೀಕೆಗೆ ಗುರಿಯಾಗಿದೆ. ರಾಜ್ಯದಲ್ಲಿ ಇಡೀ ದೇಶದಲ್ಲೇ ಅತಿ ಹೆಚ್ಚು ಸೋಂಕು ಕಂಡುಬರುತ್ತಿದ್ದು ನಿಯಂತ್ರಣ ಮಾಡಲಾಗದೆ ಇಕ್ಕಟ್ಟಿಗೆ ಬಿದ್ದಿದೆ.
ರಾಜ್ಯದಲ್ಲಿ ಪ್ರತಿದಿನ 30 ಸಾವಿರ ಪ್ರಕರಣ ದಾಖಲಾಗುತ್ತಿದ್ದು, ಪಾಸಿಟಿವ್ ದರ ಶೇ.15ಕ್ಕಿಂತ ಹೆಚ್ಚಿದ್ದರೂ ರಾಜ್ಯಾದ್ಯಂತ ಶಾಲೆ, ಕಾಲೇಜುಗಳನ್ನುತೆರೆಯಲು ನಿರ್ಧರಿಸಿದ್ದು ತೀವ್ರ ಟೀಕೆಗೆ ಗುರಿಯಾಗಿದೆ. ಬುಧವಾರ ಕೂಡ ಕೇರಳದಲ್ಲಿ 30,196 ಕೊರೊನಾ ಪ್ರಕರಣಗಳು ದಾಖಲಾಗಿದ್ದು, 181 ಮಂದಿ ಸಾವಿಗೀಡಾಗಿದ್ದಾರೆ. ಹೀಗಿದ್ದರೂ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳನ್ನು ಅಕ್ಟೋಬರ್ 4 ರಿಂದ ಆರಂಭಿಸುವುದಾಗಿ ಹೇಳಿಕೊಂಡಿದೆ.


ಈ ಬಗ್ಗೆ ಮಾಹಿತಿ ನೀಡಿರುವ ಸಿಎಂ ಪಿಣರಾಯಿ ವಿಜಯನ್, ಅಂತಿಮ ವರ್ಷದ ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳಿಗಾಗಿ ಅಕ್ಟೋಬರ್ 4 ರಿಂದ ಕಾಲೇಜುಗಳನ್ನು ಹಾಗೂ ವಿವಿಗಳನ್ನು ಆರಂಭಿಸುತ್ತಿದ್ದೇವೆ ಎಂದಿದ್ದಾರೆ.
ಕೇರಳದಲ್ಲಿ ಬಕ್ರೀದ್ ಹಾಗೂ ಓಣಂ ಹಬ್ಬಕ್ಕೆ ಕೋವಿಡ್ ನಿಯಮಗಳನ್ನು ಸಡಿಲಗೊಳಿಸಲಾಗಿತ್ತು. ಇದಾದ ಬಳಿಕ ಭಾರೀ ಪ್ರಮಾಣದಲ್ಲಿ ಕೋವಿಡ್ ಸೋಂಕು ಸ್ಫೋಟಗೊಂಡಿತ್ತು. ಹೀಗಾಗಿ ವೀಕೆಂಡ್ ಕರ್ಫ್ಯೂ ಹಾಗೂ ನೈಟ್ ಕರ್ಫ್ಯೂ ಜಾರಿಗೊಳಿಸಲಾಗಿತ್ತು. ಇದರಿಂದ ಆರ್ಥಿಕತೆಗೆ ಭಾರೀ ಹೊಡೆತ ಬಿದ್ದಿದ್ದು, ಹೀಗಾಗಿ ಕರ್ಫ್ಯೂ ಆದೇಶವನ್ನು ರದ್ದುಗೊಳಿಸಿತ್ತು. ಇದರ ಬೆನ್ನಲ್ಲೇ ಕಾಲೇಜು ತೆರೆಯುವ ನಿರ್ಧಾರ ಪ್ರಕಟಿಸಿದೆ.
Kerala Government Decides to Reopen Colleges and Universities Despite Covid Spike.
16-01-26 09:38 pm
Bangalore Correspondent
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
ಕೆಲಸದ ಒತ್ತಡ ; ಮಕ್ಕಳಿಗೆ ಪಾಠ ಮಾಡಿ ಶಾಲಾ ಕೊಠಡಿಯಲ್...
15-01-26 05:56 pm
ಧರ್ಮಸ್ಥಳ ಎಸ್ಐಟಿ ತನಿಖೆ ; ತನಿಖೆಯ ಮಾಹಿತಿ ಕೇಳಿ ಸರ...
14-01-26 03:34 pm
ಆನೆ ದಂತದಿಂದ ಮಾಡಲ್ಪಟ್ಟ ರಾಧಾ ಕೃಷ್ಣರ ವಿಗ್ರಹ ಮಾರಾ...
14-01-26 02:54 pm
16-01-26 06:33 pm
HK News Desk
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
ಆಂತರಿಕ ದಂಗೆಯಲ್ಲಿ ಬೆಂದು ಹೋದ ಇರಾನ್ ; 12 ಸಾವಿರಕ್...
14-01-26 10:08 pm
ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂ...
13-01-26 06:39 pm
16-01-26 09:44 pm
Mangalore Correspondent
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
ಡಿಮಾರ್ಟ್ ಶಾಪಿಂಗ್ ಮಾಲ್ ನಲ್ಲಿ ಉದ್ಯೋಗಾವಕಾಶ ಜಾಹಿರ...
16-01-26 12:31 pm
ಲಕ್ಕಿ ಸ್ಕೀಮ್ ಕಂಪೆನಿಗಳಿಗೆ ಬೀಗ ಜಡಿಯಿರಿ ; ನೂರಕ್ಕ...
15-01-26 10:24 pm
ಗೋ ಸೇವೆಗೆ ಜನಸಾಮಾನ್ಯರು ಕೊಡುಗೆ ನೀಡಲು ವೇದಿಕೆ ; ಕ...
15-01-26 10:07 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm